Homeಕರ್ನಾಟಕರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣವನ್ನು ರಾಮನಗರ ಪೊಲೀಸರು ದಾಖಲಿಸಿದ್ದಾರೆ.

- Advertisement -
- Advertisement -

ಹತ್ತು ವರ್ಷದ ದಲಿತ ಬಾಲಕಿ ಮೇಲೆ ನಿವೃತ್ತ ಪೊಲೀಸ್‌ ಪೇದೆ ಅತ್ಯಾಚಾರಕ್ಕೆ ಯತ್ನಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಹಾಗೂ ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆ’ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರಾಮನಗರ ಟೌನ್‌ ಸರ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ತಾಯಿ ಘಟನೆಯ ಕುರಿತು ದೂರು ನೀಡಿದ್ದು, ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ (65) ಎಂಬಾತನ ವಿರುದ್ಧ ಎಫ್‌ಐಆರ್‌ ಆಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ಹೇಳಿದ್ದೇನು?

“ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ನನ್ನ ಮಗಳು ಹೆದರಿಕೊಂಡು ಹಾಗೂ ಜ್ವರದಿಂದ ಬಳಲುತ್ತಿರುವುದನ್ನು ಗಮನಿಸಿದೆ. ಯಾಕಮ್ಮ? ಏನಾಯಿತು? ಎಂದು ಕೇಳಿದಾಗ, -ಅಮ್ಮ ನನಗೆ ಭಯವಾಗುತ್ತಿದೆ- ಎಂದಳು. ಭಯದಿಂದ ನನ್ನನ್ನು ಬಿಗಿದಪ್ಪಿಕೊಂಡಳು. ಭಯಪಡಬೇಡ ಏನಾಯಿತೆಂದು ಹೇಳು ಎಂದಾಗ ವಿಷಯ ತಿಳಿಸಿದಳು.”

“ದಿನಾಂಕ 14-10-2022ರಂದು (ಶುಕ್ರವಾರ) ಸಂಜೆ 7.30ರ ವೇಳೆಯಲ್ಲಿ ನಮ್ಮ ಗ್ರಾಮದ ಮಲ್ಲಿಕಾರ್ಜುನ್‌ ಎಂಬವರ ಅಂಗಡಿಗೆ ಹೋಗಿದ್ದೆ. ಆಗ ಆ ಅಂಕಲ್‌ ನನ್ನ ಬಟ್ಟೆ ಬಿಚ್ಚುವಂತೆ ಗದರಿಸಿದರು ಎಂದು ಮಗಳು ತಿಳಿಸಿದಳು. ಆಗ ನನ್ನ ಮಗಳು ಆಗಲ್ಲ ಎಂದಾಗ ಹೆದರಿಸಿದ್ದಾನೆ. ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾನೆ.”

“ಅಂಗಡಿ ಮಾಲೀಕನೂ ಆಗಿರುವ ಮಲ್ಲಿಕಾರ್ಜುನ, ತನ್ನ ಹೆಂಡತಿ ಆಟೋದಲ್ಲಿ ಬಂದಿದ್ದು ನೋಡಿದ ತಕ್ಷಣವೇ ನನ್ನ ಮಗಳ ಗುಪ್ತಾಂಗಳನ್ನು ಮುಟ್ಟಿದ್ದಾನೆ. ನನ್ನ ಮಗಳು ಮಲ್ಲಿಕಾರ್ಜುನನ ಕೈಯನ್ನು ಕಚ್ಚಿ ಓಡಿ ಬಂದಿದ್ದಾಳೆ. ಇದರಿಂದ ಭಯಭೀತಳಾಗಿದ್ದ ನನ್ನ ಮಗಳು ಎರಡು ದಿನಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು.”

“ನಾನು ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಮಲ್ಲಿಕಾರ್ಜುನ್‌ನ ಹೆಂಡತಿಯ ಹತ್ತಿರ ಘಟನೆಯನ್ನು ವಿವರಿಸಿ, ನನ್ನ ಮಗಳಿಗೆ ಆಗಿರುವ ಅನ್ಯಾಯವನ್ನು ಹೇಳಿದೆ. ಪೊಲೀಸರಿಗೆ ದೂರು ನೀಡಿರೆಂದು ಮಲ್ಲಿಕಾರ್ಜುನ್‌ ಅವರ ಹೆಂಡತಿ ತಿಳಿಸಿದರು.”

“ಊರಿನ ಗ್ರಾಮಸ್ಥರಿಗೆ ತಿಳಿಸಿದೆ. ನಂತರ ಮಲ್ಲಿಕಾರ್ಜುನ್‌ ಮನೆ ಹತ್ತಿರ ಹೋಗಿ ನ್ಯಾಯ ಕೇಳಿದಾಗ ನೀವು ‘ಹೊಲೆಯರು, ನಮ್ಮ ಮನೆಯ ಹತ್ತಿರ ಯಾಕೆ ಬಂದಿರಿ ’ ಎಂದು ಜಾತಿ ನಿಂದನೆ ಮಾಡಿದ್ದಾರೆ. ಊರಿನ ಜನರಿಗೂ ಬೈದಿದ್ದಾನೆ. ಊರಿನ ಜನರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.”

-ಹೀಗೆ ನೊಂದ ತಾಯಿ ದೂರು ನೀಡಿದ್ದಾರೆ.

ನ್ಯಾಯಾಂಗ ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲಿವೆ. ಚಿತ್ರದುರ್ಗದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಮಳವಳ್ಳಿಯಲ್ಲಿ ಮೊನ್ನೆಯಷ್ಟೇ ಬಾಲಕಿ ಮೇಲಿನ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಈಗ ರಾಮನಗರದಲ್ಲಿ ಪ್ರಕರಣದ ವರದಿಯಾಗಿದೆ ಎಂದು ರಾಮನಗರ ಜಿಲ್ಲಾ, ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಸಮತಾ ರಾಣಿ, ವಿ.ವೆಂಕಟೇಶ್, ಎನ್‌.ಹರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ ಅತ್ಯಾಚಾರದ ಆರೋಪಿಯಾಗಿದ್ದು, ಪ್ರಕರಣ ದಾಖಲಿಸುವುದು ವಿಳಂಬವಾಗಿದೆ. ಸಿಡಬ್ಲ್ಯೂಸಿ ಗಮನಕ್ಕೆ ತರುವುದು ತಡವಾಗಿದೆ. ಹೀಗಾಗಿ ತಪ್ಪಿತಸ್ಥ ಪೊಲೀಸರ ವಿರುದ್ಧವೂ ತನಿಖೆ ನಡೆಸಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿತ್ತು.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಮಠದಲ್ಲಿ ಓದುತ್ತಿದ್ದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿ, ಬಂಧನದಲ್ಲಿದ್ದಾರೆ. ಅಲ್ಲದೆ ಋತುಮತಿಯಾಗದ ಹೆಣ್ಣುಮಕ್ಕಳ ಮೇಲೂ ಮರುಘಾ ಮಠಾಧೀಶರು ಅತ್ಯಾಚಾರ ಎಸಗಿರುವ ಆರೋಪ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...