Homeಮುಖಪುಟಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ...

ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ, ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಆತನಿಗೆ ಈ ವರ್ಷ ಚುನಾವಣೆಗಳು ಹತ್ತಿರವಿದ್ದಾಗ ಮೂರು ಬಾರಿ ಪೆರೋಲ್ ನೀಡಲಾಗಿದೆ!

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಅಪರಾಧಿ, ಡೇರಾ ಸಚ್ಚಾ ಸೌಧದ ವಿವಾದಾತ್ಮಕ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ನಲ್ಲಿರುವಾಗ ಆನ್‌ಲೈನ್ ಸತ್ಸಂಗ (ಪ್ರವಚನ) ನಡೆಸಲು ಪ್ರಾರಂಭಿಸಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಮತ್ತು ಕರ್ನಾಲ್‌ನ ಮಾಜಿ ಮೇಯರ್ ರೇಣು ಬಾಲ ಗುಪ್ತಾ ಕೂಡ ಅವರ ಆರ್ಶಿವಾದ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬರ್ಸಾದಿಂದ ನಡೆಸಿದ ಸುಮಾರು ಎರಡು ಗಂಟೆಗಳ ಸತ್ಸಂಗದಲ್ಲಿ ಹಲವಾರು ಇತರ ಸ್ಥಳೀಯ ರಾಜಕಾರಣಿಗಳು ಸಹ ಭಾಗವಹಿಸಿದ್ದರು. ಅಲ್ಲಿ ಗುಪ್ತಾ ಡೇರಾ ಮುಖ್ಯಸ್ಥರನ್ನು “ಪಿತಾಜಿ” ಎಂದು ಸಂಬೋಧಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹರಿಯಾಣದಲ್ಲಿ ಪಂಚಾಯತ್ ಚುನಾವಣೆಗಳು ಮತ್ತು ಆದಂಪುರ ಉಪಚುನಾವಣೆ ಕೆಲವೆ ದಿನಗಳಲ್ಲಿ ನಡೆಯುವ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಿಗೆ ಪೆರೋಲ್ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ  ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕಾರಾಗೃಹಗ ಸಚಿವ ರಂಜಿತ್ ಸಿಂಗ್ ಪೆರೋಲ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದೊಂದು “ವಾಡಿಕೆಯ ಕಾರ್ಯವಿಧಾನ” ಮತ್ತು “ಅಪರಾಧಿಯ ಕಾನೂನುಬದ್ಧ ಹಕ್ಕು” ಎಂದು ಬಣ್ಣಿಸಿದ್ದಾರೆ.

ರೇಪ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪೆರೋಲ್ ಮೇಲೆ ಹೊರಬಂದು ಸತ್ಸಂಗ ನಡೆಸುತ್ತಾರೆ. ಸ್ಥಳೀಯ ಚುನಾವಣೆಗಳು ಹತ್ತಿರವಿರುವುದರಿಂದ ಕರ್ನಾಲ್ ಮಾಜಿ ಮೇಯರ್ ಮತ್ತು ಹಿಸ್ಸಾ ಮೇಯರ್ ಅಪರಾಧಿಯ ಆರ್ಶಿವಾದ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದ್ರುವ್ ರಾಠೀ ಟ್ವೀಟ್ ಮಾಡಿದ್ದಾರೆ.

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪಂಚಕುಲ ವಿಶೇ‍ಷ ಸಿಬಿಐ ನ್ಯಾಯಾಲಯವು 2017ರಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಿ 20 ವರ್ಷಗಳ ಶಿಕ್ಷೆ ವಿಧಿಸಿದೆ. ಅಲ್ಲದೆ ಪತ್ರಕರ್ತನ ಹತ್ಯೆ ಮತ್ತು ಮಾಜಿ ಮ್ಯಾನೇಜರ್‌ನ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಗುರ್ಮೀತ್ ರಾಮ್ ರಹೀಮ್‌ನನ್ನು ಅಪರಾಧಿ ಎಂದು ಘೋಷಿಸಲಾಗಿದೆ. ಆದರೆ ಈ ಒಂದು ವರ್ಷದಲ್ಲಿ ಚುನಾವಣೆಗಳು ಹತ್ತಿರವಿದ್ದಾಗ ಆತನಿಗೆ ಮೂರು ಬಾರಿ ಪೆರೋಲ್ ನೀಡಲಾಗಿದೆ! ಫೆಬ್ರವರಿಯಲ್ಲಿ ಪಂಜಾಬ್ ಚುನಾವಣೆಗಿದ್ದಾಗ, ಜೂನ್‌ನಲ್ಲಿ ಮತ್ತು ಅಕ್ಟೋಬರ್ 14 ರಂದು ಆತನಿಗೆ ಪೆರೋಲ್ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನು ಆಶ್ರಮವನ್ನು ತಲುಪಿದ್ದೇನೆ. ದೇವರು ಎಲ್ಲರಿಗೂ ಸಂತೋಷ ನೀಡಲಿ. ಮೊದಲೇ ಹೇಳಿದಂತೆ ನಂಬಿಕೆ ಇರಲಿ. ನನ್ನ ಮಕ್ಕಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಪರಮ ತಂದೆ, ಪರಮಾತ್ಮ, ನಿಮಗೆ ಬಹಳಷ್ಟು ಸಂತೋಷವನ್ನು ನೀಡಲಿ. ಸ್ವಲ್ಪ ಸಮಯದ ಹಿಂದೆ ಇಲ್ಲಿ ಬಂದರು. ನೀವು ಆ ಸಮುದ್ರಗಳನ್ನು ನೆನಪಿಸಿಕೊಳ್ಳುತ್ತೀರಿ. ಸಮುದ್ರಗಳು ಹೆಚ್ಚು ಏರಿವೆ. ನೀವೆಲ್ಲರೂ ಅದನ್ನು ನೋಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುತ್ತಲೇ ಇರುತ್ತೇನೆ. ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಆಶೀರ್ವಾದ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಭಾರತದ ಸ್ವಧರ್ಮದ ಮೇಲೆ ಅತ್ಯಂತ ಘೋರ ದಾಳಿಯಾಗುತ್ತಿದೆಯೇ? – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...