Homeಮುಖಪುಟಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಹಸಿವಿನಿಂದ ಅಸಂಖ್ಯಾತ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಸರಿಯೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಸರ್ಕಾರಿ ನೌಕರರು ನವೆಂಬರ್ ತಿಂಗಳಿನಲ್ಲಿ ದೇಣಿಗೆ ನೀಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು ತಿಳಿಸಿದ್ದಾರೆ.

ಸರ್ಕಾರಿ ನೌಕರರು ಮತ್ತು ನಿಗಮ ಮಂಡಳಿಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದ 9.5 ಲಕ್ಷ ಸರಕಾರಿ ನೌಕರರು, ನಿಗಮ ಮಂಡಳಿಗಳ ನೌಕರರು ದೇಣಿಗೆ ನೀಡಲು ಮುಂದಾಗಿದ್ದೇವೆ ಎಂದಿದ್ದಾರೆ.

ಸರ್ಕಾರಿ ನೌಕರರು ಇದುವರೆಗೂ ನೆರೆ, ಭೂಕಂಪ, ಕಾರ್ಗಿಲ್ ಯುದ್ದ, ಕೋವಿಡ್‌ನಂತಹ ದುರಂತದ ಸಂದರ್ಭದಲ್ಲಿ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಾಳಜಿಯ ಬದ್ದತೆಯ ಪ್ರದರ್ಶನ ಮಾಡಿದ್ದೇವೆ. ಈಗ ಸಿಎಂ ಬಸವರಾಜ ಬೊಮ್ಮಾಯಿಯವರು ಮನವಿ ಮಾಡಿರುವುದರಿಂದ ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 5,000 ರೂ ಮತ್ತು ಗ್ರೂಪ್ ಸಿ ನೌಕರರು 400 ರೂ ನೀಡುವ ಮೂಲಕ ಯೋಜನೆಗೆ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ.

ಹೀಗೆ ಸಂಗ್ರಹವಾಗುವ ಸುಮಾರು 80- 100 ಕೋಟಿ ರೂ ವೆಚ್ಚದಲ್ಲಿ 1 ಲಕ್ಷ ಗೋವುಗಳನ್ನು ಅದರಲ್ಲಿಯೂ ಅಶಕ್ತ, ಕಸಾಯಿಖಾನೆಗೆ ಕಳಿಸುವ ಗೋವುಗಳನ್ನು ಸಾಕುವಂತಹ ಪುಣ್ಯಕೋಟಿ ಕಾರ್ಯಕ್ಕೆ ನಾಲ್ಕನೇ ಹಂತವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರಿಂದ ದೇಣಿಗೆ ವಸೂಲಿ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಿ ನೌಕರರು ದೇಣಿಗೆ ಕೊಡಲೇಬೇಕೆಂದು ಸರ್ಕಾರ ಕಡ್ಡಾಯ ಮಾಡಿಲ್ಲ. ಸಾಧ್ಯವಾದವರು ಇಚ್ಚಾನುಸಾರ ದೇಣಿಗೆ ಕೊಡಿ ಎಂದಿದೆ. ಆದರೆ ಈ ಕುರಿತು ತಳಮಟ್ಟದ ನೌಕರರ ಜೊತೆ ಚರ್ಚಿಸಿ ಒಪ್ಪಿಗೆ ಪಡೆದು ದೇಣಿಗೆ ಸಂಗ್ರಹಿಸಬೇಕಿದ್ದ ನೌಕರರ ಸಂಘದ ಅಧ್ಯಕ್ಷರು ಎಲ್ಲೊ ಕುಳಿತು ತೀರ್ಮಾನ ಮಾಡಿ ಸರ್ಕಾರವನ್ನು ಒಲೈಸುವ ಕೆಲಸ ಮಾಡುತ್ತಿದ್ದಾರೆ. ನೀವು ತಳಮಟ್ಟದಲ್ಲಿ ಯಾವುದೇ ನೌಕರರನ್ನು ಕೇಳಿದರೆ ಅವರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಸಂಘದವರು ನೇರವಾಗಿ ನೌಕರರ ಖಾತೆಯಿಂದ ಹಣ ಕಟ್ ಮಾಡಿಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಅಸಂಖ್ಯಾತ ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ದೇಣಿಗೆ ಕೇಳಿದರೆ ನಾವು ಸಂತೋಷದಿಂದ ಕೊಡುತ್ತೇವೆ. ಅಧಿಕಾರಿಗಳು ಈ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದಾಗಬೇಕು. ಅವರಿಗೆ ಉತ್ತಮ ಶಿಕ್ಷಣ ಕೊಟ್ಟು ಉತ್ತಮ ನಾಗರೀಕರನ್ನಾಗಿ ರೂಪಿಸಬೇಕು. ಆಗ ಮಾತ್ರ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಆದರೆ ಹಸಿವಿನಿಂದ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಎಷ್ಟು ವೈಜ್ಞಾನಿಕ? ನಮ್ಮದು ಜಾತ್ಯಾತೀತ ದೇಶ. ಯಾವುದೇ ಒಂದು ಭಾಷೆ, ಒಂದು ಧರ್ಮಕ್ಕೆ ಮಣೆ ಹಾಕುವುದು ಸರಿಯಲ್ಲ. ಆದರೆ ನೌಕರರ ಸಂಘದ ನಡೆ ನೋಡಿದರೆ ಒಂದು ಜಾತಿಯ, ಒಂದು ಧರ್ಮದ ಪರವಾಗಿ ಕೆಲಸ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಮುಖ್ಯಮಂತ್ರಿಗಳನ್ನು ಒಲೈಸುವ ಭರದಲ್ಲಿ ನಡೆಯುತ್ತಿರುವ ಜನಾನುರಾಗಿಯಲ್ಲದ, ಜನೋಪಯೋಗಿಯಲ್ಲದ ಈ ಕೆಲಸವನ್ನು ನಾವು ಖಂಡಿಸುತ್ತೇವೆ ಎಂದು ಡಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಪುಣ್ಯಕೋಟಿ ಯೋಜನೆ

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಸರ್ಕಾರಿ ನೌಕರರು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....