Homeಮುಖಪುಟಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

- Advertisement -
- Advertisement -

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿ, ಜೊತೆಗೆ ಒಂದು ವರ್ಷದೊಳಗೆ ಪತ್ತೆಯಾದಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂಬ ಷರತ್ತು ವಿಧಿಸಿದೆ. ಆದಾಗ್ಯೂ, ಆರೋಪಿಗೆ ವಿಧಿಸಿದ ಈ ಷರತ್ತಿನ ಅವಧಿ ಒಂದು ವರ್ಷ ಆಗಿದ್ದು, ಅದರ ನಂತರ ಷರತ್ತು ಇರುವುದಿಲ್ಲ ಎಂದು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರ ಏಕ ಪೀಠವು ಅಕ್ಟೋಬರ್ 12 ರಂದು ನೀಡಿದ ಆದೇಶದಲ್ಲಿ ಹೇಳಿದೆ.

ಆರೋಪಿ ಮತ್ತು 22 ವರ್ಷದ ಯುವತಿ ಒಪ್ಪಿತ ಸಂಬಂಧದಲ್ಲಿದ್ದರು, ಆದರೆ ಆ ಯುವತಿ ಗರ್ಭಿಣಿ ಎಂದು ತಿಳಿದ ನಂತರ ಆರೋಪಿಯು ಅವರಿಂದ ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದನು. ಈ ವೇಳೆ ಅತ್ಯಾಚಾರ ಮತ್ತು ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯು 2020 ರ ಫೆಬ್ರವರಿಯಲ್ಲಿ ಯುವಕನ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ನಂತರ ಆತನನ್ನು ಬಂಧಿಸಲಾಯಿತು. ಯುವತಿ ತಮ್ಮ ದೂರಿನಲ್ಲಿ, ತಾವಿಬ್ಬರು 2018 ರಿಂದ ಸಂಬಂಧ ಹೊಂದಿದ್ದಾಗಿ ಮತ್ತು ತಮ್ಮ ಸಂಬಂಧಗಳ ಬಗ್ಗೆ ಇಬ್ಬರ ಕುಟುಂಬಗಳಿಗೆ ತಿಳಿದಿತ್ತು, ಜೊತೆಗೆ ಅವರು ಅದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

2019 ರಲ್ಲಿ, ಯುವತಿಯು ತಾನು ಗರ್ಭಿಣಿ ಎಂಬುವುದನ್ನು ಆರೋಪಿ ಯುವಕನಿಗೆ ತಿಳಿಸಿದ್ದು, ಆದರೆ ಯುವಕನು ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದನು. ತನ್ನ ಗರ್ಭಧಾರಣೆಯ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಲು ಇಷ್ಟಪಡದ ಕಾರಣ ಮಹಿಳೆ ತನ್ನ ಮನೆಯನ್ನು ತೊರೆದಿದ್ದರು. ಜನವರಿ 27, 2020 ರಂದು, ಅವರು ನಗರದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು.

ಜನವರಿ 30 ರಂದು ಯುವತಿಯು ಮಗುವನ್ನು ಕಟ್ಟಡದ ಮುಂದೆ ಬಿಟ್ಟು ಹೋಗಿದ್ದು, ನಂತರ ಮಗುವನ್ನು ತ್ಯಜಿಸಿದ್ದಕ್ಕಾಗಿ ಆಕೆಯ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಮೂರ್ತಿ ಡಾಂಗ್ರೆ ಅವರು ತಮ್ಮ ಆದೇಶದಲ್ಲಿ, “ಯುವತಿ ನ್ಯಾಯಾಲಯದ ಮುಂದೆ ಬರದೆ ಇರಲು ಇದೇ ಕಾರಣಕ್ಕೆ ಇರಬಹುದು” ಎಂದು ಹೇಳಿದ್ದಾರೆ.

ಈ ನಡುವೆ ಯುವತಿಯನ್ನು ತಾನು ಮದುವೆಯಾಗುವುದಾಗಿ ಮತ್ತು ಮಗುವಿನ ಪಿತೃತ್ವವನ್ನು ಸ್ವೀಕರಿಸಲು ತಾನು ಸಿದ್ಧನಿರುವುದಾಗಿ ಆರೋಪಿ ಯುವಕ ಹೈಕೋರ್ಟ್‌ಗೆ ಭರವಸೆ ನೀಡಿದ್ದಾನೆ. ಆದರೆ ಯುವತಿ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು, ಶಿಶುಪಾಲನಾ ಕೇಂದ್ರಕ್ಕೆ ದಾಖಲಾಗಿದ್ದ ಮಗುವನ್ನು ಈಗಾಗಲೇ ದತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ಮೇಲೆ ಮತ್ತೊಂದು ಪ್ರಕರಣ: ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

“ಇಂತಹ ಸಂದರ್ಭಗಳಲ್ಲಿ ಘಟನೆ ವರದಿಯಾದಾಗ, ಸಂತ್ರಸ್ತೆ ಯುವತಿ ವಯಸ್ಕರಾಗಿದ್ದರು ಮತ್ತು ಸಂಬಂಧವು ಒಮ್ಮತದಿಂದ ಕೂಡಿತ್ತು ಎಂದು ಅವರು ಈಗಾಗಲೇ ಹೇಳಿದ್ದಾರೆ” ಎಂದು ಹೈಕೋರ್ಟ್ ಹೇಳಿದೆ.

“ಅರ್ಜಿದಾರ ಯುವಕನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಸಂತ್ರಸ್ತೆ ಒಂದು ವರ್ಷದೊಳಗೆ ಪತ್ತೆಯಾದರೆ, ಯುವಕ ಅವರನ್ನು ವಿವಾಹವಾಗಬೇಕು ಮತ್ತು ವರ್ಷದ ನಂತರ ಈ ಷರತ್ತಿಗೆ ಬದ್ದರಾಗಬೇಕಿಲ್ಲ” ಆದೇಶವು ಹೇಳಿದ್ದು, 25 ಸಾವಿರ ರೂ.ಗಳ ಬಾಂಡ್‌ನಲ್ಲಿ ನ್ಯಾಯಾಲಯವು ಯುವಕನಿಗೆ ಜಾಮೀನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...