Homeಮುಖಪುಟರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

- Advertisement -
- Advertisement -

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಬುಧವಾರ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.

ಪಕ್ಷದ ಹೊಸ ಅಧ್ಯಕ್ಷರನ್ನು ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌ ಅಭಿನಂದಿಸಿದ್ದು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿರುವುದು ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಆ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ – ಅಪರೂಪದ ಶ್ರೀಸಾಮಾನ್ಯ

“ಸಾವಿರಕ್ಕೂ ಹೆಚ್ಚು ಸಹೋದ್ಯೋಗಿಗಳ ಬೆಂಬಲವನ್ನು ಪಡೆದಿರುವುದು ಮತ್ತು ಭಾರತದಾದ್ಯಂತ ಕಾಂಗ್ರೆಸ್‌ನ ಅನೇಕ ಹಿತೈಷಿಗಳ ಭರವಸೆ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡಿದ್ದು ಒಂದು ಸುಯೋಗವಾಗಿತ್ತು” ಎಂದು ಶಶಿ ತರೂರ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ

20 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ. ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಫಲಿತಾಂಶ ಪ್ರಕಟವಾಗುವ ಮುನ್ನವೇ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೆ ಅಧ್ಯಕ್ಷರಾಗಲಿದ್ದಾರೆ ಎಂದು ಸೂಚಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಹೊಸ ಅಧ್ಯಕ್ಷರಿಗೆ ವರದಿ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ನನ್ನ ಪಾತ್ರ ಏನು ಎಂಬುದನ್ನು ಹೊಸ ಅಧ್ಯಕ್ಷರು ನಿರ್ಧರಿಸುತ್ತಾರೆ, ಈ ಬಗ್ಗೆ ಖರ್ಗೆ ಮತ್ತು ಸೋನಿಯಾ ಅವರನ್ನು ಕೇಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಫಲಿತಾಂಶ ಘೋಷಣೆಗೂ ಮುನ್ನ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌‌ ಅವರು ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿದೆ ಎಂದು ಆರೋಪಿಸಿದ್ದರು. ತರೂರ್ ಅವರ ತಂಡವನ್ನು ಪ್ರತಿನಿಧಿಸುವ ಸಲ್ಮಾನ್ ಸೋಜ್ ಅವರು ನಂತರ “ನ್ಯಾಯಯುತವಾದ ತನಿಖೆಯ ಬಗ್ಗೆ ಭರವಸೆ ನೀಡಿದ್ದಾರೆ” ಎಂದು ಹೇಳಿ, ಎಣಿಕೆ ಮುಂದುವರಿಸಲು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಖರ್ಗೆ ಮತ್ತು ಥರೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ದೇಸೀ ಹಾಗೂ ಮಾರ್ಗ

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

1942 ಜುಲೈ  21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಮಾಜಿಕ ರಂಗಕ್ಕೆ ಪ್ರವೇಶ ಮಾಡಿದ್ದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳ ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....