Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...