Homeಅಂಕಣಗಳುಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ'

ಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ’

- Advertisement -
- Advertisement -

ನಂದಿನಿ, 17 ವರ್ಷದ ಯುವತಿ. ತಮಿಳುನಾಡಿನ ಅರಿಯೂರು ಜಿಲ್ಲೆಯ ಸಿರುಕಡಂಬೂರ್ ಎಂಬ ಹಳ್ಳಿಯ ದಲಿತ ಸಮುದಾಯ ಪರೈಯ್ಯಾ ಕುಟುಂಬದ ಯುವತಿ. ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ದಲಿತರ ಕಾಲೋನಿಗಳು ಕಣ್ಣಿಗೆ ಎದ್ದು ಕಾಣುವಂತೆಯೇ ಇರುತ್ತವೆ. ಸಿರುಕಡಂಬೂರಿನ ದಲಿತರ ಕಾಲೋನಿಯೂ ಹಾಗೆಯೇ ಇತ್ತು. ಈ ವಿದ್ಯಮಾನ ಇಡೀ ಭಾರತಕ್ಕೆ ಅನ್ವಯಿಸುತ್ತದೆ ಬಿಡಿ. ನಂದಿನಿ ಓದಿದ್ದು 8ನೇ ತರಗತಿಯವರೆಗೆ ಮಾತ್ರ. ಕುಟುಂಬದ ಕಡುಬಡತನ ಹೆಚ್ಚು ಓದಲು ಅವಳಿಗೆ ಬಿಡಲಿಲ್ಲ. ಹಾಗಾಗಿ ಶಾಲೆಯನ್ನು ಬಿಟ್ಟವಳೇ ಕಟ್ಟಡ ಕಾರ್ಮಿಕಳಾಗಿ ಕೆಲಸ ಮಾಡಲು ಆರಂಭಿಸಿದಳು. ಹಾಸ್ಯಭರಿತ ಮಾತು ಹಾಗು ಚುರುಕು ಬುದ್ಧಿಯಿಂದಾಗಿ ಅವಳು ಕೆಲಸ ಮಾಡುವ ಜಾಗದಲ್ಲಿಯೂ ಹೆಸರುವಾಸಿಯಾಗಿದ್ದಳು.

ಹೀಗಿದ್ದ ನಂದಿನಿ ದಿನಾಂಕ 29, ಡಿಸೆಂಬರ್ 2016ರಂದು ದಿಢೀರನೇ ಕಣ್ಮರೆಯಾದಳು. ಆ ದಿನ ಸಂಜೆ ನಂದಿನಿಯ ಸಂಬಂಧಿಕರೊಬ್ಬರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ’ನಂದಿನಿ ತನ್ನ ಬಳಿ ಇದ್ದಾಳೆ’ ಎಂದು ಹೇಳಿದ್ದ. ಗಾಬರಿಗೊಂಡ ನಂದಿನಿ ಕುಟುಂಬ ಪೊಲೀಸರಿಗೆ ದೂರು ನೀಡಿತು. ದೂರಿನಲ್ಲಿ ಮಣಿಕಂಠನ್ ಎಂಬ ವಣ್ಣಿಯಾರ್ ಹಿಂದೂ ಮೇಲ್ಜಾತಿಗೆ ಸೇರಿದ್ದ ವ್ಯಕ್ತಿಯ ವಿರುದ್ಧ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಈ ಮಣಿಕಂಠನ್ ’ಹಿಂದೂ ಮುನ್ನಾಣಿ’ ಸಂಘಟನೆಯ ಕಾರ್ಯದರ್ಶಿಯಾಗಿದ್ದನು. ಹಿಂದೂ ಮುನ್ನಾಣಿ ಸಂಘಟನೆಯನ್ನು 1980ರಲ್ಲಿ ’ರಾಷ್ಟ್ರೀಯ ಸ್ವಯಂಸೇವಕ ಸಂಘ’ದ ರಾಮಗೋಪಾಲನ್ ಅವರು ಸ್ಥಾಪಿಸಿದ್ದರು. ಈಗದು ಹಿಂದೂ ರಾಷ್ಟ್ರವನ್ನು ಪ್ರತಿಪಾದಿಸುವ ಸಂಘಪರಿವಾರದ ಭಾಗವಾಗಿದೆ.

