Homeಮುಖಪುಟಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್ ಖಾನ್‌‌‌ ಉದ್ದೇಶಪೂರ್ವಕ ಟಾರ್ಗೆಟ್‌‌: NCB ವರದಿ

ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್ ಖಾನ್‌‌‌ ಉದ್ದೇಶಪೂರ್ವಕ ಟಾರ್ಗೆಟ್‌‌: NCB ವರದಿ

ಪ್ರಕರಣದಲ್ಲಿ 7 ರಿಂದ 8 ಎನ್‌ಸಿಬಿ ಅಧಿಕಾರಿಗಳ ಪಾತ್ರ ಅನುಮಾನಾಸ್ಪದವಾಗಿದೆ ಎಂದು ತನಿಖಾ ತಂಡದ ವರದಿ ಹೇಳಿದೆ

- Advertisement -
- Advertisement -

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಜಿಲೆನ್ಸ್ ವಿಭಾಗವು ‘ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣ’ದ ತನಿಖೆಯಲ್ಲಿ ಏಜೆನ್ಸಿಯ ಏಳೆಂಟು ಅಧಿಕಾರಿಗಳ ಅಕ್ರಮಗಳು ಮತ್ತು ಅನುಮಾನಾಸ್ಪದ ನಡವಳಿಕೆಯನ್ನು ಸೂಚಿಸುವ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಸೂಚಿಸಿದೆ.

ಕಳೆದ ವರ್ಷ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಅವರನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಸಿಬಿಯ ವಿಜಿಲೆನ್ಸ್ ತಂಡ ಮಂಗಳವಾರ ದೆಹಲಿಯ ಪ್ರಧಾನ ಕಚೇರಿಯಲ್ಲಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದ್ದು, “ತನಿಖೆಯಲ್ಲಿ ಅನೇಕ ನ್ಯೂನತೆಗಳು ಕಂಡುಬಂದಿವೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್ಯನ್ ಪ್ರಕರಣದ ತನಿಖೆ ನಡೆಯುತ್ತಿರುವಾಗ ಮುಂಬೈ ಎನ್‌ಸಿಬಿಯ ನೇತೃತ್ವವನ್ನು ಸಮೀರ್ ವಾಂಖೆಡೆ ವಹಿಸಿದ್ದರು. ಎನ್‌ಸಿಬಿಯು ಏಜೆನ್ಸಿಯ ಏಳರಿಂದ ಎಂಟು ಅಧಿಕಾರಿಗಳ ಕಡೆಯಿಂದ ಅಕ್ರಮಗಳು ಮತ್ತು “ಸಂಶಯಾಸ್ಪದ ನಡವಳಿಕೆ”ಯನ್ನು ಎತ್ತಿತೋರಿಸಿದ್ದು, ಆರ್ಯನ್ ಖಾನ್ ಅವರನ್ನು “ಉದ್ದೇಶಪೂರ್ವಕವಾಗಿ ಗುರಿಪಡಿಸಲಾಗಿದೆ” ಎಂದು ವರದಿಯು ಹೇಳಿದೆ.

ಇದನ್ನೂ ಓದಿ: ಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

ಎನ್‌ಸಿಬಿಯ ತನಿಖಾ ತಂಡವು ಈ ಪ್ರಕರಣದಲ್ಲಿ 7 ರಿಂದ 8 ಎನ್‌ಸಿಬಿ ಅಧಿಕಾರಿಗಳ ಪಾತ್ರವನ್ನು ಅನುಮಾನಾಸ್ಪದವಾಗಿದೆ ಎಂದು ಕಂಡುಕೊಂಡಿದೆ. “ಆರ್ಯನ್ ಖಾನ್ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಲಾಗಿಲ್ಲ. ಏಕೆಂದರೆ ಅಧಿಕಾರಿಗಳು ಆರ್ಯನ್ ಖಾನ್ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದ್ದಾರೆ, ಆದರೆ ಅದನ್ನು ಏಕೆ ಮಾಡಲಾಗಿದೆ ಎಂಬುದು ಇನ್ನೂ ತಿಳಿದಿಲ್ಲ” ಎನ್‌ಸಿಬಿಯ ವಿಜಿಲೆನ್ಸ್ ತಂಡ ತನ್ನ ತನಿಖಾ ವರದಿಯಲ್ಲಿ ಹೇಳಿದೆ.

