Homeಮುಖಪುಟಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

- Advertisement -
- Advertisement -

ಸೆಪ್ಟೆಂಬರ್ 2ರಂದು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ವಿನಯ್‌ಪುರದಲ್ಲಿ ದಾವೂದ್ ಅಲಿ ತ್ಯಾಗಿ ಎಂಬ 50 ವರ್ಷದ ಮುಸ್ಲಿಂ ವ್ಯಕ್ತಿಯ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಸುಮಾರು 20 ಮಂದಿ ತ್ಯಾಗಿಯವರ ಮೇಲೆ ತಡರಾತ್ರಿ ಕೋಲು ಮತ್ತು ಚೂಪಾದ ವಸ್ತುಗಳಿಂದ ಹಲ್ಲೆ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ತ್ಯಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ತ್ಯಾಗಿ ಅವರ ಕುಟುಂಬವು, “ಇದು ಉದ್ದೇಶಪೂರ್ವಕ ಕೃತ್ಯ” ಎಂದಿದೆ. “ಈ ದಾಳಿಯು ಎಲ್ಲ ಪ್ರಕರಣಗಳಂತೆ ಒಂದಾದ ಪ್ರಕರಣವಲ್ಲ. ವಾಸ್ತವವಾಗಿ, ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಇದಾಗಿದೆ” ಎಂದು ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ. ಆದರೆ ಪೊಲೀಸರು ಬೇರೆ ಕಾರಣವನ್ನು ಹೇಳುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ಯಾಗಿ ರೈತರಾಗಿದ್ದು ತನ್ನ ಹೆಂಡತಿ ಮತ್ತು ಮಗಳೊಂದಿಗೆ ವಿನಯ್‌ಪುರದಲ್ಲಿ ವಾಸಿಸುತ್ತಿದ್ದರೆ, ಇವರ ಮೂವರು ಗಂಡು ಮಕ್ಕಳು ದೆಹಲಿಯಲ್ಲಿ ಓದುತ್ತಿದ್ದಾರೆ. ಅಂದು  ಏನಾಯಿತು ಎಂಬುದರ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ತ್ಯಾಗಿ ಅವರ ಪುತ್ರ ಶಾರುಖ್, “ನನ್ನ ತಂದೆಯವರು ಮನೆಯ ವಾರಂಡದಲ್ಲಿ ನಮ್ಮ ಸಂಬಂಧಿಕರೊಂದಿಗೆ ಕುಶಲೋಪರಿಯಲ್ಲಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಏಳೆಂಟು ಬೈಕ್‌ಗಳಲ್ಲಿ 22 ಮಂದಿಯ ತಂಡ ಬಂದಿತು. ತಂದೆಯವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಲಾಯಿತು” ಎಂದು ಶಾರುಖ್ ವಿವರಿಸಿದ್ದಾರೆ.

“ಅವರು ನನ್ನ ತಂದೆಯ ತಲೆಯ ಮೇಲೆ ದಾಳಿ ಮಾಡಿದರು. ಅವರ ಕೈಗೆ ಮೂರು ಕಡೆ ಗಾಯಗಳಾದವು. ಅವರು ನನ್ನ ಸೋದರಸಂಬಂಧಿಗಳ ಮೇಲೂ ದಾಳಿ ನಡೆಸಿದರು. ಆದರೆ ನನ್ನ ಸೋದರರು ಚಿಕ್ಕವಯಸ್ಸಿನವರಾಗಿದ್ದು, ಹೇಗೋ ಓಡಿ ತಪ್ಪಿಸಿಕೊಂಡರು. ನನ್ನ ತಂದೆ ಮೇಲೆ ದಾಳಿ ಮಾಡುವಾಗ ‘ಜೈ ಶ್ರೀರಾಮ್’ ಘೋಷಣೆಯನ್ನು ಕೂಗುತ್ತಿದ್ದರು” ಎಂದು ಶಾರುಖ್ ದೂರಿದ್ದಾರೆ.

ಇದನ್ನೂ ಓದಿರಿ: ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ದಾಳಿಯ ನಂತರ ತ್ಯಾಗಿಯವರನ್ನು ಚಿಕಿತ್ಸೆಗಾಗಿ ಮೀರತ್‌ನ ಕುಟುಂಬ ಆರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆಗೆ ಸಾವನ್ನಪ್ಪಿದ್ದಾರೆ.

