Homeಮುಖಪುಟಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ...

ಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ…

ಸ್ಥಿರ ಸರ್ಕಾರಕ್ಕಾಗಿ ಲೋಕಸಭೆಯಲ್ಲಿ ಜನತೆ ಕೊಟ್ಟ ಭಾರೀ ಬಹುಮತವನ್ನು ಬಿಜೆಪಿ, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಮತ್ತು ಭ್ರಷ್ಟಾಚಾರ ಹೆಚ್ಚು ಮಾಡಲು ಬಳಸುತ್ತಿರುವುದು ದುರಂತ

- Advertisement -
- Advertisement -

ಚುನಾವಣಾ ಅಫಿಡವಿಟ್‍ನಲ್ಲಿ ಘೋಷಿಸಿಕೊಂಡಂತೆ ಭಾರತದ ಅತ್ಯಂತ ಶ್ರೀಮಂತ ಎಂ.ಎಲ್.ಎ ಇವರು. ಅದು ಬರೋಬ್ಬರಿ 1015 ಕೋಟಿ ರೂಗಳ ಒಡೆಯ. ಇವರು ಕರ್ನಾಟಕದವರೆಂಬ ಹೆಮ್ಮೆ ಪಡುವ ವಿಷಯವೇನಲ್ಲ… ಅವರೇ ಶ್ರೀಮಂತ ರಾಜಕಾರಣಿ ಎಂಟಿಬಿ ನಾಗರಾಜ್.. ಹೊಸಕೋಟೆಯ ಶಾಸಕ ಮತ್ತು ಕರ್ನಾಟದ ವಸತಿ ಸಚಿವರಾಗಿದ್ದ ಇವರು ಸದ್ಯಕ್ಕೆ ಅತೃಪ್ತರ ಗ್ಯಾಂಗ್ ನಲ್ಲಿದ್ದಾರೆ.

ಇನ್ನು ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ.

ಅ (ತೃಪ್ತ) ರಾಜಕಾರಣಿ, ಬಹುದೊಡ್ಡ ಸಿನಿಮಾ ನಿರ್ಮಾಪಕ, ಅಗರ್ಭ ಶ್ರೀಮಂತ, ಹಗರಣಗಳ ಸರದಾರ ಮುನಿರತ್ನ.. ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ. ಇವರಿಗೂ ಯಾವ ರೀತಿಯ ಅತೃಪ್ತಿಯೋ ಗೊತ್ತಿಲ್ಲ, ಕ್ಷೇತ್ರ ಬಿಟ್ಟು ರಾಜಿನಾಮೆ ಕೊಟ್ಟು ಮುಂಬೈ ಸೇರಿಕೊಂಡಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇದೇ ರೀತಿ ಅಗರ್ಭ ಶ್ರೀಮಂತರಾದ ಹೆಬ್ಬಾಳ ಶಾಸಕ ಭೈರತಿ ಸುರೇಶ್, ಯಶವಂತಪುರದ ಶಾಸಕ ಎಸ್.ಟಿ ಸೋಮಶೇಖರ್, ಮಾಜಿ ಸಚಿವ ಬಿಟಿಎಂ ಲೇಔಟ್‍ನ ರಾಮಲಿಂಗಾರೆಡ್ಡಿ ಸಹ ಕಾಂಗ್ರೆಸ್ ನೊಂದಿಗೆ ಮುನಿಸಿಕೊಂಡು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯ ಸಂಪೂರ್ಣ ಬೆಂಬಲದಿಂದ ಬದುಕುತ್ತಿದ್ದಾರೆ.

