Homeಮುಖಪುಟಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

ಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನವೆಂಬರ್ 06 ರಂದು ಮಹಾರಾಷ್ಟ್ರಕ್ಕೆ ಪ್ರವೇಶಿಸಲಿದ್ದು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಯಾತ್ರೆಯು 4 ರಾಜ್ಯಗಳನ್ನು ಕ್ರಮಿಸಿ 1000 ಕಿ.ಮೀ ಗಳನ್ನು ಪೂರೈಸಿದೆ. ಸದ್ಯ ಆಂಧ್ರಪ್ರದೇಶದಲ್ಲಿರುವ ಯಾತ್ರೆಯು ನಾಳೆ ಮತ್ತೆ ಕರ್ನಾಟಕ ಪ್ರವೇಶಿಸಲಿದ್ದು ಆನಂತರ ತೆಲಂಗಾಣಕ್ಕೆ ಕಾಲಿಡಲಿದೆ. ಆನಂತರ 6ನೇ ರಾಜ್ಯವಾಗಿ ಮಹಾರಾಷ್ಟ್ರದ ನಾಂದೇಡ್‌ಗೆ ಪ್ರವೇಶಿಸಲಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್‌.ಕೆ ಪಾಟೀಲ್, ಹಿರಿಯ ನಾಯಕರಾದ ಬಾಳಾಸಾಹೇಬ್ ಥೋರಟ್, ಅಶೋಕ್ ಚವ್ಹಾಣ್‌ರವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಾರತ್ ಜೋಡೋ ಯಾತ್ರೆಗೆ  ಆಹ್ವಾನಿಸಿದ್ದಾರೆ. ಉದ್ಧವ್ ಠಾಕ್ರೆ ಅಥವಾ ಅವರ ಪುತ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಯಾತ್ರೆಯನ್ನು ಸ್ವಾಗತಿಸುವ ನಿರೀಕ್ಷೆಯಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ರಾಹುಲ್ ಮತ್ತು ರಾಮ ವಿವಾದ

ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯು ಅಯೋಧ್ಯೆಯಿಂದ ಶ್ರೀಲಂಕಾಕ್ಕೆ ನಡೆದ ರಾಮನ ಪ್ರಯಾಣಕ್ಕಿಂತಲೂ ಉದ್ದವಾಗಿದೆ ಎಂದು ಹೇಳಿದ್ದಾರೆ. ಈ ಹೋಲಿಕೆ ಕೋಲಾಹಲಕ್ಕೆ ಕಾರಣವಾಗುತ್ತಿದ್ದಂತೆ, ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಸ್ಪಷ್ಟೀಕರಣ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಭಗವಾನ್ ರಾಮರ ಹೆಸರುಗಳು ‘ಆರ್’ ನೊಂದಿಗೆ ಪ್ರಾರಂಭವಾಗುವುದು ಕೇವಲ ಕಾಕತಾಳೀಯವಾಗಿದೆ. ಆದರೆ ಯಾವುದೇ ಹೋಲಿಕೆ ಇಲ್ಲ ಎಂದು ಹೇಳಿದ್ದಾರೆ. “ದೇವರು ದೇವರು, ಮತ್ತು ನಾವು ಮನುಷ್ಯರು. ರಾಹುಲ್ ಗಾಂಧಿ ಕೇವಲ ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯು ತ್ರಿವರ್ಣ ಮತ್ತು ಮಾನವೀಯತೆಯನ್ನು ಉಳಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಭಾರತ್ ಜೋಡೋ ಬೆಂಬಲಿಸುವುದಕ್ಕೆ ಬಿಜೆಪಿ ನಾಯಕ ಉಪಾಧ್ಯೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉದ್ಧವ್ ತಮ್ಮ ಪಕ್ಷದ ಸಲುವಾಗಿಯೂ ಎಂದೂ ಮನೆ ಬಿಟ್ಟು ಬಂದಿಲ್ಲ. ಯಾವುದೇ ಹಿಂದುತ್ವದ ಮೆರವಣಿಗೆ, ಅಡ್ವಾಣಿಯವರ ರಥಯಾತ್ರೆಗೆ ಬೆಂಬಲ ನೀಡಿಲ್ಲ. ಆದರೆ ಈಗ ಅವರು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಹೊರಟಿದ್ದಾರೆ. ‘ಮುಹ್ ಮೆ ರಾಮ್, ಬಗಲ್ ಮೆ ಚುರಿ’ ಎಂದು ಹಳೆಯ ಹಿಂದಿ ಗಾದೆಯಂತೆ ಉದ್ಧವ್ ಠಾಕ್ರೆಗೆ ಇದು ‘ಮುಹ್ ಮೆ ರಾಮ್, ಬಗಲ್ ಮಿ ರಾಹುಲ್’ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯಕ್ಕೆ ಯಾರೇ ಬಂದರೂ ಅವರು ಬಾಳ್ ಠಾಕ್ರೆಯವರ ಮನೆಗೆ ಹೋಗಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ್ದರು. ಆದರೆ ಉದ್ಧವ್ ಅದಕ್ಕೆ ವಿರುದ್ಧವಾಗಿ ರಾಹುಲ್ ಸ್ವಾಗತಿಸಲು ನಾಂದೇಡ್‌ಗೆ ಹೋಗುತ್ತಿದ್ದಾರೆ ಎಂದು ಉಪಾಧ್ಯೆ ಹೇಳಿದ್ದಾರೆ.

ಇದನ್ನೂ ಓದಿ : ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...