ಖೇಕ್ರಾ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 3 ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌  ದಾಖಲಿಸಲಾಯಿತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತ); 149 (ಕಾನೂನುಬಾಹಿರ ಸಭೆಯ ತಪ್ಪಿತಸ್ಥರು); ಮತ್ತು 302 (ಕೊಲೆ) ಅಡಿ ಪ್ರಕರಣ ದಾಖಲಿಸಿದರು. ಆದರೆ ಶಾರುಖ್‌ ವಿವರಿಸಿದಂತೆ ಪ್ರಕರಣ ದಾಖಲಾಗಿಲ್ಲ. ‘ಜೈ ಶ್ರೀರಾಮ್’ ಎಂದದ್ದು ಎಫ್‌ಐಆರ್‌ನಲ್ಲಿ ಇಲ್ಲ ಎಂದು ‘ದಿ ವೈರ್‌’ ಗಮನ ಸೆಳೆದಿದೆ.

ಇದಾದ ನಂತರ ಸೆಪ್ಟೆಂಬರ್ 5 ರಂದು, ಖೇಕ್ರಾ ಪೊಲೀಸರು ತ್ಯಾಗಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಹೇಳಿಕೆ ನೀಡಿದರು. ನಿಕ್ಕಿ ಅಲಿಯಾಸ್ ವಿಕ್ಕಿ, ಹರೀಶ್, ಮೋಹಿತ್ ಮತ್ತು ದಿಲೀಪ್- ಬಂಧಿತ ಆರೋಪಿಗಳು. ಇವರೆಲ್ಲರೂ ವಿನಯ್‌ಪುರದ ಸಮೀಪವಿರುವ ಭಗೋತ್‌ನ ನಿವಾಸಿಗಳಾಗಿದ್ದಾರೆ.

PC: The Wire

ಎರಡು ಮೋಟಾರು ಬೈಕ್‌ಗಳು ಮತ್ತು ಎರಡು ಸ್ಟಿಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ವಿಚಾರಣೆ ಮಾಡಿದ ನಂತರ ಪೊಲೀಸರು, “ಭಗೋತ್ ಮತ್ತು ವಿನಯ್‌ಪುರ ನಿವಾಸಿಗಳ ನಡುವೆ ಜಗಳವಾಗಿತ್ತು. ಬಂಧಿತ ನಾಲ್ವರು ವಿನಯ್‌ಪುರದಲ್ಲಿ ಯಾರ ಮೇಲಾದರೂ ದಾಳಿ ಮಾಡಲು ನಿರ್ಧರಿಸಿದ್ದರು” ಎಂದಿದ್ದಾರೆ.

‘ಹಳ್ಳ ಹಿಡಿಯುತ್ತಿರುವ ಪ್ರಕರಣ’

ತ್ಯಾಗಿ ಅವರ ಹತ್ಯೆಯಾಗಿ ಒಂದು ತಿಂಗಳು ಕಳೆದರೂ ತನಿಖೆಯು ಕೋಲ್ಡ್ ಸ್ಟೋರೇಜ್‌ನಲ್ಲಿದೆ. ಹೆಚ್ಚಿನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬವು ದುರ್ಬಲವಾಗಿದ್ದು, ಭಯ ಮತ್ತು ಅಭದ್ರತೆಯಿಂದ ಬದುಕುತ್ತಿದೆ.

ಇದಲ್ಲದೆ ತ್ಯಾಗಿ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂಬ ಭರವಸೆ ಸಿಕ್ಕಿತ್ತು. ಅದು ಕೂಡ ಈಡೇರಿಲ್ಲ.

ಕುಟುಂಬ ಸದಸ್ಯರನ್ನು ಹೆದರಿಸುವ ಪ್ರಯತ್ನ ಇತ್ತೀಚೆಗೆ ನಡೆದಿದೆ. ಕುಟುಂಬದ ಭಯವನ್ನು ಹೆಚ್ಚಿಸಲಾಗಿದೆ ಎಂದು ಶಾರುಖ್ ಹೇಳಿಕೊಂಡಿದ್ದಾರೆ.

