Homeಮುಖಪುಟ‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

- Advertisement -
- Advertisement -

ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆಗೆ ಒಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, “ಮುಂಬರುವ ಗುಜರಾತ್ ಚುನಾವಣೆಗೆ ಪ್ರಚಾರ ಮಾಡದಂತೆ ಬಿಜೆಪಿಯ ‘ಯೋಜನೆ’ ಭಾಗವಾಗಿ ಇಂದು ತನ್ನನ್ನು ಬಂಧಿಸಲಾಗುವುದು” ಎಂದು ಸೋಮವಾರ ಭವಿಷ್ಯ ನುಡಿದಿದ್ದಾರೆ.

ಭಾನುವಾರ ಅವರು ಸಿಬಿಐ ಕಚೇರಿಗೆ ಹೋಗುವ ದಾರಿಯಲ್ಲಿ ತೆರೆದ ಛಾವಣಿಯ SUV ನಲ್ಲಿ ರೋಡ್ ಶೋ ನಡೆಸಿದ್ದಾರೆ. ಜೊತೆಗೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್ ಘಾಟ್ ಸೇರಿದಂತೆ ಅನೇಕ ಕಡೆ ನಿಂತು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರಂತಹ ಆಪ್ ನಾಯಕರೊಂದಿಗೆ ಸಿಸೋಡಿಯಾ ಅವರು “ತಿಲಕ” ಧರಿಸಿ ನಂತರ ಮನೆಯಿಂದ ಹೊರಬಂದಿದ್ದಾರೆ. ತನ್ನ ತಾಯಿ ಆಶೀರ್ವಾದ ಮಾಡುತ್ತಿರುವ ವಿಡಿಯೋವನ್ನು ಕೂಡ ಅವರು ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಸಿಬಿಐ ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವುಗಳನ್ನು “ಹಲವು ಹಂತಗಳಲ್ಲಿ” ಕೇಳಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಇಲ್ಲಿಯವರೆಗೆ ದೊರೆತಿರುವ ಸಾಕ್ಷ್ಯಗಳು ಮತ್ತು ಮದ್ಯದ ಹಗರಣದಲ್ಲಿ ಆರೋಪಿಗಳಾಗಿರುವ ಇತರರ ಹೇಳಿಕೆಗಳನ್ನು ಉಪಮುಖ್ಯಮಂತ್ರಿಯ ಮುಂದೆ ಇಡಲಾಗುವುದು ಎಂದು ಅವರು ಹೇಳಿದ್ದಾರೆ.

“ಅವರು ನನ್ನ ಮನೆಗೆ ದಾಳಿ ಮಾಡಿದರು, ಅದರಿಂದ ಏನೂ ಹೊರಬರಲಿಲ್ಲ. ಅವರು ನನ್ನ ವಿರುದ್ಧ ಏನಾದರೂ ಸಿಗುತ್ತದೆಯೆ ಎಂದು ಹುಡುಕಲು ನನ್ನ ಹಳ್ಳಿಗೆ ಹೋದರು, ಆದರೂ ಅವರಿಗೆ ಏನೂ ಸಿಕ್ಕಿಲ್ಲ. ಈಗ ಅವರು ನನ್ನನ್ನು ಗುಜರಾತ್‌ನಲ್ಲಿ ಪ್ರಚಾರ ಮಾಡದಂತೆ ತಡೆಯಲು ಅವರು ನನ್ನನ್ನು ಬಂಧಿಸಲು ಯೋಜಿಸಿದ್ದಾರೆ. ನಾನು ಸಿಬಿಐ, ಇಡಿಗೆ ಅಥವಾ ಜೈಲಿಗೆ ಹೋಗುವ ಬಗ್ಗೆ ಹೆದರುವುದಿಲ್ಲ” ಎಂದು ಅವರು ದಾರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದಾರೆ.

“ಭಗತ್ ಸಿಂಗ್ ಕೂಡ ದೇಶಕ್ಕಾಗಿ ಜೈಲಿಗೆ ಹೋಗಬೇಕಾಯಿತು” ಎಂದು ಅವರು ಘೋಷಿಸಿದರು.

ಈ ನಡುವೆ ಬಿಜೆಪಿ ರೋಡ್‌ಶೋ ಅನ್ನು ಟೀಕಿಸಿದ್ದು, “ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದ ವಿಶ್ವಕಪ್ ಅನ್ನು ಗೆದ್ದಿದೆ” ಎಂದು ತೋರುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಇಂದು ಕೂಡಾ ಮನೀಷ್ ಸಿಸೋಡಿಯಾ ಅವರು ತಮ್ಮ ಬೆಂಬಲಿಗರೊಂದಿಗೆ ಬೀದಿಗಳಲ್ಲಿ ತೆರೆದ ಕಾರಿನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ರೀತಿ ನೋಡಿದರೆ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿಶ್ವಕಪ್ ಗೆದ್ದಂತೆ ತೋರುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.

ತಮ್ಮ ಉಪಮುಖ್ಯಮಂತ್ರಿಯ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಅವರ ವಿರುದ್ಧದ ಪ್ರಕರಣ ‘ಸಂಪೂರ್ಣವಾಗಿ ನಕಲಿ’ ಎಂದು ಆರೋಪಿಸಿದ್ದಾರೆ. ಸಿಸೋಡಿಯಾ ಅವರನ್ನು ನಾಯಕನ ಅವತಾರದಲ್ಲಿ ಚಿತ್ರಿಸುವ ಕಾರ್ಟೂನ್ ಅನ್ನು ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ.