ದೂರು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಲು ಆರಂಭಿಸಿದರು. ಅಪ್ರಾಪ್ತೆ ನಂದಿನಿ ಕಾಣೆಯಾಗಿದ್ದ ಕಾರಣ ’ಮಿಸ್ಸಿಂಗ್ ಕಂಪ್ಲೇಂಟ್’ ದಾಖಲಿಸಿಕೊಂಡಿದ್ದರು. ವಿಚಾರಣೆಯ ವೇಳೆ ನಂದಿನಿಯ ಆಪ್ತ ಸ್ನೇಹಿತೆಯಾಗಿದ್ದ ದೇವಿಯೂ ಮಣಿಕಂಠನ ಹೆಸರನ್ನು ಪ್ರಸ್ತಾಪಿಸಿದಳು. ಅಷ್ಟೇ ಅಲ್ಲದೇ ನಂದಿನಿ ಮತ್ತು ಮಣಿಕಂಠನ್ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದುದಾಗಿ ಹಾಗೂ ಇತ್ತೀಚೆಗೆ ನಂದಿನಿ ’ತಾನು ಗರ್ಭಿಣಿ’ ಆಗಿರುವುದಾಗಿಯೂ ಹೇಳಿಕೊಂಡಿದ್ದಳೆಂದು ದೇವಿ ತಿಳಿಸಿದಳು. ಈ ಕಾರಣವಾಗಿ ದಿನಾಂಕ 5, ಜನವರಿ 2017ರಂದು ಮಣಿಕಂಠನ ವಿಚಾರಣೆಯನ್ನು ಪೊಲೀಸರು ಮಾಡಿದ್ದರು. ಅಂದು ಸಂಜೆಯ ವೇಳೆಗಾಗಲೇ ವಣ್ಣಿಯಾರ್ ಸಮುದಾಯದ ಹಿರಿಯರು ಆತನನ್ನು ಮನೆಗೆ ಕರೆದುಕೊಂಡು ಹೋದರು. ಈ ಘಟನೆಯಾದ ಮಾರನೇ ದಿನದಿಂದ ಮಣಿಕಂಠನ್ ನಾಪತ್ತೆಯಾದನು. ಆತನ ಮೇಲಿದ್ದ ಕುಟುಂಬದವರ ಅನುಮಾನ ನಿಜವಾಗಿತ್ತು. ಪೊಲೀಸರು ಮಣಿಕಂಠನ ಪತ್ತೆಗಾಗಿ ಶೋಧಿಸತೊಡಗಿದರು.

ಇದಾದ ವಾರದ ನಂತರ ಮಣಿಕಂಠನ್ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದನು. ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಣಿಕಂಠನ್‌ನನ್ನು ಪರಿಚಿತರು ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖನಾದ ಮಣಿಕಂಠನ್ ಪೊಲೀಸರ ಬಳಿ ಬಾಯಿಬಿಟ್ಟ ವಿಷಯ ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದರು. ಹಿಂದೂರಾಷ್ಟ್ರ ಚಿಂತನೆಯಲ್ಲಿ ಬೆಳೆದುಬಂದ ಮಣಿಕಂಠನೊಳಗಿದ್ದ ಮಾನವ ವಿರೋಧಿ ಜಾತಿಪದ್ಧತಿಯ ಕರಾಳ ಮುಖವನ್ನು ನೋಡಿ ಪೊಲೀಸರಷ್ಟೇ ಅಲ್ಲ, ಇಡೀ ತಮಿಳುನಾಡು ಬೆಚ್ಚಿಬಿದ್ದಿತು.

