Homeಕರ್ನಾಟಕಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

- Advertisement -
- Advertisement -

ಈ ವರ್ಷದ ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾದ ‘ಮತಾಂತರ ವಿರೋಧಿ ಕಾನೂನು’ ಎಂದೇ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯಡಿ ರಾಜ್ಯ ಪೊಲೀಸರು ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.

ಯಶವಂತಪುರ ಪೊಲೀಸರು ಅಕ್ಟೋಬರ್ 13ರಂದು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಬೆಂಗಳೂರಿನ ಬಿ.ಕೆ.ನಗರದ ನಿವಾಸಿ ಸೈಯದ್ ಮುಯಿನ್ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕನ್ ಸ್ಟಾಲ್ ನಡೆಸುತ್ತಿರುವ ಮುಯಿನ್, 18 ವರ್ಷದ ಖುಷ್ಬೂ ಎಂಬವರನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಯುವತಿಯು ಬಲವಂತದ ಮತಾಂತರವನ್ನು ನಿರಾಕರಿಸಿದ್ದಾಳೆ.

ಖುಷ್ಬೂ ಕುಟುಂಬ ಉತ್ತರ ಪ್ರದೇಶದ ಗೋರಖ್‌ಪುರ ಮೂಲದ್ದಾಗಿದ್ದು, ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಆಕೆಯ ತಂದೆ ಸುರೇಂದ್ರ ಯಾದವ್ ವೃತ್ತಿಯಲ್ಲಿ ಪೇಂಟರ್. ತಾಯಿ ಜ್ಞಾನಿದೇವಿ ಗೃಹಿಣಿ. ದಂಪತಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.

ಖುಷ್ಬೂ ನಾಪತ್ತೆಯಾದ ಕೆಲವೇ ಗಂಟೆಗಳ ನಂತರ ಜ್ಞಾನಿದೇವಿಯವರು ಅಕ್ಟೋಬರ್ 5 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಆರು ತಿಂಗಳಿಂದ ಖುಷ್ಬೂಳನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮುಯಿನ್‌ನೊಂದಿಗೆ ಮಗಳು ಓಡಿಹೋಗಿದ್ದಾಳೆ ಎಂದು ಜ್ಞಾನಿದೇವಿ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನಲ್ಲಿ ಧಾರ್ಮಿಕ ಮತಾಂತರವನ್ನು ಆರೋಪಿಸಿರಲಿಲ್ಲ. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಖುಷ್ಬೂಗಾಗಿ ಹುಡುಕಾಟ ಆರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್ 8ರಂದು ಖುಷ್ಬೂ ಹಿಂತಿರುಗಿದ್ದರು. ತಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.

ಜ್ಞಾನಿದೇವಿ ಮತ್ತು ಸುರೇಂದ್ರ ಯಾದವ್‌ ತನ್ನ ಮಗಳೊಂದಿಗೆ ಚರ್ಚೆಗಿಳಿದರು. ಪೋಷಕರ ಮಾತಿಗೆ ಖುಷ್ಬೂ ಅಸಮ್ಮತಿ ಸೂಚಿಸಿದರು. ಬಲವಂತದ ಮತಾಂತರವನ್ನು ಆರೋಪಿಸಿ ಜ್ಞಾನಿದೇವಿ ಅಕ್ಟೋಬರ್ 13ರಂದು ಮತ್ತೊಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಹೊಸ ದೂರಿನ ಅನ್ವಯ ಪೊಲೀಸರು ಹೊಸ ಕಾಯ್ದೆಯ ಸೆಕ್ಷನ್ 5ಅನ್ನು ಪ್ರಯೋಗಿಸಿ ಪ್ರಕರಣ ದಾಖಲಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಉತ್ತರ) ವಿನಾಯಕ ಪಾಟೀಲ್ ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯಿಸಿ, “ನಾವು ಹೊಸ ಕಾನೂನಿನ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದು ಮದುವೆಯ ಭರವಸೆಯ ಮೇಲೆ ಧಾರ್ಮಿಕ ಮತಾಂತರ ಮಾಡಿದ ಪ್ರಕರಣವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹುಡುಗಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಇಸ್ಲಾಂಗೆ ಮತಾಂತರಗೊಂಡಂತೆ ತೋರುತ್ತಿದೆ. ಆದರೆ ಹೊಸ ಕಾನೂನಿನ ಅಡಿಯಲ್ಲಿ ನಿಗದಿಪಡಿಸಿದ ವಿಧಾನವನ್ನು ಮತಾಂತರಕ್ಕೂ ಮುನ್ನ ಅನುಸರಿಸಲಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

ಹೊಸ ಕಾನೂನಿನ ಪ್ರಕಾರ, ”ಧರ್ಮವನ್ನು ಬದಲಾಯಿಸಲು ಬಯಸುವ ಯಾವುದೇ ವ್ಯಕ್ತಿ ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್-1ರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ನೀಡಬೇಕಾಗುತ್ತದೆ.”