“ಅವರು ಚುನಾವಣಾ ಪ್ರಚಾರಕ್ಕಾಗಿ ಗುಜರಾತ್‌ಗೆ ಹೋಗಬೇಕಿತ್ತು. ಅವರನ್ನು ತಡೆಯುವ ಪ್ರಯತ್ನದಲ್ಲಿ ಅವರನ್ನು ಬಂಧಿಸಲಾಗುವುದು. ಆದರೆ ಚುನಾವಣಾ ಪ್ರಚಾರ ನಿಲ್ಲುವುದಿಲ್ಲ. ಗುಜರಾತ್‌ನ ಪ್ರತಿಯೊಬ್ಬ ವ್ಯಕ್ತಿಯೂ ಇಂದು ಎಎಪಿಗೆ ಪ್ರಚಾರ ಮಾಡುತ್ತಿದ್ದಾರೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ: 2023ರ ಜನವರಿ 1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧ

ಮನೀಶ್ ಸಿಸೋಡಿಯಾ ಅವರನ್ನು ಗುರಾಜಲ್ ಚುನಾವಣಾ ಫಲಿತಾಂಶ ಹೊರಬೀಳುವವರೆಗೂ ಜೈಲಿನಲ್ಲಿ ಇಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ. “ಡಿಸೆಂಬರ್ 8 ರಂದು ಗುಜರಾತ್ ಫಲಿತಾಂಶ ಹೊರಬೀಳಲಿದೆ. ಈ ಜನರು ಅಲ್ಲಿಯವರೆಗೆ ಮನೀಶ್ ಅವರನ್ನು ಜೈಲಿನಲ್ಲಿಡುತ್ತಾರೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಲ್ಲಿಯವರೆಗೆ ಘೋಷಿಸಿಲ್ಲ.

ಸಿಸೋಡಿಯಾ ಅವರು ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಗುಜರಾತ್ ಸೋಲುವುದು ಗೊತ್ತಿದ್ದೇ ಬಿಜೆಪಿಗೆ ಭಯವಾಗಿದೆ… ನಾನು ಗುಜರಾತ್ ಗೆ ಹೋಗದಂತೆ ತಡೆಯುವುದು ಅವರ ಉದ್ದೇಶ’’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಎಎಪಿ ಕಾರ್ಯಕರ್ತರು ಅಲ್ಲಿ ಸೇರುವುದನ್ನು ತಡೆಯಲು ಅವರ ಮನೆಯ ಸುತ್ತಲೂ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ ಮತ್ತು ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಂಡುಬಂದಿದೆ.

ಕೇಜ್ರಿವಾಲ್, ಸಿಸೋಡಿಯಾ ಮತ್ತು ಅವರ ಪಕ್ಷದ ಇತರರು ಗುಜರಾತ್‌ನಲ್ಲಿ ತಮ್ಮ ಪ್ರಚಾರದ ಕಾರಣದಿಂದ ಬಿಜೆಪಿ ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದಂತಹ ಆರೋಪಗಳನ್ನು ಪಟ್ಟಿಮಾಡಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಸೋಡಿಯಾ ಮತ್ತು ಇತರ 14 ಜನರ ವಿರುದ್ಧ ಸಿಬಿಐ ಆಗಸ್ಟ್‌ನಲ್ಲಿ ದೆಹಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಎಎಪಿ ಸರ್ಕಾರದ ಮದ್ಯ ನೀತಿಯು ಮದ್ಯದ ಕಾರ್ಟೆಲ್‌ಗಳಿಗೆ ಸಹಾಯ ಮಾಡಿದ್ದರೆ ಸಿಬಿಐ ತನಿಖೆ ನಡೆಸುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶಿಫಾರಸು ಮಾಡಿದ ಸಿಬಿಐ ತನಿಖೆಯ ನಂತರ ಕಳೆದ ವರ್ಷ ನವೆಂಬರ್ 17 ರಿಂದ ಜಾರಿಗೆ ಬಂದ ಮದ್ಯ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಸರ್ಕಾರ ಜುಲೈನಲ್ಲಿ ರದ್ದುಗೊಳಿಸಿತು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಮದ್ಯ ಮಾರಾಟವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ನೀತಿಯನ್ನು ಜಾರಿಗೆ ತರುವ ಮೂಲಕ ಎಎಪಿ ಸರ್ಕಾರವು ನಿಯಮಗಳನ್ನು ಉಲ್ಲಂಘಿಸಿದ್ದು, ಸರ್ಕಾರಿ ಮಳಿಗೆಗಳನ್ನು ಮುಚ್ಚಿದೆ ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ. ಆದರೆ ಈ ಆರೋಪಿ ಅಲ್ಲಗೆಳೆದಿರುವ ಉಪ ಮುಖ್ಯಮಂತ್ರಿ ಸಿಸೋಡಿಯಾ, ಈ ನೀತಿಯು ಭ್ರಷ್ಟಾಚಾರವನ್ನು ನಿಭಾಯಿಸಲು ಮತ್ತು ಪ್ರಬಲ ಮದ್ಯ ಮಾಫಿಯಾ ವಿರುದ್ಧ ಹೋರಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...