Homeಮುಖಪುಟ‘ಆಂತರಿಕ ಗಾಯವಿಲ್ಲ’ | ದೆಹಲಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಆರೋಪದ ಕುರಿತು ವೈದ್ಯರ ಸ್ಪಷ್ಟೀಕರಣ

‘ಆಂತರಿಕ ಗಾಯವಿಲ್ಲ’ | ದೆಹಲಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಆರೋಪದ ಕುರಿತು ವೈದ್ಯರ ಸ್ಪಷ್ಟೀಕರಣ

- Advertisement -
- Advertisement -

ಗಾಜಿಯಾಬಾದ್‌ನಲ್ಲಿ ಐದು ಜನರಿಂದ ಎರಡು ದಿನಗಳ ಕಾಲ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದ್ದ 36 ವರ್ಷದ ದೆಹಲಿಯ ಮಹಿಳೆಗೆ ಯಾವುದೇ ಆಂತರಿಕ ಗಾಯಗಳಾಗಿಲ್ಲ ಎಂದು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆ ಬುಧವಾರ ತಿಳಿಸಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ಹಿಂದೆ ಟ್ವೀಟ್ ಮಾಡಿ, “ಆರೋಪಿಗಳು ಮಹಿಳೆಯ ದೇಹದ ಒಳಗಡೆ ಕಬ್ಬಿಣದ ರಾಡ್‌‌‌ ಹಾಕಿದ್ದು, ಇದರಿಂದಾಗಿ ಮಹಿಳೆ ತೀವ್ರ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಹೇಳಿದ್ದರು. ಆದರೆ, ಜಿಟಿಬಿ ಆಸ್ಪತ್ರೆಯು ‘‘ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು, ವೀಕ್ಷಣೆಯಲ್ಲಿದ್ದಾರೆ. ಇಲ್ಲಿಯವರೆಗೆ ಯಾವುದೇ ಆಂತರಿಕ ಗಾಯ ಕಂಡುಬಂದಿಲ್ಲ” ಎಂದು ಅವರು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐವರು ಆರೋಪಿಗಳು ಸಂತ್ರಸ್ತ ಮಹಿಳೆಗೆ ಪರಿಚಿತರಾಗಿದ್ದಾರೆ ಎಂದು ಗಾಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ. “ಸಂತ್ರಸ್ತ ಮಹಿಳೆ ಮತ್ತು ಆರೋಪಿಗಳ ನಡುವೆ ಆಸ್ತಿ ವಿವಾದವಿದೆ ಎಂದು ಹೇಳಲಾಗುತ್ತಿದ್ದು, ಅದರ ಪ್ರಕರಣದವು ಉಪ-ನ್ಯಾಯಾಲಯದಲ್ಲಿದೆ. ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಘಾಜಿಯಾಬಾದ್ ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಪ್ರಕರಣದ ಅಪರಾಧಿ ಪೆರೋಲ್‌ನಲ್ಲಿದ್ದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಎದುರಿಸುತ್ತಿದ್ದಾನೆ

ದೆಹಲಿಗೆ ಉಪಗ್ರಹ ಪಟ್ಟಣವನ್ನು ಸಂಪರ್ಕಿಸುವ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಮಲಗಿರುವ ಬಗ್ಗೆ ಗಾಜಿಯಾಬಾದ್ ಪೊಲೀಸರು ಮಂಗಳವಾರ ಎಚ್ಚರಿಸಿದ್ದಾರೆ. ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ನಿರಾಕರಿಸಿದ್ದರಿಂದ ಪೊಲೀಸರು ಆಕೆಯನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದು ದೂರು ದಾಖಲಿಸಿಕೊಂಡಿದ್ದಾರೆ.

ದೆಹಲಿಯ ಸ್ಯಾಟಲೈಟ್‌‌‌‌‌ ಪಟ್ಟಣವನ್ನು ಸಂಪರ್ಕಿಸುವ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಗಾಜಿಯಾಬಾದ್ ಪೊಲೀಸರು ಮಂಗಳವಾರ ತಿಳಿಸಿದ್ದರು. ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ನಿರಾಕರಿಸಿದ್ದರಿಂದ ಪೊಲೀಸರು ಅವರನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದು ದೂರು ದಾಖಲಿಸಿಕೊಂಡಿದ್ದಾರೆ.

“ಮಹಿಳೆ ಭಾನುವಾರ ಘಾಜಿಯಾಬಾದ್‌ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ದೆಹಲಿಗೆ ಮರಳುತ್ತಿದ್ದರು. ಮಹಿಳೆಯ ಸಹೋದರ ಅವರನ್ನು ಬಸ್ ನಿಲ್ದಾಣಕ್ಕೆ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದರು. ಅವರು ಬಸ್‌ಗಾಗಿ ಕಾಯುತ್ತಿದ್ದಾಗ, ಕಾರೊಂದು ಮಹಿಳೆಯ ಬಳಿಗೆ ಬಂದಿದ್ದು, ಅದರಲ್ಲಿದ್ದ ಐವರು ದುಷ್ಕರ್ಮಗಳು ಅವರನ್ನು ಎಳೆದೊಯ್ದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ಮಹಿಳೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಲಾಗಿದೆ ಎಂದು ಸಂಶಯಿಸಲಾಗಿದೆ. ಈ ಬಗ್ಗೆ ದೆಹಲಿ ಮಹಿಳಾ ಆಯೋಗವು ಗಾಜಿಯಾಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಆರೋಪಿಯ ವಿವರಗಳನ್ನು ಕೇಳಲು ನೋಟಿಸ್ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...