Homeಮುಖಪುಟಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್ ಖಾನ್‌‌‌ ಉದ್ದೇಶಪೂರ್ವಕ ಟಾರ್ಗೆಟ್‌‌: NCB ವರದಿ

ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್ ಖಾನ್‌‌‌ ಉದ್ದೇಶಪೂರ್ವಕ ಟಾರ್ಗೆಟ್‌‌: NCB ವರದಿ

ಪ್ರಕರಣದಲ್ಲಿ 7 ರಿಂದ 8 ಎನ್‌ಸಿಬಿ ಅಧಿಕಾರಿಗಳ ಪಾತ್ರ ಅನುಮಾನಾಸ್ಪದವಾಗಿದೆ ಎಂದು ತನಿಖಾ ತಂಡದ ವರದಿ ಹೇಳಿದೆ

- Advertisement -
- Advertisement -

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಜಿಲೆನ್ಸ್ ವಿಭಾಗವು ‘ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣ’ದ ತನಿಖೆಯಲ್ಲಿ ಏಜೆನ್ಸಿಯ ಏಳೆಂಟು ಅಧಿಕಾರಿಗಳ ಅಕ್ರಮಗಳು ಮತ್ತು ಅನುಮಾನಾಸ್ಪದ ನಡವಳಿಕೆಯನ್ನು ಸೂಚಿಸುವ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಸೂಚಿಸಿದೆ.

ಕಳೆದ ವರ್ಷ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಅವರನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಸಿಬಿಯ ವಿಜಿಲೆನ್ಸ್ ತಂಡ ಮಂಗಳವಾರ ದೆಹಲಿಯ ಪ್ರಧಾನ ಕಚೇರಿಯಲ್ಲಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದ್ದು, “ತನಿಖೆಯಲ್ಲಿ ಅನೇಕ ನ್ಯೂನತೆಗಳು ಕಂಡುಬಂದಿವೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್ಯನ್ ಪ್ರಕರಣದ ತನಿಖೆ ನಡೆಯುತ್ತಿರುವಾಗ ಮುಂಬೈ ಎನ್‌ಸಿಬಿಯ ನೇತೃತ್ವವನ್ನು ಸಮೀರ್ ವಾಂಖೆಡೆ ವಹಿಸಿದ್ದರು. ಎನ್‌ಸಿಬಿಯು ಏಜೆನ್ಸಿಯ ಏಳರಿಂದ ಎಂಟು ಅಧಿಕಾರಿಗಳ ಕಡೆಯಿಂದ ಅಕ್ರಮಗಳು ಮತ್ತು “ಸಂಶಯಾಸ್ಪದ ನಡವಳಿಕೆ”ಯನ್ನು ಎತ್ತಿತೋರಿಸಿದ್ದು, ಆರ್ಯನ್ ಖಾನ್ ಅವರನ್ನು “ಉದ್ದೇಶಪೂರ್ವಕವಾಗಿ ಗುರಿಪಡಿಸಲಾಗಿದೆ” ಎಂದು ವರದಿಯು ಹೇಳಿದೆ.

ಇದನ್ನೂ ಓದಿ: ಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

ಎನ್‌ಸಿಬಿಯ ತನಿಖಾ ತಂಡವು ಈ ಪ್ರಕರಣದಲ್ಲಿ 7 ರಿಂದ 8 ಎನ್‌ಸಿಬಿ ಅಧಿಕಾರಿಗಳ ಪಾತ್ರವನ್ನು ಅನುಮಾನಾಸ್ಪದವಾಗಿದೆ ಎಂದು ಕಂಡುಕೊಂಡಿದೆ. “ಆರ್ಯನ್ ಖಾನ್ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಲಾಗಿಲ್ಲ. ಏಕೆಂದರೆ ಅಧಿಕಾರಿಗಳು ಆರ್ಯನ್ ಖಾನ್ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದ್ದಾರೆ, ಆದರೆ ಅದನ್ನು ಏಕೆ ಮಾಡಲಾಗಿದೆ ಎಂಬುದು ಇನ್ನೂ ತಿಳಿದಿಲ್ಲ” ಎನ್‌ಸಿಬಿಯ ವಿಜಿಲೆನ್ಸ್ ತಂಡ ತನ್ನ ತನಿಖಾ ವರದಿಯಲ್ಲಿ ಹೇಳಿದೆ.