ನಂದಿನಿ ಕೆಲಸ ಮಾಡುತ್ತಿದ್ದ ಕಟ್ಟಡದ ಉಸ್ತುವಾರಿ ಹೊತ್ತಿದ್ದವನು ಮಣಿಕಂಠನ್. ಅಲ್ಲಿ ಅವರಿಬ್ಬರ ನಡುವೆ ಸಲುಗೆ ಬೆಳೆದು ಮಣಿಕಂಠನ ಪ್ರೀತಿಯೆಂಬ ನಾಟಕಕ್ಕೆ ತಲೆದೂಗಿದ್ದ ನಂದಿನಿ ಮೈಮನಸ್ಸನ್ನು ಒಪ್ಪಿಸಿದ್ದಳು. ಇದರಿಂದಾಗಿ ಗರ್ಭಿಣಿಯಾಗಿದ್ದ ನಂದಿನಿ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಕ್ಕೆ ’ಮೊದಲು ಗರ್ಭಪಾತ ಮಾಡಿಸಿಕೋ’ ಎಂದು ತಾಕೀತು ಮಾಡಿದ್ದ ಮಣಿಕಂಠನ್. ಅವಳೆಷ್ಟೇ ಬೇಡಿಕೊಂಡರೂ ಅದಕ್ಕೆ ಮಣಿಯದ ಮಣಿಕಂಠನ್ ಗರ್ಭಪಾತವಾದ ನಂತರವೇ ಮದುವೆ ಎಂದು ಹೇಳಿದ್ದನಾದರೂ ಅದಕ್ಕೆ ಒಪ್ಪಿಕೊಳ್ಳದ ನಂದಿನಿ ಇದ್ದ ವಿಷಯವನ್ನು ತನ್ನ ಆಪ್ತರೊಂದಿಗೆ ಹೇಳಿದ್ದಳು. ಇದನ್ನು ಸಹಿಸದ ಮಣಿಕಂಠನ್ ದಿನಾಂಕ 29, ಡಿಸೆಂಬರ್ 2016ರಂದು ನಂದಿನಿಯನ್ನು ಹೊರಗಡೆ ಭೇಟಿಯಾಗುವಂತೆ ತಿಳಿಸಿದ್ದ; ನಂದಿನಿ ಭೇಟಿ ಮಾಡಲು ಬಂದಾಗ ತನ್ನ ಮೂವರು ಸ್ನೇಹಿತರೊಡನೆ ಆಕೆಯನ್ನ ಅಪಹರಿಸಿದ್ದನು. ಮೂರು ದಿನಗಳ ನಂತರ ನಂದಿನಿಯ ಮೇಲೆ ಮೃಗಗಳಂತೆ ಎರಗಿದ ನಾಲ್ವರು ಗಂಡು ಪಿಶಾಚಿಗಳು ಒಬ್ಬರಾದ ಮೇಲೊಬ್ಬರಂತೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ನಿತ್ರಾಣಳಾಗಿ ಬಿದ್ದಿದ್ದ ನಂದಿನಿಯ ಜನನಾಂಗವನ್ನು ಬ್ಲೇಡಿನಿಂದ ಕೊಯ್ದು ಅವಳ ಗರ್ಭಕ್ಕೆ ಕೈ ಹಾಕಿ ಭ್ರೂಣವನ್ನು ಹೊರತೆಗೆದು ಬಿಸಾಡಿದರು. ಪ್ರಜ್ಞೆ ತಪ್ಪಿದ್ದ ನಂದಿನಿ ರಕ್ತಸ್ರಾವದಿಂದ ಅಲ್ಲಿಯೇ ಕೊನೆಯುಸಿರೆಳೆದಿದ್ದಳು. ಇಂತಹ ಭೀಕರ ಕೃತ್ಯವೆಸಗಿದ ಮಣಿಕಂಠನ್ ಮತ್ತು ಮೂವರು ಸ್ನೇಹಿತರು ಆಕೆಯ ದೇಹವನ್ನು ಸಂಪೂರ್ಣ ಬೆತ್ತಲೆಗೊಳಿಸಿ, ಆಭರಣವನ್ನು ಕಸಿದುಕೊಂಡು ಕೈಗಳನ್ನು ಕಟ್ಟಿ ಕಾಲಿಗೆ ಕಲ್ಲುಕಟ್ಟಿ ಬಾವಿಯೊಂದರಲ್ಲಿ ಬಿಸಾಕಿಬಿಟ್ಟಿದ್ದರು. ಯಾರಿಗೂ ವಾಸನೆಯಿಂದ ಅನುಮಾನ ಬರಬಾರದೆಂದು ನಾಯಿಯೊಂದನ್ನು ಕೊಂದು ಅದೇ ಬಾವಿಗೆ ಎಸೆದಿದ್ದರು. ಜನವರಿ 14ರಂದು ಪೊಲೀಸರು ಬಾವಿಯನ್ನು ಶೋಧಿಸಿ ನಂದಿನಿಯ ಕೊಳೆತ ದೇಹವನ್ನು ಹೊರತೆಗೆದಿದ್ದರು. ಕ್ರೂರಿ ಮಣಿಕಂಠನ್ ಮತ್ತು ಆತನ ಸ್ನೇಹಿತರು ಇಂದು ಜೈಲಿನಲ್ಲಿದ್ದಾರೆ.

