Homeಕರ್ನಾಟಕವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ಬಲಪಂಥೀಯ ಸನಾತನ ಸಂಸ್ಥೆ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಕೊಲೆಯ ಪ್ರಧಾನ ಆರೋಪಿಗಳಾಗಿದ್ದಾರೆ

- Advertisement -
- Advertisement -

ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಯ ಎರಡನೇ ಸ್ವತಂತ್ರ ಸಾಕ್ಷಿಯು 2015 ರಲ್ಲಿ ಧಾರವಾಡದ ಅವರ ಮನೆಯ ಹೊರಗೆ ಅವರ ಮೇಲೆ ಗುಮಟು ಹಾರಿಸಿದ ವ್ಯಕ್ತಿಯನ್ನು ಗುರುತಿಸಿದ್ದಾರೆ. ಕಲ್ಬುರ್ಗಿ ಅವರ ಮನೆಯ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕ್ಷಿಯು, ಹುಬ್ಬಳ್ಳಿಯ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಗಣೇಶ್ ಮಿಸ್ಕಿನ್ (29) ಎಂಬಾತನೆ ಈ ಶೂಟರ್ ಎಂದು ಗುರುತಿಸಿದ್ದಾರೆ.

ಬಲಪಂಥೀಯ ಸನಾತನ ಸಂಸ್ಥೆಯ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕ ಅಮೋಲ್ ಕಾಳೆ (39) ಎಂಬಾತ ಕಲಬುರ್ಗಿ ಅವರ ಮನೆಯ ಸುತ್ತಲೂ ಓಡಾಡುತ್ತಿದ್ದ ಎಂದು ಕೂಡಾ ಸಾಕ್ಷಿ ಹೇಳಿದ್ದಾರೆ. ಕಲಬುರ್ಗಿ ಅವರ ಕೊಲೆಗೆ ಅಮೋಲ್ ಕಾಳೆ ಸಂಚು ರೂಪಿಸಿದ್ದನು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಎರಡನೇ ಸ್ವತಂತ್ರ ಸಾಕ್ಷಿ ಇಬ್ಬರನ್ನೂ ಗುರುತಿಸಿದ್ದಾರೆ.

ಕಲ್ಬುರ್ಗಿ ಅವರ ಮನೆಯ ಎದುರು ಅಂಗಡಿಯನ್ನು ಹೊಂದಿದ್ದ ಇನ್ನೊಬ್ಬ ಸ್ವತಂತ್ರ ಸಾಕ್ಷಿ ಆಗಸ್ಟ್ 30, 2015 ರಂದು ಶೂಟರ್ ಅನ್ನು ಕಲಬುರ್ಗಿ ಅವರ ಮನೆಗೆ ಕರೆತಂದ ಬೈಕ್‌ ಸವಾರನನ್ನು ಗುರುತಿಸಿದ್ದರು. ಈ ಸವಾರನನ್ನು ಬೆಳಗಾವಿಯ ಹಿಂದುತ್ವ ದುಷ್ಕರ್ಮಿ ಪ್ರವೀಣ್‌ ಚತುರ್‌ (29) ಎಂದು ಗುರುತಿಸಲಾಗಿದ್ದು, ಈತ ಕಲಬುರ್ಗಿ ಅವರ ಕೊಲೆಯ ನಂತರ ಶೂಟರ್‌‌ನೊಂದಿಗೆ ತಪ್ಪಿಸಿಕೊಳ್ಳಲು ಹೊರಗೆ ಕಾಯುತ್ತಿದ್ದನು.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಕಲ್ಬುರ್ಗಿ ಅವರ ಹತ್ಯೆಯ ದಿನ ಅವರ ಪುತ್ರಿ ರೂಪದರ್ಶಿ ಕೆ ಮನೆಯಲ್ಲಿ ಇದ್ದರು. ಅವರು ಕೋರ್ಟ್‌ನಲ್ಲಿ ಗಣೇಶ್ ಮಿಸ್ಕಿನ್‌ನನ್ನು ಗುರುತಿಸಿದ್ದರು. ಮನೆಯ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ ಚತುರ್‌‌ನನ್ನು ಕೂಡಾ ಅವರು ಗುರುತಿಸಿದ್ದರು. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕೂಡ ಮಾರ್ಚ್‌ನಲ್ಲಿ ಮಿಸ್ಕಿನ್‌ನನ್ನು ಗುರುತಿಸಿದ್ದರು.

ಮಿಸ್ಕಿನ್, ಚತುರ್ ಮತ್ತು ಕಾಳೆ ಅವರನ್ನು ಗುರುತಿಸಿರುವ ನಾಲ್ವರು ಸಾಕ್ಷಿಗಳು ಈ ಹಿಂದೆ ಪ್ರಕರಣದ ತನಿಖಾ ಹಂತದಲ್ಲಿ ನಡೆಸಿದ ಪರೀಕ್ಷಾ ಗುರುತಿನ ಪರೇಡ್‌ಗಳಲ್ಲಿ ಕೂಡಾ ಅವರನ್ನು ಗುರುತಿಸಿದ್ದರು. ಸಾಕ್ಷಿದಾರರು ಗುರುವಾರ ನ್ಯಾಯಾಲಯದಲ್ಲಿ ನೀಡಿರುವ ಮುಖ್ಯ ಹೇಳಿಕೆಯನ್ನು ಅನುಸರಿಸಿ ಎರಡನೇ ಸ್ವತಂತ್ರ ಸಾಕ್ಷಿಯನ್ನು ಮುಂದಿನ ತಿಂಗಳು ಪ್ರತಿವಾದಿ ವಕೀಲರು ಕ್ರಾಸ್ ಎಗ್ಸಾಮಿನ್‌ ಮಾಡಲಿದ್ದಾರೆ.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಕೂಡಾ ಗಣೇಶ್‌‌ ಮಿಸ್ಕಿನ್ ಮತ್ತು ಕಾಳೆ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಕಾಳೆ, ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಶ್ರೀರಾಮ ಸೇನೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದುಸ್ಥಾನದಂತಹ ಹಿಂದುತ್ವ ಸಂಘಟನೆಗಳಿಂದ ಉಗ್ರಗಾಮಿ ಮನಸ್ಥಿತಿ ಹೊಂದಿರುವ ಯುವಕರನ್ನು ಸೇರಿಸಿಕೊಳ್ಳುವ ಮೂಲಕ ಬಲಪಂಥೀಯ ಉಗ್ರಗಾಮಿ ಗುಂಪಿನ ಪ್ರಮುಖ ನಾಯಕರಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...