Homeಮುಖಪುಟಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

- Advertisement -
- Advertisement -

ನೋಯ್ಡಾದ ಸೊಸೈಟಿಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತಕ್ಕೊಳಗಾಗಿದ್ದ ರಾಜಕಾರಣಿ, ಗ್ಯಾಂಗ್‌ಸ್ಟರ್‌ ಆರೋಪ ಹೊತ್ತಿರುವ ಶ್ರೀಕಾಂತ್ ತ್ಯಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಭವ್ಯ ಸ್ವಾಗತ ಪಡೆದಿದ್ದಾನೆ.

ತ್ಯಾಗಿಯ ಬೆಂಬಲಿಗರು “ಶ್ರೀಕಾಂತ್ ಭಯ್ಯಾ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದು ತ್ಯಾಗಿಯ ಮೇಲೆ ಹೂ ಮಳೆ ಸುರಿಸಿದ್ದಾರೆ. ಜೊತೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಗೆ ಹಿಂತಿರುಗಿದ ತ್ಯಾಗಿ ತನ್ನ ವಿರೋಧಿಗಳನ್ನು ಕಟುವಾಗಿ ಟೀಕಿಸಿದ್ದಾನೆ. “ಗ್ಯಾಗ್‌ಸ್ಟರ್‌ ಎಂದು ನನ್ನ ವಿರುದ್ಧ ಆರೋಪ ಹೊರಿಸಲಾಗಿದ್ದು, ಅದು ಕಟ್ಟುಕತೆಯಾಗಿದೆ. ನನ್ನ ರಾಜಕೀಯ ಜೀವನವನ್ನು ಮುಗಿಸುವ ಪ್ರಯತ್ನದಲ್ಲಿ ‘ಪ್ರಾಯೋಜಿತ ಪಿತೂರಿ’ ನಡೆಸಲಾಗಿದೆ” ಎಂದಿದ್ದಾನೆ.

“ಈ ಷಡ್ಯಂತ್ರದ ಭಾಗವಾಗಿ ನಮ್ಮ ಸಹೋದರಿಯೊಬ್ಬರನ್ನು ಮುಂದಿಟ್ಟುಕೊಂಡು ನಮ್ಮ ನಡುವೆಯೇ ವಿವಾದ ಸೃಷ್ಟಿಸಿದ್ದಾರೆ. ದೃಶ್ಯವನ್ನು ಚಿತ್ರೀಕರಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ” ಎಂದು ಆರೋಪಿಸಿದ್ದಾನೆ.

ಜೈಲಿನಲ್ಲಿದ್ದಾಗ ನನಗೆ ಹಾಗೂ ನನ್ನ ಕುಟುಂಬಕ್ಕೆ ಬೆಂಬಲ ನೀಡಿದ ತ್ಯಾಗಿ ಸಮುದಾಯಕ್ಕೆ ಧನ್ಯವಾದಗಳು. ತ್ಯಾಗಿ ಸಮುದಾಯದ ಮಾನಹಾನಿ ಮಾಡುವ ಯತ್ನವೂ ನಡೆದಿದ್ದು, ತನಿಖೆ ಏಕಪಕ್ಷೀಯವಾಗಿರುವುದು ಸಹಜ ಎಂದು ದೂರಿದ್ದಾನೆ.

ರಾಜಕೀಯದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ, “ಯಾಕೆ ಬೇಡ, ನಾನೊಬ್ಬ ರಾಜಕೀಯ ನಾಯಕ, ಇನ್ನೇನು ಮಾಡಲಿ? ನನ್ನ ಬೆಂಬಲಿಗರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾನೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಮೀರತ್‌ನಲ್ಲಿ ಬಂಧಿಸಿದ್ದರು.

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿತ್ತು. ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು.

ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿತ್ತು. ತ್ಯಾಗಿಯ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿತ್ತು. ಆತನ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿರಿ: ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು. ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿತ್ತು. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...