Homeಮುಖಪುಟಬಿಲ್ಕಿಸ್ ಪ್ರಕರಣದ ಅಪರಾಧಿ ಪೆರೋಲ್‌ನಲ್ಲಿದ್ದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಎದುರಿಸುತ್ತಿದ್ದಾನೆ

ಬಿಲ್ಕಿಸ್ ಪ್ರಕರಣದ ಅಪರಾಧಿ ಪೆರೋಲ್‌ನಲ್ಲಿದ್ದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಎದುರಿಸುತ್ತಿದ್ದಾನೆ

ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆ ಮಾಡುವ ಪ್ರಸ್ತಾಪ ಬಂದಾಗ ದಾಹೋದ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಮಾಹಿತಿ ನೀಡಿದ್ದಾರೆ. ಆದರೂ ಸಹ ಗುಜರಾತ್ ಸರ್ಕಾರ ಅಪರಾಧಿಯನ್ನು ಬಿಡುಗಡೆ ಮಾಡಿದೆ!

- Advertisement -
- Advertisement -

ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾಗಿದ್ದ ಸದ್ಯ ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಯಾಗಿರುವ ಮಿತೇಶ್ ಚಿಮನ್‌ಲಾಲ್ ಭಟ್ ಎಂಬಾತ ಜೂನ್ 19, 2020ರಂದು ಪೆರೋಲ್‌ನಲ್ಲಿ ಹೊರಗಿರುವಾಗ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಗುಜರಾತ್ ಸರ್ಕಾರದಿಂದ ಬಿಲ್ಕಿಸ್ ಪ್ರಕರಣದ ಅಪರಾಧಿಗಳನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆ ಮಾಡುವ ಪ್ರಸ್ತಾಪ ಬಂದಾಗ ದಾಹೋದ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಮಾಹಿತಿ ನೀಡಿದ್ದಾರೆ. ಆದರೂ ಸಹ ಗುಜರಾತ್ ಸರ್ಕಾರ ಅಪರಾಧಿಯನ್ನು ಬಿಡುಗಡೆ ಮಾಡಿದೆ!.

ಚಿಮನ್ ಲಾಲ್ ಭಟ್ ಮೇಲೆ IPC ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವಿಚಾರಣೆಯು ಬಾಕಿ ಉಳಿದಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ಅನುಬಂಧದಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

57 ವರ್ಷದ ಆರೋಪಿ ವಿರುದ್ಧ ಜೂನ್ 2020 ರಲ್ಲಿ ಐಪಿಸಿಯ ಸೆಕ್ಷನ್ 354, 504, 506 (2) ರ ಅಡಿಯಲ್ಲಿ ರಾಂಧಿಕ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಅಧಿಕೃತ ದಾಖಲೆಗಳ ಪ್ರಕಾರ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ವರ್ಷದ ಮೇ 25 ರವರೆಗೂ ಬಿಲ್ಕಿಸ್ ಬಾನೋ ಪ್ರಕರನದಲ್ಲಿ ಅಪರಾಧಿಯು 954 ಪೆರೋಲ್ ರಜೆಗಳನ್ನು ಅನುಭವಿಸಿದ್ದಾನೆ. 2020 ರಲ್ಲಿ ಎಫ್‌ಐಆರ್ ದಾಖಲಾದ ನಂತರವೂ ಅವರು 281 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು ಎನ್ನಲಾಗಿದೆ.

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಅವಧಿಪೂರ್ವ ಬಿಡುಗಡೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಇತರರು ವಿರೋಧಿಸಿದ್ದರು. ಅದರೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಅದಕ್ಕೆ ಅನುಮತಿ ನೀಡಿತ್ತು ಎಂದು ಗುಜರಾತಿನ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಗುಜರಾತ್ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, “ಅಪರಾಧಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು ಏಕೆಂದರೆ, ಅವರು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ವಾಸವನ್ನು ಪೂರ್ಣಗೊಳಿಸಿದ್ದಾರೆ… ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಒಕ್ಕೂಟ ಸರ್ಕಾರ ಕೂಡಾ ಇದಕ್ಕೆ ಸಹಮತ ವ್ಯಕ್ತಪಡಿಸಿದೆ’’ ಎಂದು ಹೇಳಿದೆ.

ಗುಜರಾತ್ ಸರ್ಕಾರ ಗೋಧ್ರಾ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಬ್ಬರು ಬಿಜೆಪಿ ಶಾಸಕರು, ಬಿಜೆಪಿ ಕೌನ್ಸಿಲರ್ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯನ್ನೊಳಗೊಂಡ ಸಮಿತಿಯನ್ನು ರಚಿಸಿತು. ಆ ಸಮಿತಿಯು ಬಿಲ್ಕಿಸ್ ಪ್ರಕರಣದ ಎಲ್ಲಾ ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡುವಂತೆ ಸರ್ವಾನುಮತದಿಂದ ರಾಜ್ಯ ಗೃಹ ಇಲಾಖೆಗೆ ವರದಿ ಸಲ್ಲಿಸಿತು. ಅಪರಾಧಿಗಳು ಹೊರಬಂದಾಗ ಸಮಿತಿಯಲ್ಲಿದ್ದ ಬಿಜೆಪಿ ಶಾಸಕ ಸಿ.ಕೆ ರೌಲ್ಜಿ ಎಂಬುವವರು, “ಅವರು ಬ್ರಾಹ್ಮಣರು ಉತ್ತಮ ಸಂಸ್ಕಾರವುಳ್ಳವರು, ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಎಂದು ಸಮರ್ಥಿಸಿಕೊಂಡಿದ್ದರು. ಈಗ ಅದೇ ಸಂಸ್ಕಾರವಂತರು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಸಂದರ್ಭದಲ್ಲಿ ಪೆರೋಲ್ ಮೇಲೆ ಹೊರಬಂದಾಗ ಮತ್ತೊಬ್ಬ ಮಹಿಳೆಯ ಮೇಲೆ ದೌರ್ಜನ್ಯ ಎಸಗಿರುವುದು ಏನನ್ನು ಸೂಚಿಸುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ.

ಇದನ್ನೂ ಓದಿ; ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...