Homeಮುಖಪುಟಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು,“ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಶಶಿ ತರೂರ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಪ್ರಸ್ತುತ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ರಾಹುಲ್ ನನಗೆ ಕರೆ ಮಾಡಿ ನನಗೆ ಶುಭ ಹಾರೈಸಿದ್ದು, ಅವರು ಪಕ್ಷದ ಸೈನಿಕನಾಗಿ, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು…ನಾನು ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ನಾಯಕತ್ವದಲ್ಲಿ ನಾವು ಎರಡು ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದೇವೆ. ಜೊತೆಗೆ ನಾವು ರಾಜ್ಯಗಳಲ್ಲಿಯೂ ಸಹ ಬಲಶಾಲಿಯಾಗಿದ್ದೆವು. ಪಕ್ಷದಲ್ಲಿ ಅವರ ಕೊಡುಗೆ ನೆನಪಿನಲ್ಲಿ ಉಳಿಯುವಂತಹದು” ಎಂದು ಖರ್ಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: 8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ: ಮಲ್ಲಿಕಾರ್ಜುನ ಖರ್ಗೆಯವರ ಹಳೆಯ ಸಂದರ್ಶನ

24 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದು, ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ, ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಮಲ್ಲಿಕಾರ್ಜುನ ಖರ್ಗೆ ಯಾರು?

1942 ಜುಲೈ 21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಾಮಾಜಿಕ ರಂಗಕ್ಕೆ ಪ್ರವೇಶ ಮಾಡಿದರು.

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳು ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...