Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...