Homeಮುಖಪುಟಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

ಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನವೆಂಬರ್ 06 ರಂದು ಮಹಾರಾಷ್ಟ್ರಕ್ಕೆ ಪ್ರವೇಶಿಸಲಿದ್ದು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಯಾತ್ರೆಯು 4 ರಾಜ್ಯಗಳನ್ನು ಕ್ರಮಿಸಿ 1000 ಕಿ.ಮೀ ಗಳನ್ನು ಪೂರೈಸಿದೆ. ಸದ್ಯ ಆಂಧ್ರಪ್ರದೇಶದಲ್ಲಿರುವ ಯಾತ್ರೆಯು ನಾಳೆ ಮತ್ತೆ ಕರ್ನಾಟಕ ಪ್ರವೇಶಿಸಲಿದ್ದು ಆನಂತರ ತೆಲಂಗಾಣಕ್ಕೆ ಕಾಲಿಡಲಿದೆ. ಆನಂತರ 6ನೇ ರಾಜ್ಯವಾಗಿ ಮಹಾರಾಷ್ಟ್ರದ ನಾಂದೇಡ್‌ಗೆ ಪ್ರವೇಶಿಸಲಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್‌.ಕೆ ಪಾಟೀಲ್, ಹಿರಿಯ ನಾಯಕರಾದ ಬಾಳಾಸಾಹೇಬ್ ಥೋರಟ್, ಅಶೋಕ್ ಚವ್ಹಾಣ್‌ರವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಾರತ್ ಜೋಡೋ ಯಾತ್ರೆಗೆ  ಆಹ್ವಾನಿಸಿದ್ದಾರೆ. ಉದ್ಧವ್ ಠಾಕ್ರೆ ಅಥವಾ ಅವರ ಪುತ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಯಾತ್ರೆಯನ್ನು ಸ್ವಾಗತಿಸುವ ನಿರೀಕ್ಷೆಯಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ರಾಹುಲ್ ಮತ್ತು ರಾಮ ವಿವಾದ

ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯು ಅಯೋಧ್ಯೆಯಿಂದ ಶ್ರೀಲಂಕಾಕ್ಕೆ ನಡೆದ ರಾಮನ ಪ್ರಯಾಣಕ್ಕಿಂತಲೂ ಉದ್ದವಾಗಿದೆ ಎಂದು ಹೇಳಿದ್ದಾರೆ. ಈ ಹೋಲಿಕೆ ಕೋಲಾಹಲಕ್ಕೆ ಕಾರಣವಾಗುತ್ತಿದ್ದಂತೆ, ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಸ್ಪಷ್ಟೀಕರಣ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಭಗವಾನ್ ರಾಮರ ಹೆಸರುಗಳು ‘ಆರ್’ ನೊಂದಿಗೆ ಪ್ರಾರಂಭವಾಗುವುದು ಕೇವಲ ಕಾಕತಾಳೀಯವಾಗಿದೆ. ಆದರೆ ಯಾವುದೇ ಹೋಲಿಕೆ ಇಲ್ಲ ಎಂದು ಹೇಳಿದ್ದಾರೆ. “ದೇವರು ದೇವರು, ಮತ್ತು ನಾವು ಮನುಷ್ಯರು. ರಾಹುಲ್ ಗಾಂಧಿ ಕೇವಲ ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯು ತ್ರಿವರ್ಣ ಮತ್ತು ಮಾನವೀಯತೆಯನ್ನು ಉಳಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಭಾರತ್ ಜೋಡೋ ಬೆಂಬಲಿಸುವುದಕ್ಕೆ ಬಿಜೆಪಿ ನಾಯಕ ಉಪಾಧ್ಯೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉದ್ಧವ್ ತಮ್ಮ ಪಕ್ಷದ ಸಲುವಾಗಿಯೂ ಎಂದೂ ಮನೆ ಬಿಟ್ಟು ಬಂದಿಲ್ಲ. ಯಾವುದೇ ಹಿಂದುತ್ವದ ಮೆರವಣಿಗೆ, ಅಡ್ವಾಣಿಯವರ ರಥಯಾತ್ರೆಗೆ ಬೆಂಬಲ ನೀಡಿಲ್ಲ. ಆದರೆ ಈಗ ಅವರು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಹೊರಟಿದ್ದಾರೆ. ‘ಮುಹ್ ಮೆ ರಾಮ್, ಬಗಲ್ ಮೆ ಚುರಿ’ ಎಂದು ಹಳೆಯ ಹಿಂದಿ ಗಾದೆಯಂತೆ ಉದ್ಧವ್ ಠಾಕ್ರೆಗೆ ಇದು ‘ಮುಹ್ ಮೆ ರಾಮ್, ಬಗಲ್ ಮಿ ರಾಹುಲ್’ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯಕ್ಕೆ ಯಾರೇ ಬಂದರೂ ಅವರು ಬಾಳ್ ಠಾಕ್ರೆಯವರ ಮನೆಗೆ ಹೋಗಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ್ದರು. ಆದರೆ ಉದ್ಧವ್ ಅದಕ್ಕೆ ವಿರುದ್ಧವಾಗಿ ರಾಹುಲ್ ಸ್ವಾಗತಿಸಲು ನಾಂದೇಡ್‌ಗೆ ಹೋಗುತ್ತಿದ್ದಾರೆ ಎಂದು ಉಪಾಧ್ಯೆ ಹೇಳಿದ್ದಾರೆ.

ಇದನ್ನೂ ಓದಿ : ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...