Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...