ಇವರೇಕೆ ಹೀಗೆ ಮಾಡಿದರು? ಇವರಿಗೆ ಹಣದ ಕೊರತೆಯಿಲ್ಲ ಹಾಗಾಗಿ ಬಿಜೆಪಿ ಇವರನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಇನ್ನು ಅಧಿಕಾರದ ಆಸೆಯ ಸೆಳೆಯುವಿಕೆಯೂ ಸಾಧ್ಯವಿಲ್ಲ. ಆದರೂ ಸಹ ಇವರೆಲ್ಲರೂ ಪಕ್ಷ ಬಿಟ್ಟು ಹೋಗಲಿಕ್ಕೆ ಕಾರಣವೇನು? ಉಳಿದವರು ಬಿಟ್ಟುಬಿಡೋಣ ಎಂಟಿಬಿ ನಾಗರಾಜ್ ರವರಿಗೆ ಸಾವಿರಾರು ಕೋಟಿ ಘೋಷಿತ ಆಸ್ತಿ ಇದೆ. ವಸತಿ ಸಚಿವ ಸ್ಥಾನವೂ ಇದೆ. ಸಿದ್ದರಾಮಯ್ಯನವರ ಆಪ್ತ ಬಳಗದವರು. ಅವರೇಕೆ ಪಕ್ಷ ಬಿಟ್ಟು ಹೋಗುತ್ತಿದ್ದಾರೆ? ಅವರಿಗೆ ಬಿಜೆಪಿಯವರು ಏನು ಕೊಡಲಿಕ್ಕೆ ಸಾಧ್ಯ? ಬಿಜೆಪಿ ಇವರಿಗೆ ಯಾವುದೇ ಆಮಿಷ ಒಡ್ಡಿಲ್ಲದಿದ್ದರೂ ಏಕೆ ಹೋದರು?

ಬಿಜೆಪಿ ಮಾಡಿದ್ದು ಇಷ್ಟೆ.

ಬಿಜೆಪಿ ಕೆಲ ಆಯ್ದ ಶಾಸಕರಿಗೆ ಕೊಟ್ಟ ಸೂಚನೆ ಇಷ್ಟೇ. ಕೇವಲ ಒಂದೇ ಮಾತು ಹೇಳದ್ದು. ಅದೇಂದರೆ 4 ದಿನದಲ್ಲಿ ರಾಜೀನಾಮೆ ಕೊಟ್ಟು ಬರಬೇಕು ಅಷ್ಟೇ. ಬಿಜೆಪಿ ಇವರಿಗೆ ಧಮಕಿ ಕೂಡ ಹಾಕಿಲ್ಲ. ಆ ಬಿಜೆಪಿಯವರ ಮಾತನ್ನು ಶಿರಾವಹಿಸಿ ಪಾಲಿಸಿದವರು ಈ ಶಾಸಕರು. ಇಲ್ಲದಿದ್ದರೆ ಈ ಶ್ರೀಮಂತ ಎಮ್ಮೆಲ್ಲೆಗಳಿಗೆ ಇಡಿ ಐಟಿ ಸಿಬಿಐ ರೈಡ್ ನಂತಹ ಅಸ್ತ್ರಗಳು ಕಾದು ಕುಳಿತಿದ್ದವು. ಮೊದಲೇ ಸಾಕಷ್ಟು ಸಂಪತ್ತಿನ ಒಡೆಯರಾದ ಇವರಿಗೆ ತಮ್ಮ ಸಂಪತ್ತನ್ನು ಉಳಿಸಿಕೊಳ್ಳಬೇಕಾದರೆ ಇದ್ದ ಮಾರ್ಗ ಒಂದೇ ಅದು ರಾಜೀನಾಮೆ ಕೊಡುವುದು.

