Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...