Homeಕರ್ನಾಟಕಅರಸೀಕೆರೆ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ದುರ್ಮರಣ

ಅರಸೀಕೆರೆ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ದುರ್ಮರಣ

- Advertisement -
- Advertisement -

ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ (ಶಿವಮೊಗ್ಗ–ಬೆಂಗಳೂರು ರಸ್ತೆ) ಶನಿವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದಾರೆ.

ಸಾವಿಗೀಡಾದವರಲ್ಲಿ ನಾಲ್ವರು ಮಹಿಳೆಯರು, ಒಬ್ಬ ಪುರುಷ ಹಾಗೂ ನಾಲ್ವರು ಮಕ್ಕಳು ಸೇರಿದ್ದಾರೆ. ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್‌ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್‌ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ.

ಟೆಂಪೋ ಟ್ರಾವೆಲ್ಲರ್‌ನಲ್ಲಿ 14 ಜನರು ಪ್ರಯಾಣಿಸುತ್ತಿದ್ದು, 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್‌ ತಿಳಿಸಿದ್ದಾರೆ.

ಹಾಲಿನ ಟ್ಯಾಂಕರ್‌ ಚಾಲಕ ಡೈವರ್ಸನ್‌ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು.

ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥನಿಗೆ ಹರಕೆ ಸಲ್ಲಿಸಲೆಂದು ಹೋಗಿದ್ದವರು ದರ್ಶನ ಮಾಡಿಕೊಂಡು ಅಲ್ಲಿಂದ ವಾಪಸ್ ಆಗಿದ್ದರು. ಇನ್ನೇನು ಐದಾರು ಕಿಲೋಮೀಟರ್​ನಲ್ಲಿ ಮನೆಗೆ ಸೇರುವ ಮೊದಲೇ ಈ ದುರಂತ ಸಂಭವಿಸಿದೆ. ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಟಿಟಿ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಏಕಮುಖ ಸಂಚಾರ ಮಾಡಲಾಗಿತ್ತು. ಆದರೆ ಕಾಮಗಾರಿ ಬೋರ್ಡ್ ಹಾಕಿರಲಿಲ್ಲ. ಪರಿಣಾಮ ಚತುಷ್ಪಥದ ಒನ್ ವೇಯಲ್ಲಿ ಹಾಲಿನ ಟ್ಯಾಂಕರ್ ನುಗ್ಗಿ ಬಂತು. ಎದುರುಗಡೆಯಿಂದ ಟ್ಯಾಂಕರ್ ಬಂದಿರುವುದು ಟಿಟಿ ಚಾಲಕನಿಗೆ ಗೊತ್ತಾಗಲಿಲ್ಲ. ಈ ವೇಳೆ ರಸ್ತೆ ಮೇಲೆ ಕೆಎಸ್ ಆರ್ ಟಿಸಿ ಬಸ್ಸು ಮತ್ತು ಟಿಟಿ ವಾಹನ ಜೊತೆಗೆ ಸಂಚರಿಸುತ್ತಿತ್ತು. ಕೊನೆ ಕ್ಷಣದಲ್ಲಿ ಎದುರಿಗೆ ಬರುತ್ತಿದ್ದ ಟ್ಯಾಂಕರ್ ನೋಡಿದ ತಕ್ಷಣ ಟಿಟಿ ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಕೆಎಸ್ ಆರ್ ಟಿಸಿ ಬಸ್‌ಗೆ ಟಿಟಿ ಡಿಕ್ಕಿಯಾಗಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಟಿಟಿಗೆ ಡಿಕ್ಕಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಾಪ ಸೂಚಿಸಿದ್ದಾರೆ. “ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವುದು ತೀವ್ರ ದುಃಖದಾಯಕ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

 

ಸಾರಿಗೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, “ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಷ್ಟು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುವೆ” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಂಡ್: ಕಮರಿಗೆ ಬಸ್‌ ಉರುಳಿ 25 ಮಂದಿ ದುರ್ಮರಣ

ಗಾಯಾಳುಗಳನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನವಾಗಿದೆ ಎಂದು ಹೇಳಲಾಗಿದೆ. ಇಬ್ಬರಿಗೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಕೆಎಸ್ಆರ್ ಟಿಸಿ ಬಸ್ ನಲ್ಲಿ ಇದ್ದವರು ಎನ್ನಲಾಗಿದೆ. ಸಾರಿಗೆ ಬಸ್‌‌ ಚಾಲಕನೂ ಗಾಯಗೊಂಡಿದ್ದು, ಹಾಲಿನ ಟ್ಯಾಂಕರ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದನು. ಆದರೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...