ಇದರ ಕುರಿತು ರಾಮಲಿಂಗರೆಡ್ಡಿ ಸೂಚ್ಯವಾಗಿ ಹೇಳಿದ್ದಾರೆ. ನನ್ನನ್ನು ಸೇರಿದಂತೆ ನಮ್ಮ ಶಾಸಕರ ಮೇಲಿನ ದಾಳಿಗಳನ್ನು ತಡೆಯಲು ಪಕ್ಷ ಏನು ಮಾಡಿದೆ? ನಮಗೆ ಯಾವ ರೀತಿಯ ರಕ್ಷಣೆ ನೀಡಿದೆ ಎಂದು ಕೇಳಿದರು. ಅದಕ್ಕೆ ಕಾಂಗ್ರೆಸ್ಸಿನ ಯಾವ ನಾಯಕನ ಬಳಿಯೂ ಉತ್ತರವಿರಲಿಲ್ಲ. ಇದರ ಸುಳಿವ ಅರಿತ ಮತ್ತು ಈ ದಾಳಿಗಳನ್ನು ಮೂರು ವರ್ಷಗಳಿಂದಲೂ ಎದುರಿಸುತ್ತಿರುವ ಡಿ.ಕೆ ಶಿವಕುಮಾರ್ ಎಂಟಿಬಿ ನಾಗಾರಾಜ್‍ರನ್ನು ಮನವೊಲಿಸುತ್ತಾ ನನ್ನ ಮೇಲೆಯೂ ಐಟಿ ಇಡಿ ದಾಳಿ ಆಗಿದೆ. ಹಾಗಂತ ಹೆದರೋಕೆ ಆಗುತ್ತಾ ಎಂದು ಹೇಳಿಯೇ ಸ್ವಲ್ಪ ಮಟ್ಟಿಗೆ ಕನ್ವಿನ್ಸ್ ಮಾಡಿದ್ದರು. ಆದರೆ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿರುವುದು, ಕೇಂದ್ರದಲ್ಲಿ ಬಿಜೆಪಿ ಭಾರೀ ಅಂತರದಲ್ಲಿ ಗೆದ್ದಿರುವುದನ್ನು ಕಂಡಿರುವ ಎಂಟಿಬಿ ನಾಗರಾಜ್‍ಗೆ ಧೈರ್ಯ ಸಾಲಲಿಲ್ಲ. ಅವರು ಡಿಕೆಶಿ ಕಣ್ತಪ್ಪಿಸಿ ಮುಂಬೈಗೆ ವಿಮಾನ ಹತ್ತಿದರು.

ಕರ್ನಾಟಕದ ಈ ಎಲ್ಲಾ ನಾಟಕದ ಹಿಂದೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಕೈವಾಡವಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬರೆಯಿತು. ಆನಂತರ ಟೈಮ್ಸ್ ಪತ್ರಿಕೆ ತನ್ನ ಬರವಣಿಗೆಯಿಂದ ಹಿಂದೆ ಸರಿಯಿತು. ಕಾರಣ ಯಾರಾದರೂ ಊಹಿಸಿಕೊಳ್ಳಬಹುದು.

ಅಧಿಕಾರ ದುರುಪಯೋಗ

ಈ ಎಲ್ಲಾ ಬೆಳವಣಿಗೆಗಳ ಹಿಂದಿರುವ ನಿಜವಾದ ಸೂತ್ರದಾರ ಅಮಿತ್ ಶಾ ಎಂದು ಹೇಳಲಾಗುತ್ತಿದೆ. ಅಮಿತವಾದ ಅವಕಾಶವಿರುವಾಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದನ್ನು ಬಿಟ್ಟು ಗೊಂದಲ ಸೃಷ್ಟಿಸುತ್ತಾ ಸಾಗಿರುವ ಶಾ ನ ಮುಂದಿನ ನಡೆಯ ಬಗ್ಗೆ ಲೆಕ್ಕಾ ಹಾಕುವುದು ಕಷ್ಟ ಸಾಧ್ಯವಾಗಿದೆ. ಆದರೆ ಲೋಕಸಭೆಯಲ್ಲಿ ಬಿಜೆಪಿಗೆ ಜನತೆ ನೀಡಿರುವ ಬಹುಮತವನ್ನು ದುರುಪಯೋಗಮಾಡಿಕೊಂಡು ಈ ರೀತಿ ಶಾಸಕರನ್ನು ಎದುರಿಸುತ್ತಿದ್ದಾರೆ ಎನ್ನುವುದು ಮಾತ್ರ ಸೂರ್ಯನಷ್ಟೇ ಸ್ಪಷ್ಟವಾಗಿದೆ.