ಈ ಇಡೀ ಪ್ರಕರಣ ತಿಳಿಸುವ ಸತ್ಯವೇನೆಂದರೆ ಹಿಂದೂರಾಷ್ಟ್ರ ಪ್ರತಿಪಾದಕರು ಆಳದಲ್ಲಿ ಜಾತಿವಾದಿಗಳೇ ಆಗಿದ್ದು ಮುಸ್ಲಿಮರ ವಿರುದ್ಧದ “ದ್ವೇಷ ಸಾಧಿಸಿ” ಸೆಣಸಾಡಲು ಮಾತ್ರ ಹಿಂದುತ್ವ ಶಕ್ತಿಗಳಿಗೆ ದಲಿತರು ಬೇಕೆಂದೂ, ಮದುವೆಯಾಗಲು ದಲಿತರು ಯಾವುದೇ ಕಾರಣಕ್ಕೆ ಬೇಡವೆಂಬುದನ್ನು! ಇವರೊಳಗಿನ ಜಾತಿಪ್ರಜ್ಞೆ ಅದೆಷ್ಟರಮಟ್ಟಿಗೆ ಆಳದಲ್ಲಿ ಹುದುಗಿದೆಯೆಂದರೆ ದಲಿತ ಹೆಣ್ಣಿನ ಗರ್ಭದಲ್ಲಿರುವ ತಮ್ಮ ಭ್ರೂಣವನ್ನೂ ಕೊಲ್ಲುವಷ್ಟು! ಹಿಂದೂಗಳ ದೃಷ್ಟಿಯಲ್ಲಿ ದಲಿತರೆಂದಿಗೂ ಹಿಂದೂಗಳಾಗಲು ಸಾಧ್ಯವೇ ಇಲ್ಲ. ಯಾರು ಏನೇ ಹೇಳಿದರೂ ಇದೇ ಸತ್ಯವೆಂದು ಪದೇಪದೇ ಸಾಬೀತಾಗುತ್ತಿದೆ. ದುರಂತವೆಂದರೆ ದಲಿತರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪದೇಪದೇ ಎಡವುತ್ತಲೇ ಇದ್ದಾರೆ.


ಇದನ್ನೂ ಓದಿ: ಮಾತು ಮರೆತ ಭಾರತ-24; ಧರ್ಮಾಪುರಿ ಫೈಲ್: ಒಂದು ದುರಂತ ಪ್ರೇಮಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...