Homeಕರ್ನಾಟಕಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಡಾ.ರಾಜ್‌ಕುಮಾರ್‌ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಶಂಕರ್‌ ನಾಗ್ ನಿರ್ದೇಶನದ ‘ಒಂದು ಮುತ್ತಿನ ಕಥೆ’ ಸಿನಿಮಾ ಕನ್ನಡ ಚಿತ್ರರಂಗದ ಹೆಗ್ಗುರುತುಗಳಲ್ಲಿ ಒಂದು.

- Advertisement -
- Advertisement -

“ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ” ಎಂದು ನಟ, ಚಿಂತಕ ಚೇತನ್‌ ಅಹಿಂಸಾ ಅವರು ಪೋಸ್ಟ್ ಮಾಡಿದ ಬಳಿಕ, “ಭೂತ ಅವೈದಿಕ ದೇವರು” ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ನಟ ಚೇತನ್‌, “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದಾರೆ.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಆಗ್ರಹಿಸಿದ್ದರು.

ಚೇತನ್ ಅವರ ಅಭಿಪ್ರಾಯಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಶ್ಲೀಲ ಪದಗಳಿಂದ ಟ್ರೋಲ್ ಪಡೆ ನಿಂದಿಸಿತ್ತು. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಚೇತನ್‌ ಅವರ ಹೇಳಿಕೆಯನ್ನು ಸಮರ್ಥಿಸುವಂತೆ ‘ಒಂದು ಮುತ್ತಿನ ಕಥೆ’ ಸಿನಿಮಾದ ದೃಶ್ಯ ವೈರಲ್ ಆಗುತ್ತಿದೆ.

ವರನಟ ಡಾ.ರಾಜ್‌ಕುಮಾರ್‌ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಕರಾಟೆಕಿಂಗ್ ಶಂಕರ್‌ ನಾಗ್ ನಿರ್ದೇಶನದ ‘ಒಂದು ಮುತ್ತಿನ ಕಥೆ’ ಸಿನಿಮಾ ಕನ್ನಡ ಚಿತ್ರರಂಗದ ಹೆಗ್ಗುರುತುಗಳಲ್ಲಿ ಒಂದು.

ಈ ಸಿನಿಮಾದಲ್ಲಿ ಆದಿವಾಸಿಗಳಿಗೂ ವೈದಿಕ ಪರಂಪರೆಯ ಆರಾಧಕರಿಗೂ ನಡೆಯುವ ಸಂವಾದದ ದೃಶ್ಯವೊಂದನ್ನು ಹಂಚಿಕೊಳ್ಳುತ್ತಿರುವ ಕನ್ನಡಿಗರು, “ಭೂತವು ಅವೈದಿಕ ಪರಂಪರೆಯೆಂದು ಈ ಹಿಂದೆಯೇ ಶಂಕರ್‌ ನಾಗ್‌ ಅವರು ತೋರಿಸಿಕೊಟ್ಟಿದ್ದಾರೆ” ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿರಿ: ‘ಕಾಂತಾರ’ ವಿಮರ್ಶೆ: ಭೂತಾರಾಧನೆಯ ಆಚೆ-ಈಚೆ ಒಂದಿಷ್ಟು…

ಈ ದೃಶ್ಯದಲ್ಲಿ ಆದಿವಾಸಿಗಳನ್ನು ವೈದಿಕ ಪರಂಪರೆಯವರು ನಿಂದಿಸುವುದನ್ನು, ಭೂತಾರಾಧಕರನ್ನು ಹೀಯಾಳಿಸುವುದನ್ನು ನೋಡಬಹುದು.

“ಚೇತನ್ ಅಹಿಂಸಾರನ್ನು ಎಳೆದಾಡುತ್ತಿರುವವರು ದಯಮಾಡಿ ಗಮನಿಸಬೇಕು. ಚೇತನ್ ಈಗ ಹೇಳುತ್ತಿರುವುದನ್ನು ಶಂಕರ್ ನಾಗ್ ಅವರು ದಶಕಗಳ ಹಿಂದೆಯೇ ತಮ್ಮ ಸಿನಿಮಾದ ಮೂಲಕ ಹೇಳಿದ್ದರು” ಎಂದು ಬರಹಗಾರ ಕಾರ್ತಿಕಾದಿತ್ಯ ಬೆಳಗೋಡು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

“ಭೂತಾರಾಧನೆ ವೈದಿಕರ ಹಿಂದೂ ಸಂಪ್ರದಾಯದ ಭಾಗವೆಂದು ಹೇಳುವವರು ಇದನ್ನು ನೋಡಿರಿ” ಎಂದು ಹೋರಾಟಗಾರ ದೀಪು ಗೌಡ ಅವರು ಸಿನಿಮಾ ದೃಶ್ಯವನ್ನು ಹಂಚಿಕೊಂಡಿದ್ದಾರೆ.

“ಭೂತರಾಧನೆ ವೈಧಿಕರ ಹಿಂದೂ ಸಂಪ್ರದಾಯದ ಭಾಗವೆಂದು ಹೇಳುವವರು ನೋಡಿರಿ. ಈಗ ಹೇಳಿ ಭೂತಾರಾಧನೆ ನೆಲಮೂಲದ ಸಂಸ್ಕೃತಿನಾ ಇಲ್ಲ ವೈಧಿಕ ಹಿಂದೂ ಸಂಸ್ಕೃತಿನಾ?” ಎಂದು ತಿಪ್ಪೇಸ್ವಾಮಿ ಎಂಬವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ದೃಶ್ಯವು ವೈರಲ್ ಆಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....