Homeಕರ್ನಾಟಕಅರಸೀಕೆರೆ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ದುರ್ಮರಣ

ಅರಸೀಕೆರೆ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ದುರ್ಮರಣ

- Advertisement -
- Advertisement -

ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ (ಶಿವಮೊಗ್ಗ–ಬೆಂಗಳೂರು ರಸ್ತೆ) ಶನಿವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದಾರೆ.

ಸಾವಿಗೀಡಾದವರಲ್ಲಿ ನಾಲ್ವರು ಮಹಿಳೆಯರು, ಒಬ್ಬ ಪುರುಷ ಹಾಗೂ ನಾಲ್ವರು ಮಕ್ಕಳು ಸೇರಿದ್ದಾರೆ. ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್‌ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್‌ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ.

ಟೆಂಪೋ ಟ್ರಾವೆಲ್ಲರ್‌ನಲ್ಲಿ 14 ಜನರು ಪ್ರಯಾಣಿಸುತ್ತಿದ್ದು, 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್‌ ತಿಳಿಸಿದ್ದಾರೆ.

ಹಾಲಿನ ಟ್ಯಾಂಕರ್‌ ಚಾಲಕ ಡೈವರ್ಸನ್‌ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು.

ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥನಿಗೆ ಹರಕೆ ಸಲ್ಲಿಸಲೆಂದು ಹೋಗಿದ್ದವರು ದರ್ಶನ ಮಾಡಿಕೊಂಡು ಅಲ್ಲಿಂದ ವಾಪಸ್ ಆಗಿದ್ದರು. ಇನ್ನೇನು ಐದಾರು ಕಿಲೋಮೀಟರ್​ನಲ್ಲಿ ಮನೆಗೆ ಸೇರುವ ಮೊದಲೇ ಈ ದುರಂತ ಸಂಭವಿಸಿದೆ. ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಟಿಟಿ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಏಕಮುಖ ಸಂಚಾರ ಮಾಡಲಾಗಿತ್ತು. ಆದರೆ ಕಾಮಗಾರಿ ಬೋರ್ಡ್ ಹಾಕಿರಲಿಲ್ಲ. ಪರಿಣಾಮ ಚತುಷ್ಪಥದ ಒನ್ ವೇಯಲ್ಲಿ ಹಾಲಿನ ಟ್ಯಾಂಕರ್ ನುಗ್ಗಿ ಬಂತು. ಎದುರುಗಡೆಯಿಂದ ಟ್ಯಾಂಕರ್ ಬಂದಿರುವುದು ಟಿಟಿ ಚಾಲಕನಿಗೆ ಗೊತ್ತಾಗಲಿಲ್ಲ. ಈ ವೇಳೆ ರಸ್ತೆ ಮೇಲೆ ಕೆಎಸ್ ಆರ್ ಟಿಸಿ ಬಸ್ಸು ಮತ್ತು ಟಿಟಿ ವಾಹನ ಜೊತೆಗೆ ಸಂಚರಿಸುತ್ತಿತ್ತು. ಕೊನೆ ಕ್ಷಣದಲ್ಲಿ ಎದುರಿಗೆ ಬರುತ್ತಿದ್ದ ಟ್ಯಾಂಕರ್ ನೋಡಿದ ತಕ್ಷಣ ಟಿಟಿ ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಕೆಎಸ್ ಆರ್ ಟಿಸಿ ಬಸ್‌ಗೆ ಟಿಟಿ ಡಿಕ್ಕಿಯಾಗಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಟಿಟಿಗೆ ಡಿಕ್ಕಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಾಪ ಸೂಚಿಸಿದ್ದಾರೆ. “ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವುದು ತೀವ್ರ ದುಃಖದಾಯಕ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

 

ಸಾರಿಗೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, “ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಷ್ಟು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುವೆ” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಂಡ್: ಕಮರಿಗೆ ಬಸ್‌ ಉರುಳಿ 25 ಮಂದಿ ದುರ್ಮರಣ

ಗಾಯಾಳುಗಳನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನವಾಗಿದೆ ಎಂದು ಹೇಳಲಾಗಿದೆ. ಇಬ್ಬರಿಗೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಕೆಎಸ್ಆರ್ ಟಿಸಿ ಬಸ್ ನಲ್ಲಿ ಇದ್ದವರು ಎನ್ನಲಾಗಿದೆ. ಸಾರಿಗೆ ಬಸ್‌‌ ಚಾಲಕನೂ ಗಾಯಗೊಂಡಿದ್ದು, ಹಾಲಿನ ಟ್ಯಾಂಕರ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದನು. ಆದರೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...