“ಮೂರು ದಿನಗಳ ಹಿಂದೆ, ನನ್ನ ಅಣ್ಣ ಮತ್ತು ನನ್ನ ಚಿಕ್ಕಪ್ಪ ಹೊಲಕ್ಕೆ ಹೋಗಿದ್ದರು – ಅಪರಾಧಿಗಳ ಹೊಲಗಳು ನಮ್ಮ ಪಕ್ಕದಲ್ಲಿವೆ. ಆ ದಿನ ನನ್ನ ಸಹೋದರನನ್ನು ಅವರು ಸುತ್ತುವರಿದಿದ್ದರು” ಎಂದು ಶಾರುಖ್ ದೂರಿದ್ದಾರೆ.

“ನಾವು ಬೆದರಿಕೆಯನ್ನು ಅನುಭವಿಸಿದ್ದೇವೆ; ಮತ್ತೊಮ್ಮೆ, ಏನಾದರೂ ಸಂಭವಿಸಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕುಟುಂಬಕ್ಕೆ ಎದುರಾಗಿರುವ ಬೆದರಿಕೆಯ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ನೀರಜ್ ಕುಮಾರ್ ಜಾದೌನ್, “ದಾಳಿಯ ಬಗ್ಗೆ ಕುಟುಂಬಕ್ಕೆ ಆತಂಕವಿತ್ತು. ಅದನ್ನು ಸರಿಪಡಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ಇದರ ನಡುವೆ ಶಾರುಖ್, “ನಾಲ್ಕು ಜನರನ್ನು ಬಂಧಿಸಲಾಗಿದೆ. ಆದರೆ ಒಂದು ತಿಂಗಳು ಕಳೆದಿದೆ ಮತ್ತು ಪ್ರಕರಣವು ಹಳ್ಳಹಿಡಿಯುತ್ತಿದೆ” ಎಂದು ಆರೋಪಿಸಿದ್ದಾರೆ.

“ಜನರು (ಸಾಕ್ಷಿಗಳು) ಮುಂದಿಟ್ಟಿರುವ (ಅಪರಾಧಿಗಳ) ಹೆಸರುಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರೊಂದಿಗೆ ಸಂಪರ್ಕ ಹೊಂದಿವೆ. ಒಂದಲ್ಲ ಎರಡೆರಡು ಬಾರಿ ಪೊಲೀಸರು ಅವರ ಮನೆಗೆ ಭೇಟಿ ನೀಡಿದರೂ ಹೆಚ್ಚಿನ ಬೆಳವಣಿಗೆಗಳು ಆಗಿಲ್ಲ” ಎಂದು ವಿಷಾದಿಸಿದ್ದಾರೆ.

‘ಯೋಜಿತ ದಾಳಿಗೆ ನಡೆದಿತ್ತು ಸಭೆ’

ತ್ಯಾಗಿ ಹತ್ಯೆಗೂ ಮುನ್ನ ಬಾಘೋಟ್‌ನಲ್ಲಿ ಸಭೆ ನಡೆದಿದ್ದು, ಮುಸ್ಲಿಮರನ್ನು ಹೆದರಿಸುವ ಯೋಜನೆ ರೂಪಿಸಲಾಗಿತ್ತು ಎಂದು ತ್ಯಾಗಿ ಅವರ ಕುಟುಂಬದ ಸದಸ್ಯರು ಹಾಗೂ ಹೋರಾಟಗಾರರು ಹೇಳಿದ್ದಾರೆ.

ಹೋರಾಟಗಾರ ದೇವೇಂದ್ರ ಧಾಮಾ ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ಕೆಲವು ಗಂಡಸರು ಅಗ್ಗದ ಜನಪ್ರಿಯತೆಯನ್ನು ಬಯಸಿದ್ದರು. ಇದಕ್ಕಾಗಿಯೇ ದಾಳಿ ನಡೆಸಲಾಗಿದೆ. ಘಟನೆಯ ಮೊದಲು ಬಾಘೋಟ್‌ನಲ್ಲಿ ಸಭೆ ನಡೆದಿತ್ತು. ಮತ್ತೊಂದು ಸಭೆ ನಡೆದಿದ್ದು 60-65 ಜನರು ಅದರಲ್ಲಿದ್ದರು. ಈ ಪ್ರದೇಶದ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವುದು ಅವರ ಉದ್ದೇಶವಾಗಿತ್ತು. ಕೊಲ್ಲುವುದು ಅಥವಾ ಲೂಟಿ ಮಾಡುವುದು ಅವರ ಗುರಿಯಾಗಿರಲಿಲ್ಲ. ಆದರೆ ಭಯವನ್ನು ಹರಡುವುದು ಮುಖ್ಯವಾಗಿತ್ತು” ಎಂದು ವಿವರಿಸಿದ್ದಾರೆ.

