Homeಮುಖಪುಟಸಂವಿಧಾನದ ನಿಜ ಆಶಯಗಳನ್ನು ಎತ್ತಿಹಿಡಿದ ಗರ್ಭಪಾತ ಹಕ್ಕಿನ ತೀರ್ಪು

ಸಂವಿಧಾನದ ನಿಜ ಆಶಯಗಳನ್ನು ಎತ್ತಿಹಿಡಿದ ಗರ್ಭಪಾತ ಹಕ್ಕಿನ ತೀರ್ಪು

- Advertisement -
- Advertisement -

ಇತ್ತೀಚೆಗೆ ಬಂದ ಸುಪ್ರೀಂಕೋರ್ಟಿನ ಗರ್ಭಪಾತದ ಬಗೆಗಿನ ತೀರ್ಪು ಬದಲಾಗುತ್ತಿರುವ ಸಮಯದ ಅಗತ್ಯ ಹಾಗೂ ಧೋರಣೆ ಹೇಗಿರಬೇಕು ಎಂಬುದನ್ನು ಎತ್ತಿ ತೋರಿಸುತ್ತದೆ.

ಭಾರತದಲ್ಲಿ ಕಾನೂನುಬದ್ಧವಾದ ಗರ್ಭಪಾತದ ಅವಕಾಶ 1971ರಿಂದಲೇ ಇತ್ತು. ಆದರೆ ಪಿತೃಪ್ರಧಾನ ವ್ಯವಸ್ಥೆಯ ಅಡಿಯಲ್ಲಿ ಹೆಣ್ಣು ಮಗುವಿನ ಹುಟ್ಟು ಎಂಬುದೇ ಒಂದು ಶಾಪದಂತೆ ನೋಡುವ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಕಾನೂನುಬಾಹಿರವಾಗಿ ಹೆಣ್ಣು ಭ್ರೂಣಹತ್ಯೆ ಮಾಡುತ್ತ ಜನಸಂಖ್ಯಾ ಅನುಪಾತದಲ್ಲಿ ಏರುಪೇರುಗಳಾದುದರಿಂದ ಸಮಸ್ಯೆಗಳು ತಲೆದೋರಿದವು. ಅದನ್ನು ನಿಯಂತ್ರಿಸಲು ಅನೇಕ ನೀತಿ ನಿಯಮಗಳು ಜಾರಿಗೆ ಬಂದು ಗರ್ಭಪಾತ ಅನೇಕ ಅಂಕುಶಗಳಿಗೆ ಒಳಪಟ್ಟಿತ್ತು. ಭಾರತದಲ್ಲಷ್ಟೇ ಅಲ್ಲ ಪ್ರಪಂಚದಾದ್ಯಂತ ಗರ್ಭಧಾರಣೆಯ ಸುತ್ತು ನಿರಂತರ ಚರ್ಚೆಗಳನ್ನು ಕೇಳುತ್ತಲೇ ಇರುತ್ತೇವೆ. ಇತ್ತೀಚೆಗೆ ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತವನ್ನು ಕಾನೂನುಬಾಹಿರ ಎಂದು ತೀರ್ಪುನೀಡಿ ಅಲ್ಲಿನ ಸೂಕ್ಷ್ಮ ಮತ್ತು ಸಂವೇದನಾಶೀಲ ಜನರ ವಿಮರ್ಶೆಗೆ ಗುರಿಯಾಗಿದೆ. ದೇಶ ಯಾವುದಾದರೇನು, ಪ್ರಜಾತಂತ್ರ ವ್ಯವಸ್ಥೆ ಎಷ್ಟು ಪರಿಣಾಮಕಾರಿಯಾಗಿದ್ದರೇನು, ಅಲ್ಲಿ ಕೊನೆಗೆ ನಡೆಯುವುದು ಪುರುಷಪ್ರಧಾನ ಮನಸ್ಥಿತಿಗಳ ಆಡಳಿತವೇ ಎಂಬುದನ್ನು ಅದು ತೋರಿಸಿಕೊಟ್ಟಿತ್ತು.

