Homeಕರ್ನಾಟಕಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್‌ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್‌ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಚಾಲಕ ಸೇರಿದಂತೆ, ಮುಂಭಾಗದ ಸೀಟಿನಲ್ಲಿರುವವರು ಮತ್ತು ಹಿಂಭಾಗದ ಸೀಟುಗಳ ಕಾರು ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಪೊಲೀಸ್ ಇಲಾಖೆಯು ಮೆಮೊ ಹೊರಡಿಸಿದ್ದು, ತಪ್ಪಿದಲ್ಲಿ ರೂ 1000 ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ.

ಹೊಸ ನಿಯಮವೂ M1 ವರ್ಗದ ಮೋಟಾರು ವಾಹನಗಳಿಗೆ ಅನ್ವಯವಾಗಲಿದೆ. ಚಾಲಕನ ಸೀಟಿಗೆ ಹೆಚ್ಚುವರಿಯಾಗಿ ಎಂಟು ಸೀಟುಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ಮೋಟಾರು ವಾಹನಗಳನ್ನು M1 ವರ್ಗದ ವಾಹನಗಳು ಎಂದು ವರ್ಗೀಕರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

M1 ವರ್ಗದ ಕಾರುಗಳಲ್ಲಿ ಎಸ್‌ಯುವಿಗಳು, ಎಂಯುವಿಗಳು, ಹ್ಯಾಚ್‌ಬ್ಯಾಕ್‌ಗಳು, ಸೆಡಾನ್‌ಗಳು ಹಾಗೂ ಇತ್ಯಾದಿ ಕಾರುಗಳು ಸೇರಿವೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ರಸ್ತೆ ಸುರಕ್ಷತೆ) ಆರ್. ಹಿತೇಂದ್ರ ಅವರು ರಾಜ್ಯದ ಎಲ್ಲಾ ಪೊಲೀಸ್ ಕಮಿಷನರೇಟ್‌ಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿಯಮವನ್ನು ಜಾರಿಗೊಳಿಸಲು ಅಕ್ಟೋಬರ್ 18ರ ಮಂಗಳವಾರ ಆದೇಶವನ್ನು ಹೊರಡಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ನಿರ್ದೇಶನವನ್ನು ಆದೇಶವು ಉಲ್ಲೇಖಿಸಿದೆ. ಸೆಪ್ಟೆಂಬರ್ 19 ರ ಒಕ್ಕೂಟ ಸರ್ಕಾರದ ಆದೇಶವು ಮೋಟಾರು ವಾಹನ ಕಾಯಿದೆ-1988 ರ ಸೆಕ್ಷನ್ 194B ಅಡಿಯಲ್ಲಿ ಸೀಟ್ ಬೆಲ್ಟ್‌ಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸುತ್ತದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳು-1989 ರ ನಿಯಮ 125 (1) ಎಲ್ಲಾ ಕಾರುಗಳು ಸೀಟ್ ಬೆಲ್ಟ್ ಹೊಂದಿರಬೇಕು ಎಂದು ಹೇಳುತ್ತದೆ.

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಸಾವಿನ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರದ ಈ ಆದೇಶ ಹೊರಬಿದ್ದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಅವರು ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂದು ವರದಿಯಾಗಿತ್ತು.

ಇದನ್ನೂ ಓದಿ: ರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

ಸುರಕ್ಷತಾ ಬೆಲ್ಟ್‌ಗಳ ಬಳಕೆಯನ್ನು ಕಡ್ಡಾಯಗೊಳಿಸುವ ಮೋಟಾರು ವಾಹನ ಕಾಯಿದೆ-1988 ರ ಸೆಕ್ಷನ್ 194B ಅಡಿಯಲ್ಲಿ, “ಸೀಟ್ ಬೆಲ್ಟ್ ಧರಿಸದೆ ಮೋಟಾರು ವಾಹನವನ್ನು ಚಾಲನೆ ಮಾಡುವವರು ಅಥವಾ ಸುರಕ್ಷತಾ ಬೆಲ್ಟ್ ಧರಿಸದ ಪ್ರಯಾಣಿಕರನ್ನು ಸಾಗಿಸುವವರಿಗೆ 1000 ರೂ. ದಂಡ ವಿಧಿಸಲಾಗುತ್ತದೆ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....