Homeಮುಖಪುಟಮುಸ್ಲಿಮರು ಲಕ್ಷ್ಮೀ ಪೂಜೆ ಮಾಡುವುದಿಲ್ಲ, ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕನ ಹೇಳಿಕೆ ವೈರಲ್

ಮುಸ್ಲಿಮರು ಲಕ್ಷ್ಮೀ ಪೂಜೆ ಮಾಡುವುದಿಲ್ಲ, ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕನ ಹೇಳಿಕೆ ವೈರಲ್

ನೀವು ನಂಬಿದ್ದರೆ ಅದು ದೇವರಾಗುತ್ತದೆ, ಇಲ್ಲವಾದರೆ ಕೇವಲ ಕಲ್ಲಿನ ವಿಗ್ರಹವಾಗುತ್ತದೆ. ತಾರ್ಕಿಕ ತೀರ್ಮಾನಕ್ಕೆ ಬರಲು ನಾವು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆತ್ಮ ಮತ್ತು ಪರಮಾತ್ಮ ಎಂಬುದು ಅಸ್ತಿತ್ವದಲ್ಲಿಲ್ಲ, ಅದು ಕೇವಲ ಜನರ ನಂಬಿಕೆಯಷ್ಟೇ ಎಂದು ಬಿಹಾರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಹೇಳಿದ್ದಾರೆ. ಮುಸ್ಲಿಮರು ಲಕ್ಷ್ಮೀ ಪೂಜೆ ಮಾಡುವುದಿಲ್ಲ, ಅವರಲ್ಲಿ ಶ್ರೀಮಂತರಿಲ್ಲವೇ? ಎಂಬ ತಾರ್ಕಿಕ ಪ್ರಶ್ನೆಗಳನ್ನು ಎತ್ತಿದ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಲಕ್ಷ್ಮೀ ಪೂಜೆ ಮಾಡಿದರೆ ಮಾತ್ರ ಸಂಪತ್ತು ದೊರಕುತ್ತದೆ ಎನ್ನುವುದಾದರೆ ಮುಸ್ಲಿಮರಲ್ಲಿ ಬಿಲಿಯನೇರ್‌ಗಳು ಇರಬಾರದಿತ್ತು. ಏಕೆಂದರೆ ಅವರು ಲಕ್ಷ್ಮೀ ಪೂಜೆ ಮಾಡುವುದಿಲ್ಲ. ಹಾಗೆಂದ ಮಾತ್ರಕ್ಕೆ ಅವರಲ್ಲಿ ಶ್ರೀಮಂತರಿಲ್ಲವೇ? ಮುಸ್ಲಿಮರು ಸರಸ್ವತಿ ದೇವಿಯನ್ನು ಸಹ ಪೂಜಿಸುವುದಿಲ್ಲ. ಅವರಲ್ಲಿ ವಿದ್ವಾಂಸರಿಲ್ಲವೇ? ಐಎಎಸ್, ಐಪಿಎಸ್‌ ಅಧಿಕಾರಿಗಳಿಲ್ಲವೇ ಎಂದು ಲಾಲನ್ ಪಾಸ್ವಾನ್ ಪ್ರಶ್ನಿಸಿದ್ದಾರೆ.

ನೀವು ನಂಬಿದ್ದರೆ ಅದು ದೇವರಾಗುತ್ತದೆ, ಇಲ್ಲವಾದರೆ ಕೇವಲ ಕಲ್ಲಿನ ವಿಗ್ರಹವಾಗುತ್ತದೆ. ನಾವು ದೇವರು ಮತ್ತು ದೇವತೆಗಳನ್ನು ನಂಬುತ್ತೇವೆಯೋ ಇಲ್ಲವೋ ಎಂಬುದು ನಮಗೆ ಬಿಟ್ಟದ್ದು. ತಾರ್ಕಿಕ ತೀರ್ಮಾನಕ್ಕೆ ಬರಲು ನಾವು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು. ನೀವು ನಂಬುವುದನ್ನು ನಿಲ್ಲಿಸಿದರೆ, ನಿಮ್ಮ ಬೌದ್ಧಿಕ ಸಾಮರ್ಥ್ಯವು ಹೆಚ್ಚಾಗುತ್ತದೆ ಎಂದು ಅವರು ಹೇಳಿದ್ದಾರೆ.

“ಬಜರಂಗಬಲಿ ಶಕ್ತಿಯುಳ್ಳ ದೇವತೆ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಬಜರಂಗಬಲಿ ಪೂಜೆ ಮಾಡುವುದಿಲ್ಲ. ಅವರು ಶಕ್ತಿವಂತರಲ್ಲವೇ? ನೀವು ನಂಬುವುದನ್ನು ನಿಲ್ಲಿಸಿದ ದಿನ, ಇವೆಲ್ಲವೂ ಕೊನೆಗೊಳ್ಳುತ್ತದೆ” ಎಂದು ಬಿಹಾರದ ಪರ್ಪೈಂಟಿ ವಿಧಾನ ಸಭಾ ಕ್ಷೇತ್ರದ ಶಾಸಕರು ಹೇಳಿದ್ದಾರೆ.

ಅವರ ಹೇಳಿಕೆಗಳು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿವೆ ಎಂದು ಆರೋಪಿಸಿ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಭಾಗಲ್‌ಪುರದ ಶೇರ್ಮಾರಿ ಬಜಾರ್‌ನಲ್ಲಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...