ಅತ್ಯಂತ ಮುಂದುವರಿದ ದೇಶ ಎನ್ನುತ್ತಲೇ ಅಮೆರಿಕದ ಸುಪ್ರೀಂಕೋರ್ಟ್ ಅತ್ಯಂತ ಪುರೋಗಾಮಿ ನಡೆಗೆ ತೀರ್ಪಿತ್ತಾಗ, ಕೆಲವರಿಗೆ ಅದು ಆಶ್ಚರ್ಯವೆನಿಸಿತಾದರೂ, ಈ ಮನಸ್ಥಿತಿ ಅಲ್ಲಿನ ಬಲಪಂಥೀಯರಲ್ಲಿ ಎಂದಿನಿಂದಲೂ ಇದೆ ಎಂಬುದು ಸತ್ಯ. ಡೊನಾಲ್ಡ್ ಟ್ರಂಪ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದಾಗಲೇ ಗರ್ಭಪಾತ ಕಾನೂನು ತೆಗೆದುಹಾಕುವ ಆಶ್ವಾಸನೆ ನೀಡಿದ್ದರು ಮತ್ತು ಅದಕ್ಕೆ ಪೂರಕವಾಗಿ ಸುಪ್ರೀಂಕೋರ್ಟಿಗೆ ಮೂರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ್ದರು. ಇಂಥ ಹಿನ್ನೆಲೆಯಲ್ಲಿ ಭಾರತದ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸಂವಿಧಾನದ ಆಶಯಗಳನ್ನು ನಿಜವಾದ ಅರ್ಥದಲ್ಲಿ ಎತ್ತಿಹಿಡಿದಿದೆ ಎನ್ನಬಹುದು.

ಜಸ್ಟಿಸ್ ಎನ್.ವೈ ಚಂದ್ರಚೂಡ್, ಜಸ್ಟಿಸ್ ಎ.ಎಸ್ ಬೋಪಣ್ಣ ಹಾಗೂ ಪರ್ಡಿವಾಲ ಅವರ ವಿಭಾಗೀಯ ಪೀಠ 1971ರ ಕಾಯ್ದೆಗೆ ಮಹತ್ವದ ಬದಲಾವಣೆಗಳನ್ನು ಮಾಡುತ್ತ ಸಂವಿಧಾನದ 14 ಮತ್ತು 21ನೇ ಪರಿಚ್ಛೇದದ ಅಡಿಯಲ್ಲಿ ಹೆಣ್ಣಿಗೆ ಅವಳ ದೇಹದ ಮೇಲೆ ಸಂಪೂರ್ಣವಾದ ಹಕ್ಕನ್ನು ನೀಡಿ ಅವಳ ಇಚ್ಛೆ ಮತ್ತು ವ್ಯಕ್ತಿತ್ವಕ್ಕೆ ಸಂಪೂರ್ಣ ಮನ್ನಣೆಯನ್ನು ನೀಡಿದ್ದಾರೆ.