“ಅವರು ಗ್ರಾಮವನ್ನು ಪ್ರವೇಶಿಸಿ, ತ್ಯಾಗಿ ಮೇಲೆ ಹಲ್ಲೆ ನಡೆಸಿದರು. ನಂತರ ಚದುರಿಹೋದರು. ಇದಕ್ಕೂ ಮುನ್ನ ಗ್ರಾಮದ ಮಸೀದಿಯಲ್ಲಿ ನಮಾಜ್ ಓದುವ ಪ್ರಯತ್ನ ನಡೆಸಲಾಗಿತ್ತು” ಎಂದು ಧಾಮಾ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿನ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಆಧಾರಿಸಿ ಬಿಬಿಸಿ ಗ್ರೌಂಡ್ ರಿಪೋರ್ಟ್ ಮಾಡಿದೆ. ದಾಳಿಯಲ್ಲಿ ಭಾಗವಹಿಸಲು ಸಭೆ ನಡೆದಿತ್ತು. ದಾಳಿಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿರುವ ಪೋಸ್ಟ್‌ಗಳನ್ನು ಬಂಧಿತ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ದಿಲೀಪ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

ದಿ ವೈರ್‌ನೊಂದಿಗೆ ಮಾತನಾಡುತ್ತಾ ರಾಜಕೀಯ ಸಂಬಂಧ ಸಭೆ ನಡೆದಿದೆ ಎಂಬ ಪ್ರತಿಪಾದನೆಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಖೇಕ್ರಾ ಪೊಲೀಸ್ ಠಾಣೆಯ ವೃತ್ತಾಧಿಕಾರಿ ವಿಜಯ್ ಚೌಧರಿ ತಿಳಿಸಿದ್ದಾರೆ. ಉಳಿದ ವ್ಯಕ್ತಿಗಳಿಗಾಗಿ ನಾವು ಗಮನ ಹರಿಸಿದ್ದೇವೆ. “ಸಭೆ ನಡೆಸಿ ಪಿತೂರಿ ನಡೆದಿದೆ. ಆದರೆ, ಅದು ರಾಜಕೀಯವಾಗಿರಲಿಲ್ಲ. ಇದು ಹಳೆಯ ವಿಚಾರಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ” ಎಂದಿದ್ದಾರೆ.

ಶಾರುಖ್ ಮತ್ತು ಅವರ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಿದ್ದರೂ, ಅವರು ಭಯದಿಂದ ಬದುಕುತ್ತಿದ್ದಾರೆ. ವಿನಯ್‌ಪುರದಲ್ಲಿ ಗುರ್ಜರ್‌ಗಳು ಮತ್ತು ಮುಸ್ಲಿಮರು ವಾಸವಿದ್ದಾರೆ. ಶಾರುಖ್ ಪ್ರಕಾರ, ಸುತ್ತಮುತ್ತಲಿನ ಹಳ್ಳಿಗಳು ಗುರ್ಜರ್ ಪ್ರಾಬಲ್ಯ ಹೊಂದಿವೆ.

“ಈ ಪ್ರದೇಶದಲ್ಲಿನ ಉದ್ವಿಗ್ನತೆಯಿಂದಾಗಿ ನಾವು ಗ್ರಾಮದಿಂದ ಹೊರಹೋಗಲು ಬಯಸುತ್ತಿದ್ದೇವೆ. ನಾವು ಆಡಳಿತದ ಮೇಲೆ ಕುರುಡು ನಂಬಿಕೆ ಇಟ್ಟಿದ್ದೆವು. ಸರ್ಕಾರಿ ನೌಕರಿಯೊಂದಿಗೆ ನಮಗೆ ಬೆಂಬಲ ನೀಡುವ ಭರವಸೆ ಇನ್ನೂ ಈಡೇರಿಲ್ಲ. ನಾವೆಲ್ಲರೂ ಇನ್ನೂ ಓದುತ್ತಿರುವುದರಿಂದ ನನ್ನ ತಂದೆಯ ಅಲ್ಪ ಆದಾಯವನ್ನೇ ಅವಲಂಬಿಸಿದ್ದೆವು” ಎಂದಿದ್ದಾರೆ ಶಾರುಖ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...