Homeಮುಖಪುಟಗೋಯೆಂಕಾ ವಿವಿಯಲ್ಲಿ ನೈಜೀರಿಯಾ- ಭಾರತ ವಿದ್ಯಾರ್ಥಿಗಳ ಹೊಡೆದಾಟ; ಎರಡು ಗುಂಪುಗಳ ಮೇಲೂ ಎಫ್‌ಐಆರ್‌

ಗೋಯೆಂಕಾ ವಿವಿಯಲ್ಲಿ ನೈಜೀರಿಯಾ- ಭಾರತ ವಿದ್ಯಾರ್ಥಿಗಳ ಹೊಡೆದಾಟ; ಎರಡು ಗುಂಪುಗಳ ಮೇಲೂ ಎಫ್‌ಐಆರ್‌

- Advertisement -
- Advertisement -

ಗುರುಗ್ರಾಮ: ಫುಟ್‌ಬಾಲ್ ಆಡುವಾಗ ಭಾರತೀಯ ಮತ್ತು ನೈಜೀರಿಯಾ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಜಿ.ಡಿ.ಗೋಯೆಂಕಾ ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕನಿಷ್ಠ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉಭಯ ಗುಂಪುಗಳ ಮೇಲೂ ಎಫ್‌ಐಆರ್‌ ದಾಖಲಾಗಿದೆ. ಮತ್ತೊಂದೆಡೆ ವಿಶ್ವವಿದ್ಯಾಲಯವು ವಿಚಾರಣೆಯನ್ನು ಕೈಗೆತ್ತುಕೊಂಡಿದೆ. ಎಂಟು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯರಿಂದ ಕಿರುಕುಳ ಎದುರಾಗಿದೆ ಎಂದು ಆರೋಪಿಸಿರುವ ನೈಜೀರಿಯಾದ ವಿದ್ಯಾರ್ಥಿಗಳು ಕ್ಯಾಂಪಸ್ ತೊರೆಯಲು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ ವಿಶ್ವವಿದ್ಯಾನಿಲಯವು ಇದನ್ನು ನಿರಾಕರಿಸಿದೆ.

ರಾಯಭಾರ ಕಚೇರಿ ಮಧ್ಯಪ್ರವೇಶಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. “ನಮಗೆ ಸ್ಥಳೀಯರಿಂದ ಕಿರುಕುಳವಾಗುತ್ತಿದೆ. ನಿನ್ನೆ ಸಂಜೆ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಮತ್ತು ಫುಟ್‌ಬಾಲ್ ಮೈದಾನದಲ್ಲಿ ನಮ್ಮನ್ನು ಕ್ರೂರವಾಗಿ ಥಳಿಸಲಾಯಿತು. ನಾವು ಈಗ ದೆಹಲಿಗೆ ಬಂದು ರಾಯಭಾರ ಕಚೇರಿಯ ಅಧಿಕಾರಿಗಳನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದೇವೆ” ಎಂದು ರಬಿಯು ಎಂಬುವರು ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ನೈಜೀರಿಯಾದ ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫಾರ್ಮಸಿ ವಿದ್ಯಾರ್ಥಿ ಸುಲ್ತಾನ್ ಖಾನ್ ಅವರು ಪ್ರತಿ ದೂರು ದಾಖಲಿಸಿದ್ದಾರೆ.

ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಧೀರೇಂದ್ರ ಸಿಂಗ್ ಪರಿಹಾರ್ ಪ್ರತಿಕ್ರಿಯಿಸಿ, “ಆಟಗಾರನನ್ನು ಬದಲಿಸುವ ಬಗ್ಗೆ ವಿದ್ಯಾರ್ಥಿಗಳು ವಾದಿಸಿದಾಗ ಶುಕ್ರವಾರ ವಿವಾದ ಉಂಟಾಯಿತು. ಸಮಸ್ಯೆ ಬಗೆಹರಿದಿತ್ತು. ಆದರೆ ಶನಿವಾರ ಮತ್ತೆ ಮರುಜೀವ ಪಡೆಯಿತು” ಎಂದು ತಿಳಿಸಿದ್ದಾರೆ.

“ಜಗಳ ನಡೆದು ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎಂಟು ವಿದ್ಯಾರ್ಥಿಗಳಿಗೆ ದೀರ್ಘ ರಜೆ ತೆಗೆದುಕೊಳ್ಳಲು ಹೇಳಿದ್ದೇವೆ. ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ” ಎಂದಿದ್ದಾರೆ. ಈ ಹಿಂದೆಯೂ ನಮಾಜ್ ಮಾಡುವ ವಿಚಾರದಲ್ಲಿ ಫುಟ್ಬಾಲ್ ಮೈದಾನದಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿತ್ತು.

ಭಾರತೀಯ ಮತ್ತು ನೈಜೀರಿಯಾ ವಿದ್ಯಾರ್ಥಿಗಳ ನಡುವೆ ಜಗಳ ನಡೆದ ಎರಡು ದಿನಗಳ ನಂತರ, ಜಿಡಿ ಗೋಯೆಂಕಾ ವಿಶ್ವವಿದ್ಯಾಲಯದ ಕ್ಯಾಂಪಸ್ ಸ್ತಬ್ಧವಾಗಿದೆ. ಈ ವಿಷಯದ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಲಾಯಿತು. ನೈಜೀರಿಯಾದ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

ಪೊಲೀಸರ ಪ್ರಕಾರ ಕ್ಯಾಂಪಸ್‌ನಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಶುಕ್ರವಾರ ನಡೆದ ಘರ್ಷಣೆಯಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಶ್ವವಿದ್ಯಾನಿಲಯದ ಸುಮಾರು 50 ನೈಜೀರಿಯನ್ ವಿದ್ಯಾರ್ಥಿಗಳು ಭಾರತೀಯ ವಿದ್ಯಾರ್ಥಿಗಳ ಕಿರುಕುಳವನ್ನು ಆರೋಪಿಸಿ ತಾತ್ಕಾಲಿಕವಾಗಿ ಕ್ಯಾಂಪಸ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತವು ಅಂತಹ ಬೆಳವಣಿಗೆಯಾಗಿಲ್ಲ ಎಂದು ಹೇಳಿಕೆ ನೀಡಿದೆ. ಈ ವಿಷಯವನ್ನು ಗಮನಿಸಿ, ನೈಜೀರಿಯಾ ರಾಯಭಾರಿ ಕಚೇರಿಯ ತಂಡ ಶನಿವಾರ ರಾತ್ರಿ ವಿಶ್ವವಿದ್ಯಾನಿಲಯಕ್ಕೆ ತೆರಳಿ ನೈಜೀರಿಯಾದ ವಿದ್ಯಾರ್ಥಿಗಳೊಂದಿಗೆ ಘರ್ಷಣೆ ನಡೆಸಿದ ಭಾರತೀಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ.

“ದೆಹಲಿಯ ಸಮೀಪವಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನೈಜೀರಿಯಾದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. 30,000 ನೈಜೀರಿಯನ್ ವಿದ್ಯಾರ್ಥಿಗಳು ಹಣ ಪಾವತಿಸಿ ಭಾರತದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, 50,000 ಭಾರತೀಯರು ಹಣ ಸಂಪಾದಿಸಲು ನೈಜೀರಿಯಾದಲ್ಲಿ ವಾಸಿಸುತ್ತಿದ್ದಾರೆ” ಎಂದು ಬರಹಗಾರ ಅಶೋಕ್ ಸ್ವೈನ್‌ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...