Homeಮುಖಪುಟ‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ, ನಾನು ಕೂಡ ಸರ್ಕಾರದ ಭಾಗ, ಆದರೂ ಹೀಗಾಯಿತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಬಿಜೆಪಿ ನಾಯಕ ಗುರ್ತಾಜ್ ಸಿಂಗ್ ಭುಲ್ಲರ್ ಅವರ ಪತ್ನಿಯನ್ನು ಉತ್ತರ ಪ್ರದೇಶದ ಪೊಲೀಸ್ ತಂಡವು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಂದು ಹಾಕಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಗುರ್ತಾಜ್‌ ಸಿಂಗ್ ಶನಿವಾರ ಆಗ್ರಹಿದ್ದಾರೆ.

ತನ್ನ ಪತ್ನಿಯನ್ನು ಕೊಂದ ಪೊಲೀಸ್ ಅಧಿಕಾರಿಗಳು ಪಾನಮತ್ತರಾಗಿದ್ದು, ಸಮವಸ್ತ್ರ ಧರಿಸಿರಲಿಲ್ಲ ಹಾಗೂ ಯಾವುದೇ ಸರ್ಚ್ ವಾರೆಂಟ್ ಹೊಂದಿರಲಿಲ್ಲ ಎಂದು ಗುರ್ತಾಜ್ ಸಿಂಗ್‌ ಆರೋಪಿಸಿದ್ದಾರೆ. ಪೊಲೀಸರ ವಾಹನದಲ್ಲಿ ನೋಂದಣಿ ಫಲಕಗಳಿಲ್ಲ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರನ್ನು ನಮ್ಮ ನಿವಾಸದಲ್ಲಿ ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಪೊಲೀಸ್ ತಂಡವು ಅಪಪ್ರಚಾರ ಮಾಡುತ್ತಿದೆ ಎಂದು ಭುಲ್ಲಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

‘‘ಪೊಲೀಸ್ ತಂಡ ಮತ್ತು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಬೇಕಾಗಿದ್ದ ವ್ಯಕ್ತಿ ಜಾಫರ್ ನಡುವಿನ ಗುಂಡಿನ ಚಕಮಕಿಯಲ್ಲಿ ಬಿಜೆಪಿ ಮುಖಂಡ ಗುರ್ತಾಜ್ ಸಿಂಗ್ ಅವರ ಪತ್ನಿ ಸಾವನ್ನಪ್ಪಿದ್ದಾರೆ” ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ತನ್ನ ಪತ್ನಿಯ ಹತ್ಯೆಯನ್ನು ಸಮರ್ಥಿಸಲು ಯುಪಿ ಪೊಲೀಸರು ಕತೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂದು ಗುರ್ತಾಜ್‌ ಸಿಂಗ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಜಾಫರ್‌ನಗರ ಗಲಭೆ: ಬಿಜೆಪಿ ಶಾಸಕ ಸೇರಿದಂತೆ 12 ಮಂದಿಗೆ ಜೈಲು ಶಿಕ್ಷೆ

ಯುಪಿ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿಲ್ಲ ಮತ್ತು ಸಮವಸ್ತ್ರದಲ್ಲಿ ಇರಲಿಲ್ಲ ಎಂದು ಕುಮಾನ್‌ನ ಡಿಐಜಿ ನೀಲೇಶ್ ಆನಂದ್ ಭರ್ನೆ ಈ ಹಿಂದೆ ಹೇಳಿಕೆ ನೀಡಿದ್ದರು. ಇದಲ್ಲದೆ ಯುಪಿ ಪೊಲೀಸರು ಹೇಳಿಕೊಂಡಂತೆ ಕ್ರಾಸ್ ಫೈರಿಂಗ್‌ನ ಯಾವುದೇ ಸೂಚನೆಯಿಲ್ಲ ಎಂದು ಸ್ಥಳವನ್ನು ತನಿಖೆ ಮಾಡಿದ ವಿಧಿವಿಜ್ಞಾನ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ತನ್ನ ಪತ್ನಿಯ ನ್ಯಾಯಕ್ಕಾಗಿ ಮನವಿ ಮಾಡಿರುವ ಗುರ್ತಾಜ್‌ ಸಿಂಗ್‌, “ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ನನ್ನ ತಪ್ಪಾಗಿದ್ದರೆ ನನ್ನನ್ನು ಶಿಕ್ಷಿಸಬೇಕು ಆದರೆ ನ್ಯಾಯಯುತ ತನಿಖೆ ನಡೆಯಬೇಕು” ಎಂದು ಹೇಳಿದ್ದಾರೆ.