ಪ್ರಮುಖ ಅಂಶಗಳು

1. ಅವಿವಾಹಿತ ಮಹಿಳೆಗೂ ಗರ್ಭಪಾತದ ಹಕ್ಕು ಇಲ್ಲಿಯವರೆಗೂ ಗರ್ಭಪಾತ ಎಂಬುದು ಕೇವಲ ವಿವಾಹಿತ ಸ್ತ್ರೀಯರಿಗೆ ಮಾತ್ರ ನೀಡಲಾಗಿದ್ದ ಹಕ್ಕಾಗಿತ್ತು. ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳು, “ವಿವಾಹಿತ ಮತ್ತು ಅವಿವಾಹಿತ ಎಂಬ ವ್ಯತ್ಯಾಸ ಕೃತಕವಾದದ್ದು ಮತ್ತು ಸಂವಿಧಾನ ವಿರೋಧಿಯಾದದ್ದು; ಹಾಗೆ ಮಾಡುವುದರಿಂದ ಅವರ ದೇಹದ ಸ್ವಾಯತ್ತತೆಯ ಮೇಲಷ್ಟೇ ಅಲ್ಲದೆ ಅವರ ಮುಂದಿನ ಬದುಕನ್ನೂ ಇದು ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ. ಎಲ್ಲಿಯೂ ಮಹಿಳೆಯ ಗಂಡ ಎಂಬ ಪದವನ್ನು ಬಳಸದೆ ಜೊತೆಗಾರ (Partner) ಎಂದು ಹೇಳುತ್ತಾರೆ. ಕಾನೂನು ಎಂಬುದು ನಿಂತ ನೀರಲ್ಲ ಅದು ನಿರಂತರವಾಗಿ ಬದಲಾಗುತ್ತಿರುವ ಕಾಲಕ್ಕೆ ಸ್ಪಂದಿಸುವಂತೆ ಇರಬೇಕು ಎನ್ನುತ್ತಾರೆ. ಗಂಡ ಮತ್ತು ಹೆಂಡತಿ ಎಂಬ ಸಂಬಂಧಗಳ ಜೊತೆಗೇ ಲಿವ್‌ಇನ್ ಜೋಡಿಗಳ ಹಕ್ಕನ್ನು ಎತ್ತಿಹಿಡಿದಿದ್ದಾರೆ.

2. ಅನೈಚ್ಛಿಕವಾದ ಅಥವಾ ಬೇರೆ ಕಾರಣಗಳಿಂದ ಬೇಡವಾದ ಗರ್ಭವನ್ನು ತೆಗೆಸುವ ಅವಧಿಯನ್ನು 24 ವಾರಕ್ಕೆ ಏರಿಸುವ ಮೂಲಕ ಜೊತೆಗಾರರಿಗೆ ಅಥವಾ ಮಹಿಳೆಗೆ ತೀರ್ಮಾನ ತೆಗೆದುಕೊಳ್ಳಲು ಹೆಚ್ಚಿನ ಸಮಯಾವಕಾಶವನ್ನು ನೀಡಲಾಗಿದೆ.

3. ಅತ್ಯಾಚಾರ ಎಂಬ ಪದವನ್ನು ವೈವಾಹಿಕ ಸಂಬಂಧಕ್ಕೂ ವಿಸ್ತರಿಸುವ ಮೂಲಕ ವೈವಾಹಿಕ ಅತ್ಯಾಚಾರದಿಂದ ಗರ್ಭಧರಿಸಿದ ಹೆಣ್ಣು ಮಕ್ಕಳೂ ಗರ್ಭಪಾತ ಮಾಡಿಸಲು ಅವಕಾಶ ನೀಡಲಾಗಿದೆ.

ವಿವಾಹ ಎಂಬುದನ್ನು ಅತ್ಯಾಚಾರದ ಪರಿಧಿಯಿಂದ ದೂರ ಇಟ್ಟಿರುವ ಸರ್ಕಾರಗಳು ಇಲ್ಲಿಯವರೆಗೂ ವೈವಾಹಿತ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿಲ್ಲ; ಹಾಗೆ ಮಾಡುವುದರಿಂದ ಕುಟುಂಬ ವ್ಯವಸ್ಥೆಯೇ ಕುಸಿದುಬೀಳುತ್ತದೆ ಎಂಬ ವಾದ ಮುಂದಿಟ್ಟು, ಒಲ್ಲದ ಮದುವೆಯಲ್ಲಿ ಹೆಣ್ಣು ಬಲವಂತದಿಂದ ಎಲ್ಲವನ್ನೂ ಸಹಿಸಿಕೊಳ್ಳುವಂತೆ ಮಾಡಲಾಗಿದೆ. ಆದರೆ ಈ ಬದಲಾದ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಒಲ್ಲದ ಸಂಭೋಗದಿಂದ ಧರಿಸಿದ ಗರ್ಭವನ್ನು ತೆಗೆಸುವ ಹಕ್ಕು ಮಹಿಳೆಗೆ ಇದೆ ಹಾಗೂ ಅವಳ ದೇಹ ಅವಳ ಸ್ವಾಯತ್ತತೆ; ಅದನ್ನು ಪುರುಷ ಪ್ರಧಾನ ವ್ಯವಸ್ಥೆಯ ದೃಷ್ಟಿಕೋನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿಸುಪ್ರೀಂಕೋರ್ಟ್: ಬದಲಾವಣೆಯ ಗಾಳಿ ಜಸ್ಟಿಸ್ ಯು.ಯು ಲಲಿತ್

