Homeಕ್ರೀಡೆಕ್ರಿಕೆಟ್2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

- Advertisement -
- Advertisement -

2023ರ ಏಷ್ಯಾಕಪ್‌ ಪಂದ್ಯಾವಳಿ ನಡೆಯುವ ಪಾಕಿಸ್ತಾನಕ್ಕೆ ಭಾರತೀಯ ಕ್ರಿಕೆಟ್ ತಂಡವು ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ಬೆನ್ನಲ್ಲೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ನಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಹೇಳಿದೆ. ಹಾಗಾಗಿ ಎರಡೂ ದೇಶದ ಕ್ರಿಕೆಟ್ ಮಂಡಳಿಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಜಯ್ ಶಾ “ಪಾಕಿಸ್ತಾನಕ್ಕೆ ಭಾರತ ತಂಡ ಪ್ರಯಾಣಿಸಲು ಸಾಧ್ಯವಿಲ್ಲ. ಹಾಗಾಗಿ ತಟಸ್ಥ ಸ್ಥಳದಲ್ಲಿ ಪಂದ್ಯಾವಳಿ ಆಯೋಜಿಸಬೇಕು” ಎಂಬ ಹೇಳೀಕೆ ಬೆನ್ನಲ್ಲೆ ಪಾಕ್ ಕ್ರಿಕೆಟ್ ಮಂಡಳಿ ಸಹ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಿಂದ ದೂರವುಳಿಯುವುದಾಗಿ ಬೆದರಿಕೆ ಒಡ್ಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜಯ್ ಶಾ ಹೇಳಿಕೆಯು ಏಕಪಕ್ಷೀಯವಾಗಿದ್ದು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯವನ್ನು ವಿಭಜಿಸಬಹುದು ಎಂದು ಹೇಳಿದೆ. ಏಷ್ಯಾ ಕಪ್ ಅನ್ನು ಪಾಕಿಸ್ತಾನದಿಂದ ಹೊರಕ್ಕೆ ಸ್ಥಳಾಂತರಿಸುವುದು ಭಾರತದಲ್ಲಿ ವಿಶ್ವಕಪ್‌ನಂತಹ ಭವಿಷ್ಯದ ಘಟನೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಅದು ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಕ್ರೀಡಾ ಸಚಿವ ಅನುರಾಗ್ ಠಾಕೂರ್, “ಮುಂದಿನ ವರ್ಷ ಭಾರತದಲ್ಲಿ ODI ವಿಶ್ವಕಪ್ ನಡೆಯಲಿದ್ದು, ಜಗತ್ತಿನ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಏಕೆಂದರೆ ಯಾವುದೇ ಕ್ರೀಡೆಯಲ್ಲಿ ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ. ಭಾರತ ಕ್ರೀಡೆಗೆ ಅದರಲ್ಲೂ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಭಾರತವಿಲ್ಲದೇ ಕ್ರಿಕೆಟ್ ಎಂದರೇನು?” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನಕ್ಕೆ ಏಷ್ಯಾಕಪ್‌ಗಾಗಿ ಭಾರತ ಕ್ರಿಕೆಟ್ ತಂಡದ ಪ್ರಯಾಣದ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸುತ್ತದೆ. ಸಾಧ್ಯತೆಗಳು ಯಾವಾಗಲೂ ಇರುತ್ತವೆ. COVID-19 ಇರುತ್ತದೆ ಎಂದು ಯಾರು ಭಾವಿಸಿದ್ದರು? ಏನು ಬೇಕಾದರೂ ಆಗಬಹುದು ಆದರೆ ಈಗ ಸಾಧ್ಯತೆಗಳು ಹೆಚ್ಚಿಲ್ಲ. ಇದು ಗೃಹ ಸಚಿವಾಲಯವು ತೆಗೆದುಕೊಳ್ಳುವ ನಿರ್ಧಾರವಾಗಿದೆ. ಒಟ್ಟಾರೆ, ಆಟಗಾರರ ಸುರಕ್ಷತೆ ಮತ್ತು ಭದ್ರತೆಯು ಒಂದು ಪ್ರಮುಖ ವಿಷಯವಾಗಿದೆ” ಎಂದಿದ್ದಾರೆ.

ಕಳೆದ ವರ್ಷದಿಂದ ಪಾಕಿಸ್ತಾನ ತಂಡವು ಮಹತ್ವದ ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಯೋಜಿಸುತ್ತಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಪಾಕ್‌ಗೆ ತೆರಳಿ ಪಂದ್ಯಗಳಾಡಿವೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿ ಆಡವಾಡಿದ್ದು 2005ರಲ್ಲಿಯೇ ಕೊನೆಯಾಗಿದೆ. ಆಗ ರಾಹುಲ್ ದ್ರಾವಿಡ್ ನೇತೃತ್ವದ ತಂಡ ಪಾಕ್‌ಗೆ ಪ್ರಯಾಣ ಬೆಳೆಸಿತ್ತು. ಪಾಕಿಸ್ತಾನ ತಂಡವು 2012-13ರಲ್ಲಿ ಮೂರು T20Iಗಳು ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಮಾಡಿದ್ದೆ ಕೊನೆಯಾಗಿದೆ.

ಈ ಎಲ್ಲಾ ಗದ್ದಲಗಳ ನಡುವೆ ಇದೇ ಅಕ್ಟೋಬರ್ 23ರ ಭಾನುವಾರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತ-ಪಾಕ್ ತಂಡಗಳು ಪರಸ್ಪರ ಎದುರಾಗುತ್ತಿವೆ. ಅಭಿಮಾನಿಗಳು ಆ ಪಂದ್ಯಕ್ಕಾಗಿ ಕಾತುರರಾಗಿದ್ದಾರೆ.

ಇದನ್ನೂ ಓದಿ; 2023ರ ಏಷ್ಯಾ ಕಪ್‌‌ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ: ಜಯ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...