ಆರ್ಯನ್ ಖಾನ್ ಪ್ರಕರಣದ ಹೊರತಾಗಿ ಇತರ ಪ್ರಕರಣಗಳ ತನಿಖೆಯಲ್ಲೂ ಲೋಪಗಳು ಕಂಡುಬಂದಿದ್ದು, ಈ ಎಲ್ಲದರ ವರದಿಯನ್ನು ವಿಜಿಲೆನ್ಸ್ ತಂಡ ದೆಹಲಿಯ ಕೇಂದ್ರ ಕಚೇರಿಗೆ ಕಳುಹಿಸಿದೆ. ವಿಜಿಲೆನ್ಸ್ ತಂಡವು ತನ್ನ ವರದಿಯಲ್ಲಿ ಮುಂಬೈ ಎನ್‌ಸಿಬಿಯ ವಲಯ ನಿರ್ದೇಶಕರ ಹೆಸರು ಸೇರಿದಂತೆ ಮುಂಬೈ ಎನ್‌ಸಿಬಿಯ ಘಟಕದಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ. ತನಿಖೆಯಲ್ಲಿ ಎನ್‌ಸಿಬಿ 65 ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ಕಳಪೆ ತನಿಖೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒಕ್ಕೂಟ ಸರ್ಕಾರ ಮೇ ತಿಂಗಳಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ: ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಆರ್ಯನ್ ಖಾನ್ ಮತ್ತು ಇತರ ಐವರ ಅವರ ವಿರುದ್ಧ ಯಾವುದೇ ಆರೋಪಪಟ್ಟಿ ಸಲ್ಲಿಸದ ಕಾರಣ ಅವರಿಗೆ ಎನ್‌ಸಿಬಿ ನ್ಯಾಯಾಲಯ ಕ್ಲೀನ್ ಚಿಟ್ ನೀಡಿತ್ತು. ಇದರ ಬೆನ್ನಲ್ಲೇ ಒಕ್ಕೂಟ ಸರ್ಕಾರ ಈ ಕ್ರಮವನ್ನು ಕೈಗೊಂಡಿತ್ತು.

ಕಳೆದ ವರ್ಷ ಅಕ್ಟೋಬರ್ 2 ರಂದು ಮುಂಬೈನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ದಾಳಿಯ ನಂತರ ಆರ್ಯನ್‌ ಖಾನ್ ಅವರನ್ನು ಬಂಧಿಸಲಾಗಿತ್ತು. ಬಾಂಬೆ ಹೈಕೋರ್ಟ್ ಅವರನ್ನು ಬಂಧಿಸಿದ 25 ದಿನಗಳ ನಂತರ ಅವರಿಗೆ ಜಾಮೀನು ನೀಡಿತು.

ಮೇ 27 ರಂದು ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ 14 ಆರೋಪಿಗಳ ವಿರುದ್ಧ 6,000 ಪುಟಗಳ ಚಾರ್ಜ್‌ಶೀಟ್ ಅನ್ನು ಎನ್‌ಸಿಬಿ ಸಲ್ಲಿಸಿತ್ತು. ಆದರೆ ಇದರಲ್ಲಿ ಬಂಧಿತರಾಗಿದ್ದ ಆರ್ಯನ್ ಖಾನ್ ಸೇರಿದಂತೆ ಇತರ ಐವರ ಹೆಸರನ್ನು ಕೈಬಿಡಲಾಗಿತ್ತು. ಆರ್ಯನ್ ಮತ್ತು ಇತರ ಐವರನ್ನು ಹೊರತುಪಡಿಸಿ, ಪ್ರಕರಣದ ಎಲ್ಲಾ 14 ಆರೋಪಿಗಳ ವಿರುದ್ಧ ಎನ್‌ಸಿಬಿ ದೂರು ಸಲ್ಲಿಸಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಅಕ್ಟೋಬರ್ 2, 2021 ರಂದು ರಾತ್ರಿ ಮಧ್ಯ ಸಮುದ್ರದಲ್ಲಿ ಗೋವಾಕ್ಕೆ ತೆರಳುತ್ತಿದ್ದ ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಎನ್‌ಸಿಬಿ ತಂಡವೊಂದು ಆಪಾದಿತ ಡ್ರಗ್ಸ್ ಪಾರ್ಟಿಯನ್ನು ಭೇದಿಸಿ, ಪ್ರಕರಣದಲ್ಲಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಸೇರಿದಂತೆ 20 ಜನರನ್ನು ಎಂಟು ಜನರು ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...