4. ಸಂತಾನೋತ್ಪತ್ತಿಯ ಹಕ್ಕುಗಳು ಎಂಬುದನ್ನು ವಿವರಿಸುತ್ತ ನ್ಯಾಯಮೂರ್ತಿಗಳು, ಇದು ಕೇವಲ ಮಕ್ಕಳನ್ನು ಹೆರುವುದಕ್ಕಷ್ಟೇ ಅಲ್ಲದೆ, ಸಂತಾನ ನಿಯಂತ್ರಣ ಪ್ರಕ್ರಿಯೆಗಳು ಮತ್ತು ಸೌಲಭ್ಯಗಳ ಬಗೆಗೆ ಸರಿಯಾದ ಮಾಹಿತಿ ಮತ್ತು ಜ್ಞಾನ ಹೊಂದುವುದೂ ಆಗಿದೆ ಎಂದು ಹೇಳುತ್ತಾರೆ. ಯಾವಾಗ ಮಕ್ಕಳನ್ನು ಹೆರಬೇಕು, ಎಷ್ಟು ಮಕ್ಕಳನ್ನು ಹೆರಬೇಕು ಎಂಬ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳಲೂ ಹೆಣ್ಣು ಸಂಪೂರ್ಣವಾಗಿ ಸ್ವತಂತ್ರಳು ಎಂದು ಹೇಳುವ ಮೂಲಕ ಹೆಣ್ಣಿನ ಹಕ್ಕನ್ನು ಗಂಡಿಗೆ ಸರಿಸಮನಾಗಿ ಗುರ್ತಿಸಿದ್ದಾರೆ.

ನ್ಯಾಯಮೂರ್ತಿಗಳು ನೀಡಿದ ತೀರ್ಪು ಅತ್ಯಂತ ಸಂವೇದನಾಶೀಲವಾಗಿರುವುದರೆ ಜೊತೆಗೇ ಸಮಾನತೆ ಎಂಬ ಹಕ್ಕಿನ ನಿಜವಾದ ವ್ಯಾಖ್ಯಾನವಾಗಿದೆ. ದೇಶದೆಲ್ಲೆಡೆ ಬಹುತೇಕ ಎಲ್ಲರೂ ಈ ತೀರ್ಪಿಗೆ ಸಮ್ಮತಿ ಸಹಮತವನ್ನೇ ಸೂಚಿಸಿದ್ದರೂ ಸಹಿತ ಕೆಲವರು ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದಾರೆ. ಈ ಆತಂಕಗಳು ನಿರಾಧಾರವಾದದ್ದು ಅಲ್ಲವಾದರೂ ಅವಕ್ಕೆ ಕೋರ್ಟು ಗಮನದಲ್ಲಿಟ್ಟುಕೊಂಡೇ ತೀರ್ಪು ನೀಡಿದೆ.

ಆತಂಕಗಳು

1. ಭಾರತದಲ್ಲಿ ವೈವಾಹಿತ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿಲ್ಲ. ಹಾಗಾದರೆ ಅಂತ ಸಂದರ್ಭದಲ್ಲಿ ಇದನ್ನು ಹೇಗೆ ಅರ್ಥೈಸುವುದು.

