Homeಮುಖಪುಟಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಸನ್ನಡತೆಯ ಆಧಾರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ, ಕೇಂದ್ರದ ಒಪ್ಪಿಗೆಯೂ ಸಿಕ್ಕಿದೆ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಗುಜರಾತ್‌ ಸರ್ಕಾರ ತಿಳಿಸಿದೆ.

- Advertisement -
- Advertisement -

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ಆದರೆ ಮೇ 13, 2022ರಂದು ಸುಪ್ರೀಂಕೋರ್ಟ್ ಅಪರಾಧಿಗಳಲ್ಲಿ ಒಬ್ಬರು ಸಲ್ಲಿಸಿದ ಮನವಿಯನ್ನು ‌ಪರಿಶೀಲಿಸುತ್ತಾ, “ಸೂಕ್ತ ಸರ್ಕಾರ” ತೆಗೆದುಕೊಳ್ಳಲು ಸರ್ಕಾರಕ್ಕೆ ತಿಳಿಸಿತ್ತು.

ಗುಜರಾತ್ ಸರ್ಕಾರದ ಅಫಿಡವಿಟ್‌ನಲ್ಲಿ 1992ರ ನೀತಿಯನ್ನು ಉಲ್ಲೇಖಿಸಲಾಗಿದೆ. “ಈ ನೀತಿಯ ಪ್ರಕಾರ ಜೈಲಿನ ಇನ್ಸ್‌ಪೆಕ್ಟರ್ ಜನರಲ್ ರವರು ಅಪರಾಧಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಜಿಲ್ಲಾ ಪೊಲೀಸ್ ಅಧಿಕಾರಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ಜೈಲು ಅಧೀಕ್ಷಕರು ಮತ್ತು ಸಲಹಾ ಮಂಡಳಿ ಸಮಿತಿಯ ಅಭಿಪ್ರಾಯವನ್ನು ಪಡೆಯುವುದು ಕಡ್ಡಾಯವಾಗಿದೆ. ಅದರ ನಂತರ, ಜೈಲಿನ ಇನ್ಸ್‌ಪೆಕ್ಟರ್ ಜನರಲ್ ಅವರು ನಾಮಮಾತ್ರ ಪಟ್ಟಿಯ ಪ್ರತಿ ಮತ್ತು ತೀರ್ಪಿನ ಪ್ರತಿಯೊಂದಿಗೆ ತಮ್ಮ ಅಭಿಪ್ರಾಯವನ್ನು ನೀಡುವುದಕ್ಕಾಗಿ ಸರ್ಕಾರಕ್ಕೆ ಶಿಫಾರಸನ್ನು ಕಳುಹಿಸಲು ಕಡ್ಡಾಯ. ಇದಲ್ಲದೆ ಅಕಾಲಿಕ ಬಿಡುಗಡೆಯ ಅರ್ಜಿಯ ಪರಿಗಣನೆಯ ಸಮಯದಲ್ಲಿ ಜೈಲ್ ಸಲಹಾ ಮಂಡಳಿಯು 1992ರ ನೀತಿಯನ್ನು ಅನುಸರಿಸುತ್ತದೆ” ಎಂದು ಸರ್ಕಾರ ತಿಳಿಸಿದೆ.

ಸರ್ಕಾರವು ಹಲವಾರು ಅಧಿಕಾರಿಗಳ ಅಭಿಪ್ರಾಯವನ್ನು ಕೇಳಿದ ಬಳಿಕ ನಿರ್ಧಾರ ಪ್ರಕಟಿಸಿರುವುದಾಗಿ ತಿಳಿಸಿದೆ. ಪೊಲೀಸ್ ಸೂಪರಿಂಟೆಂಡೆಂಟ್, ಸಿಬಿಐ, ವಿಶೇಷ ಅಪರಾಧ ವಿಭಾಗ (ಮುಂಬೈ); ಗ್ರೇಟರ್ ಬಾಂಬೆಯ ವಿಶೇಷ ಸಿವಿಲ್ ನ್ಯಾಯಾಧೀಶರು (CBI), ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್; ದಾಹೋದ್ ಪೊಲೀಸ್ ಸೂಪರಿಂಟೆಂಡೆಂಟ್; ದಾಹೋದ್‌ನ ಕಲೆಕ್ಟರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ; ಗೋಧ್ರಾ ಉಪ-ಜೈಲಿನ ಜೈಲ್ ಸೂಪರಿಂಟೆಂಡೆಂಟ್, ಜೈಲು ಸಲಹಾ ಸಮಿತಿ; ಅಹಮದಾಬಾದ್‌ ಜೈಲುಗಳ ಹೆಚ್ಚುವರಿ ಡೈರೆಕ್ಟರ್ ಜನರಲ್ ಅವರ ಅಭಿಪ್ರಾಯಗಳನ್ನು ಬಿಡುಗಡೆಯ ಮೊದಲು ಕೇಳಲಾಗಿದೆ. ಮೊದಲ ಇಬ್ಬರನ್ನು ಹೊರತುಪಡಿಸಿ, ಉಳಿದವರೆಲ್ಲರೂ ಅವರ ಬಿಡುಗಡೆಗೆ ಶಿಫಾರಸು ಮಾಡಿದ್ದಾರೆ ಎಂದು ಸರ್ಕಾರ ಹೇಳಿದೆ.

ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಾಗಿರುವುದರಿಂದ, ರಾಜ್ಯವು ತನ್ನ ಶಿಫಾರಸನ್ನು ಕೇಂದ್ರಕ್ಕೆ ಸಲ್ಲಿಸಿದೆ. “ಕೇಂದ್ರವು 11 ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ” ಎಂದು 11.07.2022ರ ಪತ್ರವನ್ನು ಅಫಡವಿಟ್‌ನಲ್ಲಿ ಸಲ್ಲಿಸಲಾಗಿದೆ.

“…ರಾಜ್ಯ ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಪರಿಗಣಿಸಿದೆ. 11 ಕೈದಿಗಳು ಜೈಲಿನಲ್ಲಿ 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದ ಕಾರಣ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರವು ತನ್ನ 1992ರ ನೀತಿಯ ಪ್ರಕಾರ ಕೈದಿಗಳನ್ನು ಬಿಡುಗಡೆ ಮಾಡಿದೆ ಹೊರತು, ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕೈದಿಗಳಿಗೆ ನೀಡಿದ ಉಪಶಮನದ ನಿರ್ಣಯದಿಂದ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು.

ಈ ವರ್ಷದ ಆಗಸ್ಟ್ 15ರಂದು ಗುಜರಾತ್ ಸರ್ಕಾರವು 2008ರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಪ್ರಕರಣದ ಎಲ್ಲಾ 11 ಅಪರಾಧಿಗಳನ್ನು ಬಿಡುಗಡೆ ಮಾಡಿತು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ ಎರಡು ಅರ್ಜಿಗಳ ಆಧಾರದಲ್ಲಿ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರದ ಅನುಮತಿ ಇಲ್ಲದೆಯೇ ಕ್ರಮ ಜರುಗಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದಕ್ಕಿಂತಲೂ ದುಃಕಕರವಾದ ಮತ್ತು ಹೀನಾಯವಾದ ಸಂಗತಿ ಮತ್ತೊಂದು ಇರಲಾರದು. ಪ್ರಬುತ್ವ ಜಾತಿ, ಜನಾಂಗ, ದರ್ಮಗಳ ನಡುವೆ ತಾರತಮ್ಯವನ್ನು ಮಾಡಬಾರದು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...