Homeಮುಖಪುಟ‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

- Advertisement -
- Advertisement -

ಅಮೆರಿಕನ್‌‌‌ ಡಾಲರ್‌‌ ವಿರುದ್ಧ ಭಾರತೀಯ ರುಪಾಯಿ 82.38 ರೂ.ಗೆ ಕುಸಿದಿದೆ. ಇದು ಐತಿಹಾಸಿಕ ದಾಖಲೆಯ ಕುಸಿತವಾಗಿದ್ದು, ಭಾರತೀಯ ಕರೆನ್ಸಿ ಮೇಲೇಲುವ ಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈತನ್ಮಧ್ಯೆ, ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಎಲ್ಲಾ ತರ್ಕಬದ್ಧತೆಯ ನಿಯಮಗಳನ್ನು ಗಾಳಿಗೆ ತೂರಿ, “ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ” ಎಂದು ಹೇಳಿದೆ.

ಅಮೆರಿಕದ ವಾಶಿಂಗ್‌ಟನ್‌‌ ಡಿಸಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ಒಕ್ಕೂಟ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಭಾರತೀಯ ರೂಪಾಯಿ ಮೌಲ್ಯದಲ್ಲಿ 8% ದಷ್ಟು ಕುಸಿದಿರುವುದನ್ನು ಸಮರ್ಥಿಸಿಕೊಂಡಿದ್ದರು. “ರುಪಾಯಿ ಕುಸಿಯುತ್ತಿಲ್ಲ, ಬದಲಾಗಿ ಅಮೇರಿಕನ್ ಡಾಲರ್‌ ಬಲಗೊಳ್ಳುತ್ತಿದೆ” ಎಂದು ಅವರು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಈಡಾಗಿದೆ. ವಿಪಕ್ಷಗಳು ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೂಡ ಸಚಿವರನ್ನು ವ್ಯಂಗ್ಯವಾಡಿದ್ದಾರೆ. “ಶುಭಾಶಯಗಳು, ಜೆಎನ್‌ಯು ವಿಫಲವಾಗಿಲ್ಲ” ಎಂದು ಬರೆದಿರುವ ಅವರು, ‘‘ನಾವು ಪಂದ್ಯ ಸೋತಿಲ್ಲ, ನಮ್ಮ ವಿರುದ್ಧ ಇರುವ ತಂಡ ಗೆದ್ದಿದೆ” ಎಂದು ಬರೆದಿರುವ ಜೊತೆಗೆ ನಿರ್ಮಲಾ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಆಮ್‌ ಆದ್ಮಿ ಪಕ್ಷ ನಿರ್ಮಲಾ ಅವರನ್ನು ಟೀಕಿಸಿದ್ದು, “ಮೋದಿ ಅವರ ‘ಸ್ಕೂಲ್ ಆಫ್ ಲಾಜಿಕ್‌’ನ ಹೆಮ್ಮೆಯ ವಿದ್ಯಾರ್ಥಿ” ಎಂದು ವಿಡಿಯೊವೊಂದನ್ನು ಹಂಚಿಕೊಂಡಿದೆ. ಅದರಲ್ಲಿ, ನಿರ್ಮಲಾ ಅವರ ವೈರಲ್ ಹೇಳಿಕೆ ಮತ್ತು ಪ್ರಧಾನಿ ಮೋದಿ ಅವರು ತಾಪಮಾನ ಹೆಚ್ಚಿರುವ ಕುರಿತು ನೀಡಿರುವ ಹೇಳಿಕೆಯನ್ನು ನೀಡಲಾಗಿದೆ.

ತಾಪಮಾನ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಕೇಳಿದಾಗ ಅವರು, “ತಾಪಮಾನ ಬದಲಾಗಿಲ್ಲ, ವಯಸ್ಸು ಹೆಚ್ಚಾದ ಕಾರಣ ಸಹಿಸುವ ಶಕ್ತಿ ಕಡಿಮೆಯಾದಾಗ ತಾಪಮಾನ ಹೆಚ್ಚಾದಂತೆ ಅನಿಸುತ್ತದೆ. ತಾಪಮಾನ ಬದಲಾಗಿಲ್ಲ, ನಾವು ಬದಲಾಗಿದ್ದೇವೆ” ಎಂದು ಮೋದಿ ಹೇಳಿದ್ದರು. ಈ ಹೇಳಕೆ ಕೂಡಾ ವ್ಯಾಪಕ ಟ್ರೋಲ್‌ಗೆ ಒಳಗಾಗಿತ್ತು.

ಇದನ್ನೂ ಓದಿ: ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಡಿಎಂಕೆ ನಾಯಕರಾದ ಇಸೈ ಅವರು, ಸಚಿವರ ಈ ಹೇಳಿಕೆಗೆ ಅವರು ಅರ್ಥಶಾಸ್ತ್ರದ ನೋಬೆಲ್ ಪಡೆಯಬೇಕು ಎಂದು ವ್ಯಂಗ್ಯವಾಗಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ವ್ಯಂಗ್ಯ ಚಿತ್ರ ಬರೆದಿದ್ದು, ಕೋಚ್ ನಿರ್ಮಲಾ ಸೀತಾರಾಮನ್ ಎಂದು ಬರೆದಿದ್ದಾರೆ.

ಬಿಆರ್‌ಎಸ್‌ ಪಕ್ಷದ ಐಟಿ ಮುಖ್ಯಸ್ಥ ಯತೀಶ್‌ ರೆಡ್ಡಿ ಅವರು, ‘‘ಭೂಮಿಯ ಮೇಲೆ ರೂಪಾಯಿ ಗಟ್ಟಿಯಾಗಿದೆ, ಡಾಲರ್ ಏರುತ್ತಿದೆ’’ ಎಂದು ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಎಎಪಿ ಸಂಸದ ರಾಘವ್ ಚಡ್ಡಾ ಅವರು,“ನನ್ನ ಅರ್ಥಶಾಸ್ತ್ರ ದುರ್ಬಲವಾಗಿಲ್ಲ, ನಿಮ್ಮದು ಶಕ್ತಿಯುತವಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...