Homeಮುಖಪುಟಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

ಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನವೆಂಬರ್ 06 ರಂದು ಮಹಾರಾಷ್ಟ್ರಕ್ಕೆ ಪ್ರವೇಶಿಸಲಿದ್ದು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಯಾತ್ರೆಯು 4 ರಾಜ್ಯಗಳನ್ನು ಕ್ರಮಿಸಿ 1000 ಕಿ.ಮೀ ಗಳನ್ನು ಪೂರೈಸಿದೆ. ಸದ್ಯ ಆಂಧ್ರಪ್ರದೇಶದಲ್ಲಿರುವ ಯಾತ್ರೆಯು ನಾಳೆ ಮತ್ತೆ ಕರ್ನಾಟಕ ಪ್ರವೇಶಿಸಲಿದ್ದು ಆನಂತರ ತೆಲಂಗಾಣಕ್ಕೆ ಕಾಲಿಡಲಿದೆ. ಆನಂತರ 6ನೇ ರಾಜ್ಯವಾಗಿ ಮಹಾರಾಷ್ಟ್ರದ ನಾಂದೇಡ್‌ಗೆ ಪ್ರವೇಶಿಸಲಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್‌.ಕೆ ಪಾಟೀಲ್, ಹಿರಿಯ ನಾಯಕರಾದ ಬಾಳಾಸಾಹೇಬ್ ಥೋರಟ್, ಅಶೋಕ್ ಚವ್ಹಾಣ್‌ರವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಾರತ್ ಜೋಡೋ ಯಾತ್ರೆಗೆ  ಆಹ್ವಾನಿಸಿದ್ದಾರೆ. ಉದ್ಧವ್ ಠಾಕ್ರೆ ಅಥವಾ ಅವರ ಪುತ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಯಾತ್ರೆಯನ್ನು ಸ್ವಾಗತಿಸುವ ನಿರೀಕ್ಷೆಯಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ರಾಹುಲ್ ಮತ್ತು ರಾಮ ವಿವಾದ

ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯು ಅಯೋಧ್ಯೆಯಿಂದ ಶ್ರೀಲಂಕಾಕ್ಕೆ ನಡೆದ ರಾಮನ ಪ್ರಯಾಣಕ್ಕಿಂತಲೂ ಉದ್ದವಾಗಿದೆ ಎಂದು ಹೇಳಿದ್ದಾರೆ. ಈ ಹೋಲಿಕೆ ಕೋಲಾಹಲಕ್ಕೆ ಕಾರಣವಾಗುತ್ತಿದ್ದಂತೆ, ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಸ್ಪಷ್ಟೀಕರಣ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಭಗವಾನ್ ರಾಮರ ಹೆಸರುಗಳು ‘ಆರ್’ ನೊಂದಿಗೆ ಪ್ರಾರಂಭವಾಗುವುದು ಕೇವಲ ಕಾಕತಾಳೀಯವಾಗಿದೆ. ಆದರೆ ಯಾವುದೇ ಹೋಲಿಕೆ ಇಲ್ಲ ಎಂದು ಹೇಳಿದ್ದಾರೆ. “ದೇವರು ದೇವರು, ಮತ್ತು ನಾವು ಮನುಷ್ಯರು. ರಾಹುಲ್ ಗಾಂಧಿ ಕೇವಲ ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯು ತ್ರಿವರ್ಣ ಮತ್ತು ಮಾನವೀಯತೆಯನ್ನು ಉಳಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಭಾರತ್ ಜೋಡೋ ಬೆಂಬಲಿಸುವುದಕ್ಕೆ ಬಿಜೆಪಿ ನಾಯಕ ಉಪಾಧ್ಯೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉದ್ಧವ್ ತಮ್ಮ ಪಕ್ಷದ ಸಲುವಾಗಿಯೂ ಎಂದೂ ಮನೆ ಬಿಟ್ಟು ಬಂದಿಲ್ಲ. ಯಾವುದೇ ಹಿಂದುತ್ವದ ಮೆರವಣಿಗೆ, ಅಡ್ವಾಣಿಯವರ ರಥಯಾತ್ರೆಗೆ ಬೆಂಬಲ ನೀಡಿಲ್ಲ. ಆದರೆ ಈಗ ಅವರು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಹೊರಟಿದ್ದಾರೆ. ‘ಮುಹ್ ಮೆ ರಾಮ್, ಬಗಲ್ ಮೆ ಚುರಿ’ ಎಂದು ಹಳೆಯ ಹಿಂದಿ ಗಾದೆಯಂತೆ ಉದ್ಧವ್ ಠಾಕ್ರೆಗೆ ಇದು ‘ಮುಹ್ ಮೆ ರಾಮ್, ಬಗಲ್ ಮಿ ರಾಹುಲ್’ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯಕ್ಕೆ ಯಾರೇ ಬಂದರೂ ಅವರು ಬಾಳ್ ಠಾಕ್ರೆಯವರ ಮನೆಗೆ ಹೋಗಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ್ದರು. ಆದರೆ ಉದ್ಧವ್ ಅದಕ್ಕೆ ವಿರುದ್ಧವಾಗಿ ರಾಹುಲ್ ಸ್ವಾಗತಿಸಲು ನಾಂದೇಡ್‌ಗೆ ಹೋಗುತ್ತಿದ್ದಾರೆ ಎಂದು ಉಪಾಧ್ಯೆ ಹೇಳಿದ್ದಾರೆ.

ಇದನ್ನೂ ಓದಿ : ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...