Homeಮುಖಪುಟ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಜವಾಬ್ದಾರಿಯನ್ನು ಬಿಜೆಪಿ ಸರಕಾರವೇ ಹೊರಬೇಕು ಎಂದು ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ

- Advertisement -
- Advertisement -

2022 ರಲ್ಲಿ ಭಾರತವು ಜಾಗತಿಕ ಹಸಿವು ಸೂಚ್ಯಂಕ(GHI)ದ 121 ದೇಶಗಳ ಪಟ್ಟಿಯಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 19.3% ದಷ್ಟಿದೆ ಎಂದು ವರದಿ ಹೇಳಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ತಿಳಿಸಿದೆ. 2021 ರಲ್ಲಿ ದೇಶವು ಈ ಸೂಚ್ಯಂಕದ ಪಟ್ಟಿಯಲ್ಲಿ 101 ನೇ ಸ್ಥಾನದಲ್ಲಿತ್ತು.

ಜಾಗತಿಕ ಹಸಿವು ಸೂಚ್ಯಂಕವು ಜಾಗತಿಕವಾಗಿ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ಸಾಧನವಾಗಿದೆ. ಹಸಿವಿನ ಪ್ರಮಾಣದಲ್ಲಿ ಭಾರತಕ್ಕೆ 29.1 ಅಂಕಗಳನ್ನು ನೀಡಲಾಗಿದ್ದು, ದೇಶದ ಹಸಿವಿನ ಮಟ್ಟವು ‘ಗಂಭೀರ’ವಾಗಿದೆ ಎಂದು ವರದಿಯು ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿರುವ ಅಫ್ಘಾನಿಸ್ತಾನವು ಭಾರತದ ನಂತರದ ಸ್ಥಾನದಲ್ಲಿ ಇರುವ ಏಷ್ಯಾದ ಏಕೈಕ ದೇಶವಾಗಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ (99), ಬಾಂಗ್ಲಾದೇಶ (84), ನೇಪಾಳ (81) ಮತ್ತು ಶ್ರೀಲಂಕಾ (64) ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. 2021 ರಲ್ಲಿ ಭಾರತವು 116 ದೇಶಗಳಲ್ಲಿ 101 ನೇ ಸ್ಥಾನದಲ್ಲಿದ್ದರೆ, 2020 ರಲ್ಲಿ 94 ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ವಿಶ್ವದ ಅತಿ ಹೆಚ್ಚು ಹಸಿವಿನ ಮಟ್ಟವನ್ನು ಹೊಂದಿರುವ ಪ್ರದೇಶವಾಗಿ ದಕ್ಷಿಣ ಏಷ್ಯಾವು ಹೊರಹೊಮ್ಮಿದೆ. ಇಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ ಕೂಡಾ ಅತೀ ಹೆಚ್ಚು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಮಕ್ಕಳ ಕ್ಷೀಣತೆಯ ಪ್ರಮಾಣವನ್ನು ಹೊಂದಿದೆ ಎಂದು ವರದಿ ಹೇಳಿದೆ.

“ಭಾರತದ ಮಕ್ಕಳ ಕ್ಷೀಣಿಸುವಿಕೆಯ ಪ್ರಮಾಣವು ಶೇಕಡಾ 19.3 ರಷ್ಟಿದೆ, ಇದು ವಿಶ್ವದ ಯಾವುದೇ ದೇಶಕ್ಕಿಂತ ಅತ್ಯಧಿಕವಾಗಿದೆ” ಎಂದು ವರದಿ ಹೇಳಿದೆ.

ಭಾರತದಲ್ಲಿ ಅಪೌಷ್ಟಿಕತೆಯ ಪ್ರಮಾಣವು 2018-2020 ರಲ್ಲಿ 14.6% ದಿಂದ 2019-2021 ರಲ್ಲಿ 16.3% ಕ್ಕೆ ಏರಿದೆ. ಜಾಗತಿಕವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಒಟ್ಟು 82.8 ಕೋಟಿ ಜನರಲ್ಲಿ 22.43 ಕೋಟಿ ಜನರು ಭಾರತದಲ್ಲಿ ಇದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

ಸಂಘರ್ಷ, ಹವಾಮಾನ ಬಿಕ್ಕಟ್ಟು ಮತ್ತು ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮಗಳೊಂದಿಗೆ ಹಸಿವನ್ನು ಕೊನೆಗೊಳಿಸುವ ಜಗತ್ತಿನ ಪ್ರಯತ್ನಕ್ಕೆ ಗಂಭೀರ ಹಿನ್ನಡೆ ಮಾಡುತ್ತಿದೆ ಎಂದು GHI ವರದಿ ಹೇಳಿದೆ. ಜಾಗತಿಕ ಬಿಕ್ಕಟ್ಟುಗಳು ಅತಿಕ್ರಮಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ನಿರೀಕ್ಷೆಯಿದೆ ಎಂದು ವರದಿ ಎಚ್ಚರಿಸಿದೆ.

ಭಾರತವು ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷಗಳು, ಆಡಳಿತರೂಢ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. “8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಈ ಅವಧಿಯ ಜವಾಬ್ದಾರಿಯನ್ನು ಸರಕಾರವೇ ಹೊರಬೇಕು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“2014 ರಿಂದ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಅಪಾಯಕಾರಿಯಾಗಿ ತೀವ್ರ ಕುಸಿತ ಕಂಡಿದೆ. ಮೋದಿ ಸರ್ಕಾರವು ಭಾರತಕ್ಕೆ ವಿನಾಶಕಾರಿಯಾಗಿದೆ. ಕಡಿಮೆ ಆಹಾರ ದಾಸ್ತಾನುಗಳು, ಕನಿಷ್ಠ ಬಫರ್ ಜೊತೆಗೆ ಏರುತ್ತಿರುವ ಬೆಲೆಗಳು. 8.5 ವರ್ಷಗಳಲ್ಲಿ ಭಾರತವನ್ನು ಕತ್ತಲೆಯ ಯುಗಕ್ಕೆ ತಂದಿರುವ ಈ ಯುಗದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಪ್ರಚಾರ, ತಿರುಚುವಿಕೆ ಮತ್ತು ಸುಳ್ಳುಗಳು ಸಾಕು” ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಗೌರವಾನ್ವಿತ ಪ್ರಧಾನಿಯವರು ಅಪೌಷ್ಟಿಕತೆ, ಹಸಿವು, ಮಕ್ಕಳ ಬೆಳವಣಿಗೆ ಕುಂಠಿತವಾಗುವುದು ಮತ್ತು ಪೌಷ್ಟಿಕಾಂಶದಂತಹ ನೈಜ ಸಮಸ್ಯೆಗಳನ್ನು ಯಾವಾಗ ಪರಿಹರಿಸುತ್ತಾರೆ? ಭಾರತದಲ್ಲಿ 22.4 ಕೋಟಿ ಜನರನ್ನು ಅಪೌಷ್ಟಿಕತೆ ಎಂದು ಪರಿಗಣಿಸಲಾಗಿದೆ” ಎಂದು ಹೇಳಿದ್ದಾರೆ.

“ಮೋದಿ ಸರ್ಕಾರದ 8 ವರ್ಷಗಳಲ್ಲಿ 2014 ರಿಂದ ಹಸಿವಿನ ಸೂಚ್ಯಂಕಗಳು ಹದಗೆಟ್ಟಿದೆ. ಒಟ್ಟು ಭಾರತೀಯರಲ್ಲಿ 16.3% ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಅಂದರೆ ಅವರಿಗೆ ಸಾಕಷ್ಟು ಆಹಾರವಿಲ್ಲ” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....