Homeಮುಖಪುಟಮಹಾರಾಷ್ಟ್ರ ಉಪಚುನಾವಣೆ: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ಗೆಲುವಿಗಾಗಿ ನಾಮಪತ್ರ ಹಿಂಪಡೆದ ಬಿಜೆಪಿ

ಮಹಾರಾಷ್ಟ್ರ ಉಪಚುನಾವಣೆ: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ಗೆಲುವಿಗಾಗಿ ನಾಮಪತ್ರ ಹಿಂಪಡೆದ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ತಮ್ಮ ನಾಮಪತ್ರ ವಾಪಸ್ ಪಡೆಯುವ ಮೂಲಕ ತಮ್ಮ ವಿರೋಧಿ ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ಗೆಲುವಿಗೆ ನೆರವಾದ ಅಪರೂಪದ ಘಟನೆ ನಡೆದಿದೆ.

ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಶಾಸಕರಾಗಿದ್ದ ರಮೇಶ್ ಲಟ್ಕೆ ಎಂಬುವವರು ಕಳೆದ ವರ್ಷ ಮೃತಪಟ್ಟಿದ್ದರು. ಹಾಗಾಗಿ ಆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲಾಗಿತ್ತು. ಅವರ ಪತ್ನಿ ರುತುಜ ಲಟ್ಕೆಯವರಿಗೆ ಉದ್ಧವ್ ಬಣ ಟಿಕೆಟ್ ನೀಡಿತ್ತು. ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲ ಸೂಚಿಸಿತ್ತು. ಬಿಜೆಪಿಯು ಮುರ್ಜಿ ಪಟೇಲ್ ಎಂಬುವವರಿಗೆ ಟಿಕೆಟ್ ನೀಡಿತ್ತು. ಸದ್ಯ ಅವರು ನಾಮಪತ್ರ ವಾಪಸ್ ಹಿಂಪಡೆಯುವ ಮೂಲಕ ಎದುರಾಳಿಯ ಸುಲಭ ಗೆಲುವಿಗೆ ಕಾರಣರಾಗಿದ್ದಾರೆ.

ಉದ್ಧವ್ ಠಾಕ್ರೆ ಬಣದ ಶಿವಸೇನೆಯ ರುತುಜ ಲಟ್ಕೆಯವರಿಗೆ ಪಕ್ಷಬೇಧವಿಲ್ಲದೆ ಬೆಂಬಲ ಹರಿದುಬಂದಿತ್ತು. ಅವರನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ರಾಜ್ ಠಾಕ್ರೆ ಮೊದಲು ಬೆಂಬಲ ಘೋಷಿಸಿದ್ದರು. ನಂತರ ಬಿಜೆಪಿ ಪಕ್ಷಕ್ಕೆ ಪತ್ರ ಬರದು ಅವರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಬಾರದು ಎಂದು ಮನವಿ ಮಾಡಿದ್ದರು. ಸಿಎಂ ಏಕನಾಥ್ ಶಿಂಧೆಯವರ ಬಣದ ಶಿವಸೇನೆ ಶಾಸಕ ಪ್ರತಾಪ್ ಸರ್‌ನಾಯ್ಕ್ ಕೂಡ ಪಕ್ಷದ ವತಿಯಿಂದ ಅಭ್ಯರ್ಥಿ ಕಣಕ್ಕಿಳಿಸಬಾರದು ಎಂದು ಪತ್ರ ಬರೆದಿದ್ದರು. ಎನ್‌ಸಿಪಿ ಮುಖಂಡ ಶರದ್ ಪವಾರ್ ಕೂಡ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದು ಎಂದು ಮನವಿ ಮಾಡಿದ್ದರು.

ಅಂಧೇರಿಯ ಶಾಸಕರಾಗಿದ್ದ ರಮೇಶ್ ಲಟ್ಕೆಯವರು ಕಳೆದ ವರ್ಷ ಅನಿರೀಕ್ಷಿತ ಸಾವಿಗೀಡಾಗಿದ್ದರು. ಆ ಸ್ಥಾನಕ್ಕೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿತ್ತು. ಕೇವಲ ಒಂದೂವರೆ ವರ್ಷ ಅಧಿಕಾರವಧಿಯ ಆ ಸ್ಥಾನವನ್ನು ಅವರಿಗೆ ಪತ್ನಿಗೆ ಬಿಟ್ಟುಕೊಡಬೇಕು ಎಂಬ ಅನುಕಂಪದ ಮಾತುಗಳು ಕೇಳಿಬಂದಿದ್ದವು. ಹಾಗಾಗಿ ಬಿಜೆಪಿ ಸೇರಿದಂತೆ ಇತರ ಪಕ್ಷಗಳು ನಾಮಪತ್ರ ಸಲ್ಲಿಸಿಲ್ಲ ಎನ್ನಲಾಗಿದೆ.

ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮುಖ್ಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಉಪ ಚುನಾವಣೆಯು ನವೆಂಬರ್ 03ರಂದು ನಡೆಯಲಿದೆ.

ಇದನ್ನೂ ಓದಿ; ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಈ ಕ್ಷಣಕ್ಕಾಗಿ ಬಹುದಿನದಿಂದ ಕಾಯುತ್ತಿದ್ದೆ – ಮತ ಚಲಾಯಿಸಿದ ನಂತರ ಸೋನಿಯಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...