ತನ್ನ ದುಃಖವನ್ನು ವ್ಯಕ್ತಪಡಿಸಿದ ಅವರು, “ನಾನು ಕೂಡಾ ಸರ್ಕಾರದ ಸಾರ್ವಜನಿಕ ಪ್ರತಿನಿಧಿ, ಆದರೂ ನನಗೆ ಇದೆಲ್ಲವೂ ಆಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

ಏನಿದು ಪ್ರಕರಣ

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರ ಸಮೀಪದ ಭರತ್‌ಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಗಣಿಗಾರಿಕೆ ಮಾಫಿಯಾದ ಸದಸ್ಯನೆಂದು ಹೇಳಲಾದ ಜಾಫರ್‌ನನ್ನು ಹುಡುಕಲು ಪೊಲೀಸರು ಪಕ್ಕದ ಮೊರಾದಾಬಾದ್ ಜಿಲ್ಲೆಯಿಂದ ಬಂದಿದ್ದರು.

ಸುಳಿವಿನ ಮೇರೆಗೆ ಮೊರಾದಾಬಾದ್‌ನ ಠಾಕುರ್ದ್ವಾರ ಪೊಲೀಸ್ ಠಾಣೆಯ ತಂಡವು ಜಾಫರ್‌ನನ್ನು ಹುಡುಕಾಡುತ್ತಾ ಬಿಜೆಪಿ ನಾಯಕ, ಜಸ್ಪುರ್ ಹಿರಿಯ ಬ್ಲಾಕ್ ಪ್ರಮುಖ್ ಗುರ್ತಾಜ್ ಸಿಂಗ್‌ ಭುಲ್ಲರ್ ಅವರ ಮನೆ ಮೇಲೆ ದಾಳಿ ಮಾಡಲು ಭತರ್‌ಪುರ ತಲುಪಿತ್ತು.

ಪೊಲೀಸರು ಗುರ್ತಾಜ್‌ ಸಿಂಗ್‌ ಭುಲ್ಲರ್ ಮನೆಗೆ ಬಂದಾಗ ಅಲ್ಲಿ ವಾಗ್ವಾದ ನಡೆದಿದೆ. ಎರಡೂ ಕಡೆಯವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಗುರ್ತಾಜ್‌ ಸಿಂಗ್‌ ಅವರ ಪತ್ನಿ ಗುರುಪ್ರೀತ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ದಾಳಿಯ ಬಗ್ಗೆ ಯುಪಿ ಪೊಲೀಸ್ ತಂಡವು ತಮ್ಮ ಉತ್ತರಾಖಂಡ ಪೊಲೀಸರಿಗೆ ಮುಂಚಿತವಾಗಿ ತಿಳಿಸಲಿಲ್ಲ ಎಂದು ಉಧಮ್ ಸಿಂಗ್ ನಗರ ಎಸ್ಎಸ್ಪಿ ಮಂಜುನಾಥ್ ಟಿಸಿ ಹೇಳಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಾಶಿಪುರ ಶಾಸಕ ತ್ರಿಲೋಕ್ ಸಿಂಗ್ ಚೀಮಾ, ಗದರ್‌ಪುರ ಶಾಸಕ ಅರವಿಂದ್ ಪಾಂಡೆ ಮತ್ತು ಮಾಜಿ ಸಂಸದ ಬಲರಾಜ್ ಪಾಸಿ ಪ್ರತಿಭಟನಾಕಾರರೊಂದಿಗೆ ಸೇರಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...