Homeಚಳವಳಿಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಒಕ್ಕೂಟ ಸರ್ಕಾರದ ಪ್ರಯತ್ನಗಳ ವಿರುದ್ಧ ಪ್ರತಿಭಟಿಸಿ, ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿದೆ. ಪಕ್ಷದ ಸಂಸದರು, ಶಾಸಕರು ಸೇರಿದಂತೆ ಪ್ರಮುಖ ನಾಯಕರು ಮತ್ತು ನೂರಾರು ಕಾರ್ಯಕರ್ತರು ರಾಜ್ಯಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಉಪಸ್ಥಿತರಿದ್ದರು.

ವಳ್ಳುವರ್ ಕೊಟ್ಟಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ಚೆಪಾಕ್‌-ಟ್ರಿಪ್ಲಿಕೇನ್ ಶಾಸಕ ಉದಯನಿಧಿ ಸ್ಟಾಲಿನ್, ‘‘ಹಿಂದಿ ಹೇರುವ ಇಂತಹ ಪ್ರಯತ್ನಗಳು ಮುಂದುವರಿದರೆ, ನಾವು ದೆಹಲಿಯಲ್ಲಿ ಪ್ರಧಾನಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರದ ‘ಒಂದು ರಾಷ್ಟ್ರ ಒಂದು ಭಾಷೆ’ ಅಜೆಂಡಾದ ವಿರುದ್ಧ ಘೋಷಣೆಗಳನ್ನು ಕೂಗಿದ ಉದಯನಿಧಿ ಸ್ಟಾಲಿನ್‌, ಪ್ರತಿಭಟನೆಯನ್ನು 2024 ರ ಸಾರ್ವತ್ರಿಕ ಚುನಾವಣೆಯ ಆರಂಭ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

2019 ರ ಚುನಾವಣೆಯಲ್ಲಿ ತಮಿಳುನಾಡಿನ ಜನರು ಮಾಡಿದಂತೆಯೇ 2024 ರಲ್ಲಿ ಆಡಳಿತಾರೂಢ ಬಿಜೆಪಿಯನ್ನು ದೇಶದ ಜನರು ವಿಫಲಗೊಳಿಸುತ್ತಾರೆ ಎಂದು ಅವರು ಹೇಳಿದ್ದು, ಹಿಂದಿ ಹೇರಿಕೆಯ ವಿರುದ್ಧ ಡಿಎಂಕೆ ಯಾವಾಗಲೂ ಧ್ವನಿ ಎತ್ತುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕಾಗಿ ಮೋದಿ ನೇತೃತ್ವದ ಸರ್ಕಾರ ಹಲವಾರು ಬಾರಿ ಟೀಕೆಗೆ ಒಳಗಾಗಿದೆ. ಇತ್ತೀಚೆಗೆ, ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ತನ್ನ 11 ನೇ ವರದಿಯಲ್ಲಿ, ದೇಶಾದ್ಯಂತ ಎಲ್ಲಾ ತಾಂತ್ರಿಕೇತರ ಮತ್ತು ತಾಂತ್ರಿಕ ಕಾಲೇಜುಗಳು ಮತ್ತು ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಕಡ್ಡಾಯ ಬೋಧನಾ ಮಾಧ್ಯಮವನ್ನಾಗಿ ಮಾಡಬೇಕೆಂದು ಶಿಫಾರಸು ಮಾಡಿತ್ತು. ಅನೇಕ ಡಿಎಂಕೆ ನಾಯಕರು ಮತ್ತು ಸಚಿವರು ಈ ಕ್ರಮವನ್ನು ಖಂಡಿಸಿದ್ದರು.

“ಭಾರತೀಯ ಒಕ್ಕೂಟದ ಸಾರ್ವಭೌಮತ್ವವು ಅದರ ಬಹುತ್ವದಲ್ಲಿ ಬೇರೂರಿದೆ. ಇದಕ್ಕೆ ವ್ಯತಿರಿಕ್ತವಾಗಿ, ಪ್ರತಿಯೊಂದಕ್ಕೂ ಏಕತ್ವವನ್ನು ಹೇರಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೊಳಿ ಅಕ್ಟೋಬರ್ 9 ರಂದು ಹೇಳಿದ್ದರು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಅಕ್ಟೋಬರ್ 10 ರಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರತಿಕ್ರಿಯಿಸಿ, ಭಾರತದ ಶಕ್ತಿ ಅದರ ವೈವಿಧ್ಯತೆಯಲ್ಲಿದೆ ಎಂದು ಸೂಚಿಸಿದ್ದರು. “ಬಿಜೆಪಿ ಸರ್ಕಾರವು ‘ಒಂದು ರಾಷ್ಟ್ರ’ ಎಂಬ ನೆಪದಲ್ಲಿ ಜನರ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವ ಮೂಲಕ ವೈವಿಧ್ಯತೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ. ಇದು ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಅಪಾಯವಾಗಿದೆ” ಎಂದು ಅವರು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಹಿಂದಿಯಲ್ಲಿ ಮಾತನಾಡದಿದ್ದರೆ ಎಚ್ಚರಿಕೆ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಈ ಆದ್ಯತೆಯು ಅಸಾಂವಿಧಾನಿಕವಾಗಿದೆ ಮತ್ತು ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಡಿಎಂಕೆ ಪಕ್ಷದ ಯುವ ಮತ್ತು ವಿದ್ಯಾರ್ಥಿ ಘಟಕಗಳು, “ಐಐಟಿ, ಐಐಎಂ ಮತ್ತು ಎಐಐಎಂಎಸ್‌ನಂತಹ ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ನಿರ್ಧಾರವು ಹಿಂದಿಯೇತರ ರಾಜ್ಯಗಳ ಭಾವನೆಗೆ ವಿರುದ್ಧವಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಹಿಂದಿಯೇತರ ಅಭ್ಯರ್ಥಿಗಳ ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುತ್ತದೆ ಎಂದು ಅದು ಆರೋಪಿಸಿವೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ, “ಪಕ್ಷವು ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಇದ್ದು, ಹಿಂದಿ ಭಾಷೆಯ ವಿರುದ್ಧ ಅಲ್ಲ. ಭಾಷಾ ಹೇರಿಕೆಯ ವಿರುದ್ಧ ಮಾತ್ರ ಪಕ್ಷ ಧ್ವನಿ ಎತ್ತುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...