Homeಮುಖಪುಟಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ...

ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ, ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಆತನಿಗೆ ಈ ವರ್ಷ ಚುನಾವಣೆಗಳು ಹತ್ತಿರವಿದ್ದಾಗ ಮೂರು ಬಾರಿ ಪೆರೋಲ್ ನೀಡಲಾಗಿದೆ!

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಅಪರಾಧಿ, ಡೇರಾ ಸಚ್ಚಾ ಸೌಧದ ವಿವಾದಾತ್ಮಕ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ನಲ್ಲಿರುವಾಗ ಆನ್‌ಲೈನ್ ಸತ್ಸಂಗ (ಪ್ರವಚನ) ನಡೆಸಲು ಪ್ರಾರಂಭಿಸಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಮತ್ತು ಕರ್ನಾಲ್‌ನ ಮಾಜಿ ಮೇಯರ್ ರೇಣು ಬಾಲ ಗುಪ್ತಾ ಕೂಡ ಅವರ ಆರ್ಶಿವಾದ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬರ್ಸಾದಿಂದ ನಡೆಸಿದ ಸುಮಾರು ಎರಡು ಗಂಟೆಗಳ ಸತ್ಸಂಗದಲ್ಲಿ ಹಲವಾರು ಇತರ ಸ್ಥಳೀಯ ರಾಜಕಾರಣಿಗಳು ಸಹ ಭಾಗವಹಿಸಿದ್ದರು. ಅಲ್ಲಿ ಗುಪ್ತಾ ಡೇರಾ ಮುಖ್ಯಸ್ಥರನ್ನು “ಪಿತಾಜಿ” ಎಂದು ಸಂಬೋಧಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹರಿಯಾಣದಲ್ಲಿ ಪಂಚಾಯತ್ ಚುನಾವಣೆಗಳು ಮತ್ತು ಆದಂಪುರ ಉಪಚುನಾವಣೆ ಕೆಲವೆ ದಿನಗಳಲ್ಲಿ ನಡೆಯುವ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಿಗೆ ಪೆರೋಲ್ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ  ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕಾರಾಗೃಹಗ ಸಚಿವ ರಂಜಿತ್ ಸಿಂಗ್ ಪೆರೋಲ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದೊಂದು “ವಾಡಿಕೆಯ ಕಾರ್ಯವಿಧಾನ” ಮತ್ತು “ಅಪರಾಧಿಯ ಕಾನೂನುಬದ್ಧ ಹಕ್ಕು” ಎಂದು ಬಣ್ಣಿಸಿದ್ದಾರೆ.

ರೇಪ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪೆರೋಲ್ ಮೇಲೆ ಹೊರಬಂದು ಸತ್ಸಂಗ ನಡೆಸುತ್ತಾರೆ. ಸ್ಥಳೀಯ ಚುನಾವಣೆಗಳು ಹತ್ತಿರವಿರುವುದರಿಂದ ಕರ್ನಾಲ್ ಮಾಜಿ ಮೇಯರ್ ಮತ್ತು ಹಿಸ್ಸಾ ಮೇಯರ್ ಅಪರಾಧಿಯ ಆರ್ಶಿವಾದ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದ್ರುವ್ ರಾಠೀ ಟ್ವೀಟ್ ಮಾಡಿದ್ದಾರೆ.

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪಂಚಕುಲ ವಿಶೇ‍ಷ ಸಿಬಿಐ ನ್ಯಾಯಾಲಯವು 2017ರಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಿ 20 ವರ್ಷಗಳ ಶಿಕ್ಷೆ ವಿಧಿಸಿದೆ. ಅಲ್ಲದೆ ಪತ್ರಕರ್ತನ ಹತ್ಯೆ ಮತ್ತು ಮಾಜಿ ಮ್ಯಾನೇಜರ್‌ನ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಗುರ್ಮೀತ್ ರಾಮ್ ರಹೀಮ್‌ನನ್ನು ಅಪರಾಧಿ ಎಂದು ಘೋಷಿಸಲಾಗಿದೆ. ಆದರೆ ಈ ಒಂದು ವರ್ಷದಲ್ಲಿ ಚುನಾವಣೆಗಳು ಹತ್ತಿರವಿದ್ದಾಗ ಆತನಿಗೆ ಮೂರು ಬಾರಿ ಪೆರೋಲ್ ನೀಡಲಾಗಿದೆ! ಫೆಬ್ರವರಿಯಲ್ಲಿ ಪಂಜಾಬ್ ಚುನಾವಣೆಗಿದ್ದಾಗ, ಜೂನ್‌ನಲ್ಲಿ ಮತ್ತು ಅಕ್ಟೋಬರ್ 14 ರಂದು ಆತನಿಗೆ ಪೆರೋಲ್ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನು ಆಶ್ರಮವನ್ನು ತಲುಪಿದ್ದೇನೆ. ದೇವರು ಎಲ್ಲರಿಗೂ ಸಂತೋಷ ನೀಡಲಿ. ಮೊದಲೇ ಹೇಳಿದಂತೆ ನಂಬಿಕೆ ಇರಲಿ. ನನ್ನ ಮಕ್ಕಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಪರಮ ತಂದೆ, ಪರಮಾತ್ಮ, ನಿಮಗೆ ಬಹಳಷ್ಟು ಸಂತೋಷವನ್ನು ನೀಡಲಿ. ಸ್ವಲ್ಪ ಸಮಯದ ಹಿಂದೆ ಇಲ್ಲಿ ಬಂದರು. ನೀವು ಆ ಸಮುದ್ರಗಳನ್ನು ನೆನಪಿಸಿಕೊಳ್ಳುತ್ತೀರಿ. ಸಮುದ್ರಗಳು ಹೆಚ್ಚು ಏರಿವೆ. ನೀವೆಲ್ಲರೂ ಅದನ್ನು ನೋಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುತ್ತಲೇ ಇರುತ್ತೇನೆ. ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಆಶೀರ್ವಾದ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಭಾರತದ ಸ್ವಧರ್ಮದ ಮೇಲೆ ಅತ್ಯಂತ ಘೋರ ದಾಳಿಯಾಗುತ್ತಿದೆಯೇ? – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...