ಈಗಾಗಲೇ ಹೇಳಿದಂತೆ ನ್ಯಾಯಮೂರ್ತಿಗಳು ಹೆಣ್ಣಿನ ಸಮಾನತೆಯ ಹಕ್ಕು ಮತ್ತು ಅವಳಿಗೆ ತನ್ನ ದೇಹದ ಮೇಲಿನ ಸ್ವಾಯತ್ತತೆಯ ಹಕ್ಕನ್ನು ಎತ್ತಿ ಹಿಡಿದಾಗ ಇಲ್ಲಿ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳು ಮುಖ್ಯವಾಗುತ್ತವೆ ಹೊರತು ಇತರ ಕಾನೂನುಗಳಲ್ಲ. ಏಕೆಂದರೆ ನಿಸ್ಸಂಶಯವಾಗಿ ಸಂವಿಧಾನ ಎಲ್ಲಾ ಕಾನೂನಗಳಿಗೂ ಮೂಲ.

2. ಒಲ್ಲದ ಗರ್ಭಧಾರಣೆ ಎಂಬ ಕಾರಣಕ್ಕೆ ಹೆಣ್ಣು ಭ್ರೂಣಹತ್ಯೆ ಹೆಚ್ಚಾಗಬಹುದು. ಅದರಿಂದ ಸಮಾಜದ ಸಮತೋಲನ ಕೆಡಬಹುದು ಎಂಬುದು.

ಡೊನಾಲ್ಡ್ ಟ್ರಂಪ್

ತೀರ್ಪು ನೀಡುವ ಸಂದರ್ಭದಲ್ಲಿ ಇದನ್ನು ವಿವರಿಸುತ್ತ ಭ್ರೂಣಲಿಂಗ ಪತ್ತೆ ಹಚ್ಚುವ ಕಾಯ್ದೆಯನ್ನು ಹೇಗೆ ಬಲಪಡಿಸಬೇಕು ಎಂಬ ಬಗ್ಗೆಯೂ ಹೇಳಲಾಗಿದೆ. ಏಕೆಂದರೆ ಭ್ರೂಣದ ಲಿಂಗ ಪತ್ತೆ ಆಗದೆ ಹೆಣ್ಣು ಮಗು ಎಂಬ ಕಾರಣಕ್ಕೆ ಗರ್ಭಪಾತ ಮಾಡಿಸುವುದು ಅಸಾಧ್ಯ ಅದಕ್ಕೆಂದೇ ಬಲವಾದ ಕಾನೂನುಗಳನ್ನು ರಚಿಸುವ ಮೂಲಕ ಇಂತಹ ದುರುಪಯೋಗ ತಡೆಯುತ್ತೇವೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

3. 24 ವಾರಗಳು ಎಂಬುದು ಸ್ವಲ್ಪ ಮುಂದುವರಿದ ಗರ್ಭವಾದ್ದರಿಂದ ಅಂಥ ಸಂದರ್ಭದಲ್ಲಿ ಗರ್ಭಪಾತ ಮಾಡಿಸಲು ಹೋಗಿ ಗರ್ಭಿಣಿಯರಿಗೆ ಅಪಾಯವಾಗುವ ಸಂಭವವಿದೆ.

24 ವಾರ ಎಂಬುದು 6ನೇ ತಿಂಗಳ ಗರ್ಭ; ಹಾಗಾಗಿ ಸುರ್ಪೀಂಕೋರ್ಟ್ ಎಲ್ಲಾ ಬಗೆಯ ಸುರಕ್ಷತಾ ಕ್ರಮಗಳನ್ನು ವಿವರಿಸುತ್ತಲೇ ಇದಕ್ಕೆ ಅನುಮತಿ ನೀಡಿದೆ. ಗರ್ಭದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗಳು ಕೆಲವೊಮ್ಮೆ ಗರ್ಭಧಾರಣೆಯ ಪ್ರಾರಂಭಿಕ ತಿಂಗಳುಗಳಲ್ಲಿ ಪತ್ತೆಯಾಗುವುದಿಲ್ಲ ಅಥವಾ ಗರ್ಭಿಣಿ ಇರುವ ಸ್ಥಳದಲ್ಲಿ ಅಂತಹ ಪರೀಕ್ಷೆಗಳಿಗೆ ಅವಕಾಶ ಇರುವುದಿಲ್ಲ. ಆದ್ದರಿಂದ ಸ್ವಲ್ಪ ತಡವಾದರೂ ಸಹಿತ ಸುರಕ್ಷಿತವಾದ ಪ್ರಕ್ರಿಯೆಗಳ ಮೂಲಕ ಗರ್ಭಪಾತ ಮಾಡುವುದರಿಂದ ಒಂದು ಮಗು ವಿಕಲಚೇತನವಾಗಿ ಜೀವನಪರ್ಯಂತ ನರಳುವುದನ್ನು ತಡೆಯಬಹುದು.

