Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...