Homeಮುಖಪುಟಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

- Advertisement -
- Advertisement -

ಪಂಜಾಬ್‌ನ ಇಬ್ಬರು ಮಹಿಳಾ ಪೊಲೀಸರು ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಥಳಿಸಿದ ವಿಡಿಯೋ ವೈರಲ್‌ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕಾನ್‌ಸ್ಟೆಬಲ್‌ಗಳು ಕಪಾಳಮೋಕ್ಷ ಮಾಡುವುದು, ಗದರಿಸುವುದು ಮತ್ತು ವಿದ್ಯಾರ್ಥಿಗಳ ಫೋನ್‌ಗಳನ್ನು ಕಸಿದುಕೊಳ್ಳುವುದನ್ನು ವಿಡಿಯೊ ತುಣುಕಿನಲ್ಲಿ ಕಾಣಬಹುದು. ನಿಮ್ಮ ಪೋಷಕರಿಗೆ ಕರೆ ಮಾಡಿ ಎಂದು ಪೊಲೀಸರು ಹೆದರಿಸುವುದನ್ನು ನೋಡಬಹುದು.

ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ ಪತ್ರಕರ್ತ ಗಗನ್‌ದೀಪ್ ಸಿಂಗ್ ಅವರು ಪೊಲೀಸರನ್ನು ಪ್ರಶ್ನಿಸಿದರು ಹಾಗೂ ಅವರ ಕ್ರಮಗಳನ್ನು ಟೀಕಿಸಿದರು.

ಅವರು ಅಪ್‌ಲೋಡ್ ಮಾಡಿದ ಮತ್ತೊಂದು ವೀಡಿಯೊದಲ್ಲಿ, ಸ್ಥಳೀಯ ನಿವಾಸಿಗಳಿಂದ ಬಂದ ದೂರುಗಳ ಆಧಾರದಲ್ಲಿ ಕಾರ್ಯನಿರ್ವಹಿಸಿರುವುದಾಗಿ ಪೊಲೀಸರು ತಮ್ಮ ಕ್ರಮಗಳನ್ನು ಸಮರ್ಥಿಸಿಕೊಳ್ಳುವುದನ್ನು ಕಾಣಬಹುದು.

‘“ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ, ಕಾಲೇಜಿಗೆ ಹೋಗುತ್ತಿಲ್ಲ. ತರಗತಿಗೆ ಗೈರು ಹಾಜರಾಗಿ ಪಾರ್ಕ್‌ಗಳಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಪೊಲೀಸರು ದೂರಿದ್ದಾರೆ.

“ಯುವಕರು ಉದ್ಯಾನವನಗಳಿಗೆ ಬಂದು ಕೆಟ್ಟ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಹಾಗಾಗಿ ಪಾರ್ಕ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳನ್ನು ಕಂಡು ಮೊದಲು ಸಮಾಧಾನದಿಂದ ತಿಳಿಸಿ ಹೇಳಲು ಯತ್ನಿಸಿದರೂ ವಿದ್ಯಾರ್ಥಿಗಳು ಕಿವಿಗೊಡದೇ ಇದ್ದಾಗ ಈ ಕ್ರಮಕ್ಕೆ ಮುಂದಾಗಬೇಕಾಯಿತು” ಎಂದು ತಮ್ಮ ಮಾರಲ್‌ ಪೊಲೀಸಿಂಗ್ಅನ್ನು ಸಮರ್ಥಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವ ಪೊಲೀಸ್ ಅಧಿಕಾರಿಗಳು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ವಿಡಿಯೋ ವೈರಲ್ ಆದ ನಂತರ ವಿವಾದ ಸೃಷ್ಟಿಸಿದ ಪೊಲೀಸರನ್ನು ಸರ್ಕಾರ ವರ್ಗಾಯಿಸಿದೆ ಮತ್ತು ತನಿಖೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಯುವಜನರಿಗೆ ಪೊಲೀಸರು ಕಿರುಕುಳ ನೀಡಿದ್ದನ್ನು ಹಲವು ನೆಟ್ಟಿಗರು ಟೀಕಿಸಿದ್ದಾರೆ. ಸರಿಯಾದ ಕ್ರಮವನ್ನು ಅನುಸರಿಸುವ ಬದಲು ಮಾರಲ್ ಪೊಲೀಸಿಂಗ್ ಮಾಡಿರುವುದನ್ನು ಖಂಡಿಸಿದ್ದಾರೆ.

ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, “ವಿಷಯದ ಕುರಿತು ಗಮನ ಹರಿಸಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಮತ್ತು ವಿಚಾರಣೆಯನ್ನು ಪ್ರಾರಂಭಿಸಲಾಗಿದೆ” ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...