Homeಕರ್ನಾಟಕಚಿಕ್ಕಬಳ್ಳಾಪುರ: ಹಾವು ಪ್ರದರ್ಶಿಸಿದ ಜಗ್ಗಿ ವಿರುದ್ಧ ದೂರು; ಕಾನೂನು ಉಲ್ಲಂಘನೆ ಪಟ್ಟಿಗೆ ಮತ್ತೊಂದು ಪ್ರಕರಣ ಸೇರ್ಪಡೆ

ಚಿಕ್ಕಬಳ್ಳಾಪುರ: ಹಾವು ಪ್ರದರ್ಶಿಸಿದ ಜಗ್ಗಿ ವಿರುದ್ಧ ದೂರು; ಕಾನೂನು ಉಲ್ಲಂಘನೆ ಪಟ್ಟಿಗೆ ಮತ್ತೊಂದು ಪ್ರಕರಣ ಸೇರ್ಪಡೆ

- Advertisement -
- Advertisement -

ಅಕ್ಟೋಬರ್ 9ರಂದು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಶಾ ಫೌಂಡೇಶನ್‌ನ ಜಗ್ಗಿ ವಾಸುದೇವ್ ಹಾವನ್ನು ಪ್ರದರ್ಶಿಸಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

ಪ್ರಾಣಿ ಹಕ್ಕುಗಳ ಸಂಘಟನೆಯು ದೂರು ನೀಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೊಸೈಟಿಯ (ಎಸ್‌ಪಿಸಿಎ) ಪೃಥ್ವಿ ರಾಜ್ ಸಿ.ಎನ್.ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಜಗ್ಗಿ ವಾಸುದೇವ್‌ ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ರ್‍ಯಾಟ್‌ ಸ್ನೇಕ್‌ ಸೆರೆಹಿಡಿದು ಪ್ರದರ್ಶಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕಾಯಿದೆಯ ಶೆಡ್ಯೂಲ್-2ರ ಅಡಿಯಲ್ಲಿ ರ್‍ಯಾಟ್‌ ಸ್ನೇಕ್‌ ಸಂರಕ್ಷಣೆ ಕುರಿತು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮವೊಂದರ ಪ್ರಚಾರಕ್ಕಾಗಿ ಹಾವನ್ನು ಜನರ ಮುಂದೆ, ಪ್ರಜ್ವಲಿಸುವ ದೀಪಗಳ ಅಡಿಯಲ್ಲಿ ಪ್ರದರ್ಶಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಹಾವನ್ನು ಎಲ್ಲಿಂದ ಪಡೆಯಲಾಗಿದೆ ಎಂಬುದು ಪತ್ತೆಯಾಗಿಲ್ಲ ಮತ್ತು ಉರಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬೇಕಿದೆ ಎಂದು ಪೃಥ್ವಿ ರಾಜ್ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಾಣಿ ಹಾಗೂ ಪರಿಸರಕ್ಕೆ ಸಂಬಂಧಿಸಿದಂತೆ ಜಗ್ಗಿ ವಾಸುದೇವ್ ಅವರ ಮೇಲೆ ದೂರುಗಳು ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ವ್ಯಾಪ್ತಿಯಲ್ಲಿ ಮುಸ್ಸಂಜೆಯ ನಂತರ ಜೀಪ್ ಸಫಾರಿ ಮಾಡಿ ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ವಿರುದ್ಧ ಪೊಲೀಸರಿಗೆ ಇತ್ತೀಚೆಗೆ ದೂರು ನೀಡಲಾಗಿತ್ತು.

ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರು ಗೋಲಾಘಾಟ್ ಜಿಲ್ಲೆಯ ಬೊಕಾಖಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮುಸ್ಸಂಜೆಯ ನಂತರ ವಾಹನದ ಹೆಡ್‌ಲೈಟ್ ಆನ್‌ ಮಾಡಿ ಜೀಫ್‌ ಸವಾರಿ ಮಾಡಲಾಗಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಉಲ್ಲಂಘನೆಯಾಗಿದೆ ಎಂದು ಉದ್ಯಾನದ ಬಳಿಯ ಮೊರೊಂಗಿಯಾಲ್ ಮತ್ತು ಬಲಿಜನ್ ಆದರ್ಶ್ ಮಾದರಿ ಗ್ರಾಮಗಳ ನಿವಾಸಿಗಳಾದ ಸೋನೇಶ್ವರ ನರಹ್, ಪ್ರಬಿನ್ ಪೆಗು ಆರೋಪಿಸಿದ್ದರು.

ಪ್ರವಾಸಿಗರಿಗೆ ನಿಗದಿತ ಸಮಯ ಮುಗಿದ ನಂತರ, ಉದ್ಯಾನವನದೊಳಗೆ ಪ್ರವೇಶಿಸಿ ಹೆಡ್‌ಲೈಟ್‌ಗಳನ್ನು ಹಾಕಿಕೊಂಡು ಜೀಪ್ ಓಡಿಸುತ್ತಿದ್ದ ಜಗ್ಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದರು.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ಅವರು ಈ ಹಿಂದೆಯೂ ಪರಿಸರ ಕಾನೂನು ಉಲ್ಲಂಘನೆ ಮಾಡಿದ ಆರೋಪಗಳನ್ನು ಎದುರಿಸಿದ್ದಾರೆ. ಈ ಕುರಿತು ಬಿಬಿಸಿ ಮಾಧ್ಯಮ ಪ್ರಶ್ನಿಸಿದ್ದಾಗ, ಮೈಕ್ ಕಿತ್ತು ಎಸೆದು ಸಂದರ್ಶನವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಘಟನೆ ಕೆಲವು ತಿಂಗಳ ಹಿಂದೆ ನಡೆದಿತ್ತು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಈಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

ಇದನ್ನೂ ಓದಿರಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

“ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಬಿಬಿಸಿ ಸಂದರ್ಶನದಲ್ಲಿ ಕೇಳಲಾಗಿತ್ತು. ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎಂದಿದ್ದರು.

ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದ್ದರು. ಜೊತೆಗೆ ಸಂದರ್ಶನವನ್ನು ಅರ್ಧಕ್ಕೆ ಮೊಟುಕುಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...