ಮತಾಂತರವಾಗುವ ವ್ಯಕ್ತಿಯು ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್ II ಅನ್ನು ಸಲ್ಲಿಸಬೇಕು. ಪ್ರಸ್ತಾವಿತ ಧಾರ್ಮಿಕ ಮತಾಂತರಕ್ಕೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕರೆ ಮಾಡಬೇಕಿರುತ್ತದೆ.

30 ದಿನಗಳೊಳಗೆ ಆಕ್ಷೇಪಣೆಗಳು ಬಂದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಬೇಕು. ಈ ವಿಚಾರಣೆಯು ಉದ್ದೇಶಿತ ಪರಿವರ್ತನೆಯ ನಿಜವಾದ ಉದ್ದೇಶ ಮತ್ತು ಕಾರಣವನ್ನು ಪರಿಶೀಲಿಸುತ್ತದೆ.

ವಿಚಾರಣೆಯು ಈ ಕಾಯಿದೆಯಡಿ ಪ್ರಕರಣವನ್ನು ಗುರುತಿಸಿದರೆ, ಜಿಲ್ಲಾಧಿಕಾರಿಗಳು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು ಪೊಲೀಸರಿಗೆ ಸೂಚಿಸುತ್ತಾರೆ. ಪ್ರಸ್ತುತ ಪ್ರಕರಣದಲ್ಲಿ ಮತಾಂತರಗೊಳ್ಳುವ ಮೊದಲು ದಂಪತಿ ಮದುವೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ಮುಯಿನ್ ಹುಡುಗಿಯನ್ನು ಆಂಧ್ರಪ್ರದೇಶದ ಪೆನುಕೊಂಡ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಧಾರ್ಮಿಕ ಮತಾಂತರ ಸಮಾರಂಭ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಧರ್ಮವನ್ನು ಬದಲಿಸಿರುವುದು ಏತಕ್ಕೆ ಎಂದು ಪೊಲೀಸರು ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ಬಲವಂತದ ಮತಾಂತರ ಆರೋಪವನ್ನು ನಿರಾಕರಿಸಿದ್ದಾಳೆ. ಯುವಕನ ಪೋಷಕರು ಪೊಲೀಸರಿಗೆ, “ಹೊಸ ಕಾನೂನಿನ ಬಗ್ಗೆ ತಿಳಿದಿಲ್ಲ ಮತ್ತು ಘಟನೆ ವಿಷಾದನೀಯ” ಎಂದಿದ್ದಾರೆ.

ಹೊಸ ಕಾನೂನಿನ ಸೆಕ್ಷನ್ 5 ರ ಪ್ರಕಾರ ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ವಿಧಿಸಲಾಗುತ್ತದೆ. ನ್ಯಾಯಾಲಯವು ಮುಯಿನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರವಾಗಿಲ್ಲವೇ ಕರ್ನಾಟಕ ಪೊಲೀಸ್ ಎಚ್ಚರದಿಂದ ಇದ್ದಾರೆ.. ಆದರೆ ಅವರಿಗೆ ಒಂದು ಸಾಮಾನ್ಯ ಜ್ಞಾನ ಇಲ್ಲ ಅನ್ನೋದು ತಿಳಿಯಿತು. ಸರ್ಕಾರದ ಈ ಕಾಯ್ದೆ ಏಷ್ಟು ಜನ ಸಾಮಾನ್ಯರಿಗೆ ಗೊತ್ತಿದೆ. ಅಂತ ಕೇಳಿ ಅವರಲ್ಲಿ ಉತ್ತರ ಇಲ್ಲ.. ಈ ಕಾಯ್ದೆ ಕೇವಲ ಒಮ್ಮೆ ಟಿವಿ ಅಲ್ಲಿ ಪ್ರಸಾರಕ್ಕೆ ಸೀಮಿತ. ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಏಷ್ಟು ಅರಿವು ಮೂಡಿಸಿದರೆ ಎಂದು ತಿಳಿಯಬೇಕಿದೆ. ಮಾನ್ಯ ಗೌರಿ. ಕಾಂ ಸಂಸ್ಥೆ ಅವರೇ ದಯಮಾಡಿ ಒಮ್ಮೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂದರ್ಶನ ಮಾಡಿ ಈ ಮತಾಂತರ ಕಾಯ್ದೆ ಬಗ್ಗೆ ಸಾಮಾನ್ಯರಲ್ಲಿ ಎಷ್ಟರ ಮಟ್ಟಿಗೆ ಅರಿವು, ಮಾಹಿತಿ, ಜ್ಞಾನ ನೀಡಿದ್ದಾರೆ ಎಂದು ಪ್ರಶ್ನಿಸಿ ದಯವಿಟ್ಟು ತಿಳಿಸಲು ಕೇಳಿ ನನ್ನ ಒಂದು ಪುಟ್ಟ ಮನವಿ 🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....