ಇದನ್ನೂ ಓದಿಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಇಲ್ಲಿಯವರೆಗೂ ಚಾಲ್ತಿಯಲ್ಲಿದ್ದ ಕಾಯ್ದೆಯ ಪ್ರಕಾರ ಗರ್ಭಪಾತ ಕಾನೂನಿನಲ್ಲಿ ಹೇಳಲಾದ ಕಾರಣಗಳ ಪ್ರಕಾರವೇ ಗರ್ಭಪಾತ ಮಾಡಲಾಗುತ್ತಿದೆ ಎಂಬುದನ್ನು ಹೆಣ್ಣುಮಗಳೇ ಸಾಬೀತುಪಡಿಸಬೇಕಾಗಿತ್ತು. ಸ್ವಲ್ಪ ಹೆಚ್ಚುಕಮ್ಮಿ ಆದರೂ ಅದನ್ನು ಅಪರಾಧವೆಂದು ಪರಿಗಣಿಸುವ ಸಾಧ್ಯತೆಯಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ನೇರ ಮತ್ತು ಪರೋಕ್ಷವಾದ ಅನೇಕ ನಿಯಮಗಳು ತೊಡಕಾಗಿದ್ದವು. ಇಂಥ ತೊಡಕುಗಳಿಂದ ತಪ್ಪಿಸಿಕೊಳ್ಳಲು ಜನರು ಕಾನೂನುಬಾಹಿರವಾಗಿ ನಡೆಯುತ್ತಿರುವ ಸಾವಿರಾರು ಗರ್ಭಪಾತ ಕೇಂದ್ರಗಳಿಗೆ ಹೋಗಿ ಅಲ್ಲಿನ ಅಸುರಕ್ಷಿತ ವಾತಾವರಣದಲ್ಲಿ ಪ್ರಾಣ ಕಳೆದುಕೊಂಡ ಉದಾಹರಣೆಗಳೂ ಬೇಕಾದಷ್ಟಿವೆ.

ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಯಾವ ದೇಶಗಳಲ್ಲಿ ಗರ್ಭಪಾತಕ್ಕೆ ಕಾನೂನಿನ ಸಹಮತ ಮತ್ತು ರಕ್ಷಣೆ ಇದೆಯೋ ಅಲ್ಲಿ ಗರ್ಭಪಾತದ ಸಮಯದಲ್ಲಿ ಅಸುರಕ್ಷಿತ ಕ್ರಮಗಳಿಂದ ಪ್ರಾಣ ಕಳೆದುಕೊಳ್ಳುವ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇದೆ. ಈ ಸಮೀಕ್ಷೆ ಪ್ರಕಾರ ಕೆನಡಾದಲ್ಲಿ ಗರ್ಭಪಾತದ ಸಮಯದಲ್ಲಿ ಸಾವಿನ ಸಂಖ್ಯೆ ಶೂನ್ಯ. ಸುಪೀಂ ಕೋರ್ಟಿನ ಈ ಸುರಕ್ಷಿತ ಗರ್ಭಪಾತ ಕಾನೂನಿನ ಜೊತೆಗೆ ಭ್ರೂಣಲಿಂಗ ಪತ್ತೆ ಸಂಪೂರ್ಣವಾಗಿ ನಿಂತರೆ ಬಹುಶಃ ನಮ್ಮ ದೇಶದ ಹೆಣ್ಣುಮಕ್ಕಳ ಸುರಕ್ಷತೆ ಸಾಧಿಸಬಹುದು.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...