ಆರ್ಯನ್ ಖಾನ್ ಪ್ರಕರಣದ ಹೊರತಾಗಿ ಇತರ ಪ್ರಕರಣಗಳ ತನಿಖೆಯಲ್ಲೂ ಲೋಪಗಳು ಕಂಡುಬಂದಿದ್ದು, ಈ ಎಲ್ಲದರ ವರದಿಯನ್ನು ವಿಜಿಲೆನ್ಸ್ ತಂಡ ದೆಹಲಿಯ ಕೇಂದ್ರ ಕಚೇರಿಗೆ ಕಳುಹಿಸಿದೆ. ವಿಜಿಲೆನ್ಸ್ ತಂಡವು ತನ್ನ ವರದಿಯಲ್ಲಿ ಮುಂಬೈ ಎನ್‌ಸಿಬಿಯ ವಲಯ ನಿರ್ದೇಶಕರ ಹೆಸರು ಸೇರಿದಂತೆ ಮುಂಬೈ ಎನ್‌ಸಿಬಿಯ ಘಟಕದಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ. ತನಿಖೆಯಲ್ಲಿ ಎನ್‌ಸಿಬಿ 65 ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ಕಳಪೆ ತನಿಖೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒಕ್ಕೂಟ ಸರ್ಕಾರ ಮೇ ತಿಂಗಳಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ: ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಆರ್ಯನ್ ಖಾನ್ ಮತ್ತು ಇತರ ಐವರ ಅವರ ವಿರುದ್ಧ ಯಾವುದೇ ಆರೋಪಪಟ್ಟಿ ಸಲ್ಲಿಸದ ಕಾರಣ ಅವರಿಗೆ ಎನ್‌ಸಿಬಿ ನ್ಯಾಯಾಲಯ ಕ್ಲೀನ್ ಚಿಟ್ ನೀಡಿತ್ತು. ಇದರ ಬೆನ್ನಲ್ಲೇ ಒಕ್ಕೂಟ ಸರ್ಕಾರ ಈ ಕ್ರಮವನ್ನು ಕೈಗೊಂಡಿತ್ತು.

ಕಳೆದ ವರ್ಷ ಅಕ್ಟೋಬರ್ 2 ರಂದು ಮುಂಬೈನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ದಾಳಿಯ ನಂತರ ಆರ್ಯನ್‌ ಖಾನ್ ಅವರನ್ನು ಬಂಧಿಸಲಾಗಿತ್ತು. ಬಾಂಬೆ ಹೈಕೋರ್ಟ್ ಅವರನ್ನು ಬಂಧಿಸಿದ 25 ದಿನಗಳ ನಂತರ ಅವರಿಗೆ ಜಾಮೀನು ನೀಡಿತು.

ಮೇ 27 ರಂದು ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ 14 ಆರೋಪಿಗಳ ವಿರುದ್ಧ 6,000 ಪುಟಗಳ ಚಾರ್ಜ್‌ಶೀಟ್ ಅನ್ನು ಎನ್‌ಸಿಬಿ ಸಲ್ಲಿಸಿತ್ತು. ಆದರೆ ಇದರಲ್ಲಿ ಬಂಧಿತರಾಗಿದ್ದ ಆರ್ಯನ್ ಖಾನ್ ಸೇರಿದಂತೆ ಇತರ ಐವರ ಹೆಸರನ್ನು ಕೈಬಿಡಲಾಗಿತ್ತು. ಆರ್ಯನ್ ಮತ್ತು ಇತರ ಐವರನ್ನು ಹೊರತುಪಡಿಸಿ, ಪ್ರಕರಣದ ಎಲ್ಲಾ 14 ಆರೋಪಿಗಳ ವಿರುದ್ಧ ಎನ್‌ಸಿಬಿ ದೂರು ಸಲ್ಲಿಸಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಅಕ್ಟೋಬರ್ 2, 2021 ರಂದು ರಾತ್ರಿ ಮಧ್ಯ ಸಮುದ್ರದಲ್ಲಿ ಗೋವಾಕ್ಕೆ ತೆರಳುತ್ತಿದ್ದ ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಎನ್‌ಸಿಬಿ ತಂಡವೊಂದು ಆಪಾದಿತ ಡ್ರಗ್ಸ್ ಪಾರ್ಟಿಯನ್ನು ಭೇದಿಸಿ, ಪ್ರಕರಣದಲ್ಲಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಸೇರಿದಂತೆ 20 ಜನರನ್ನು ಎಂಟು ಜನರು ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...