Homeಚಳವಳಿಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಒಕ್ಕೂಟ ಸರ್ಕಾರದ ಪ್ರಯತ್ನಗಳ ವಿರುದ್ಧ ಪ್ರತಿಭಟಿಸಿ, ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿದೆ. ಪಕ್ಷದ ಸಂಸದರು, ಶಾಸಕರು ಸೇರಿದಂತೆ ಪ್ರಮುಖ ನಾಯಕರು ಮತ್ತು ನೂರಾರು ಕಾರ್ಯಕರ್ತರು ರಾಜ್ಯಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಉಪಸ್ಥಿತರಿದ್ದರು.

ವಳ್ಳುವರ್ ಕೊಟ್ಟಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ಚೆಪಾಕ್‌-ಟ್ರಿಪ್ಲಿಕೇನ್ ಶಾಸಕ ಉದಯನಿಧಿ ಸ್ಟಾಲಿನ್, ‘‘ಹಿಂದಿ ಹೇರುವ ಇಂತಹ ಪ್ರಯತ್ನಗಳು ಮುಂದುವರಿದರೆ, ನಾವು ದೆಹಲಿಯಲ್ಲಿ ಪ್ರಧಾನಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರದ ‘ಒಂದು ರಾಷ್ಟ್ರ ಒಂದು ಭಾಷೆ’ ಅಜೆಂಡಾದ ವಿರುದ್ಧ ಘೋಷಣೆಗಳನ್ನು ಕೂಗಿದ ಉದಯನಿಧಿ ಸ್ಟಾಲಿನ್‌, ಪ್ರತಿಭಟನೆಯನ್ನು 2024 ರ ಸಾರ್ವತ್ರಿಕ ಚುನಾವಣೆಯ ಆರಂಭ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

2019 ರ ಚುನಾವಣೆಯಲ್ಲಿ ತಮಿಳುನಾಡಿನ ಜನರು ಮಾಡಿದಂತೆಯೇ 2024 ರಲ್ಲಿ ಆಡಳಿತಾರೂಢ ಬಿಜೆಪಿಯನ್ನು ದೇಶದ ಜನರು ವಿಫಲಗೊಳಿಸುತ್ತಾರೆ ಎಂದು ಅವರು ಹೇಳಿದ್ದು, ಹಿಂದಿ ಹೇರಿಕೆಯ ವಿರುದ್ಧ ಡಿಎಂಕೆ ಯಾವಾಗಲೂ ಧ್ವನಿ ಎತ್ತುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕಾಗಿ ಮೋದಿ ನೇತೃತ್ವದ ಸರ್ಕಾರ ಹಲವಾರು ಬಾರಿ ಟೀಕೆಗೆ ಒಳಗಾಗಿದೆ. ಇತ್ತೀಚೆಗೆ, ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ತನ್ನ 11 ನೇ ವರದಿಯಲ್ಲಿ, ದೇಶಾದ್ಯಂತ ಎಲ್ಲಾ ತಾಂತ್ರಿಕೇತರ ಮತ್ತು ತಾಂತ್ರಿಕ ಕಾಲೇಜುಗಳು ಮತ್ತು ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಕಡ್ಡಾಯ ಬೋಧನಾ ಮಾಧ್ಯಮವನ್ನಾಗಿ ಮಾಡಬೇಕೆಂದು ಶಿಫಾರಸು ಮಾಡಿತ್ತು. ಅನೇಕ ಡಿಎಂಕೆ ನಾಯಕರು ಮತ್ತು ಸಚಿವರು ಈ ಕ್ರಮವನ್ನು ಖಂಡಿಸಿದ್ದರು.

“ಭಾರತೀಯ ಒಕ್ಕೂಟದ ಸಾರ್ವಭೌಮತ್ವವು ಅದರ ಬಹುತ್ವದಲ್ಲಿ ಬೇರೂರಿದೆ. ಇದಕ್ಕೆ ವ್ಯತಿರಿಕ್ತವಾಗಿ, ಪ್ರತಿಯೊಂದಕ್ಕೂ ಏಕತ್ವವನ್ನು ಹೇರಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೊಳಿ ಅಕ್ಟೋಬರ್ 9 ರಂದು ಹೇಳಿದ್ದರು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಅಕ್ಟೋಬರ್ 10 ರಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರತಿಕ್ರಿಯಿಸಿ, ಭಾರತದ ಶಕ್ತಿ ಅದರ ವೈವಿಧ್ಯತೆಯಲ್ಲಿದೆ ಎಂದು ಸೂಚಿಸಿದ್ದರು. “ಬಿಜೆಪಿ ಸರ್ಕಾರವು ‘ಒಂದು ರಾಷ್ಟ್ರ’ ಎಂಬ ನೆಪದಲ್ಲಿ ಜನರ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವ ಮೂಲಕ ವೈವಿಧ್ಯತೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ. ಇದು ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಅಪಾಯವಾಗಿದೆ” ಎಂದು ಅವರು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಹಿಂದಿಯಲ್ಲಿ ಮಾತನಾಡದಿದ್ದರೆ ಎಚ್ಚರಿಕೆ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಈ ಆದ್ಯತೆಯು ಅಸಾಂವಿಧಾನಿಕವಾಗಿದೆ ಮತ್ತು ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಡಿಎಂಕೆ ಪಕ್ಷದ ಯುವ ಮತ್ತು ವಿದ್ಯಾರ್ಥಿ ಘಟಕಗಳು, “ಐಐಟಿ, ಐಐಎಂ ಮತ್ತು ಎಐಐಎಂಎಸ್‌ನಂತಹ ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ನಿರ್ಧಾರವು ಹಿಂದಿಯೇತರ ರಾಜ್ಯಗಳ ಭಾವನೆಗೆ ವಿರುದ್ಧವಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಹಿಂದಿಯೇತರ ಅಭ್ಯರ್ಥಿಗಳ ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುತ್ತದೆ ಎಂದು ಅದು ಆರೋಪಿಸಿವೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ, “ಪಕ್ಷವು ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಇದ್ದು, ಹಿಂದಿ ಭಾಷೆಯ ವಿರುದ್ಧ ಅಲ್ಲ. ಭಾಷಾ ಹೇರಿಕೆಯ ವಿರುದ್ಧ ಮಾತ್ರ ಪಕ್ಷ ಧ್ವನಿ ಎತ್ತುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...