 

ಇದೇ ಸಂದರ್ಭದಲ್ಲಿ ಗೋವಾದಲ್ಲಿಯೂ ಸಹ ಕಾಂಗ್ರೆಸ್ ನ ಹತ್ತು ಶಾಸಕರು ಕಾಂಗ್ರೆಸ್ ತೊರೆದು ಸಾಮೂಹಿಕವಾಗಿ ಬಿಜೆಪಿ ಸೇರಿದ್ದಾಗಿದೆ. ಅದರಲ್ಲಿ ಕೆಲವರಿಗೆ ಸಚಿವ ಸ್ಥಾನ, ಉಪಮುಖ್ಯಮಂತ್ರಿ ಹುದ್ದೆಗಳು ಸಹ ದೊರೆತಿವೆ. ಸಮಸ್ಯೆ ಇರುವುದು ಇಲ್ಲಿಯೇ.. ಶಾಸಕರು ಅಕ್ರಮ/ಬೇನಾಮಿ ಆಸ್ತಿ ಮಾಡಿದ್ದರೆ, ಜನರ ಹಣವನ್ನು ಲೂಟಿ ಮಾಡಿದ್ದರೆ, ತೆರಿಗೆ ವಂಚನೆ ಮಾಡಿದ್ದರೆ ಅವರ ಮೇಲೆ ಖಂಡಿತ ಈಡಿ ಐಟಿ ಸಿಬಿಐ ದಾಳಿ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಅಕ್ರಮ ಸಂಪತ್ತನ್ನು ಸರ್ಕಾರ ಬೊಕ್ಕಸಕ್ಕೆ ಸೇರಿಸಬೇಕು. ಅದು ಸಾಂವಿಧಾನಿಕ ಕ್ರಮ. ಆದರೆ ಬಿಜೆಪಿ ಹಾಗೆ ಮಾಡುತ್ತಿಲ್ಲ. ಬದಲಿಗೆ ಆ ಬೆದರಿಕೆ ಒಡ್ಡಿ ಅವರನ್ನು ತಮ್ಮ ಪಕ್ಷಗಳತ್ತ ಸೆಳೆದುಕೊಂಡು ಅಕ್ರಮ ಮಾರ್ಗದಲ್ಲಿ ಸರ್ಕಾರ ರಚಿಸುತ್ತಿದೆ. ಅವರಿಗೆ ಮಂತ್ರಿ ಪದವಿ ಜೊತೆಗೆ ಮತ್ತಷ್ಟು ಹಣದ ಹೊಳೆ ಹರಿಸುತ್ತಿದೆ. (ಆ ಹಣದ ಮೂಲ ಕೆದಕಿದರೆ ಅದು ಜನಸಾಮಾನ್ಯರ ತೆರಿಗೆ ಎಂಬುದು ಸ್ಪಷ್ಟವಾಗುತ್ತದೆ) ಆ ಮೂಲಕ ಭ್ರಷ್ಟರನ್ನು ಮತ್ತಷ್ಟು ಕೊಬ್ಬಿಸುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಮತ್ತಷ್ಟು ಪ್ರೋತ್ಸಾಹ ಕೊಡುತ್ತಿದೆ. ಸ್ಥಿರ ಸರ್ಕಾರ ರಚಿಸುವ ಸಲುವಾಗಿ ಜನರು ಕೊಟ್ಟ ಬಹುಮತವನ್ನು ಈ ರೀತಿ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಸ್ಥಾಪನೆಗೆ ಮುಂದಾಗುತ್ತಿದೆ.

ಬಿಜೆಪಿಯ ಆಟ ಇಲ್ಲಿಗೆ ನಿಲ್ಲಲ್ಲಿದೆ ಎಂದು ತಿಳಿಯಬೇಡಿ. ಆ ಪಕ್ಷದ ಮುಖುಲ್ ರಾಯ್ ಎಂಬುವವರು ಈಗಾಗಲೇ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ಪಕ್ಷಗಳಿಂದ ಸುಮಾರು 107 ಜನ ಶಾಸಕರ ತಮ್ಮ ಪಕ್ಷ ತೊರೆದು ನಮ್ಮ ಪಕ್ಷ ಸೇರಲಿದ್ದಾರೆ ಎಂದು ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಈ ರೀತಿ ಇವರು ಬಹಿರಂಗವಾಗಿಯೇ ಕುದುರೆ ವ್ಯಾಪಾರಕ್ಕೆ ನಿಂತಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಟಿಎಂಸಿಯ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಅವರೆಲ್ಲಾ ಟಿಎಂಸಿ ತ್ಯಜಿಸಿ ಬಿಜೆಪಿ ಸೇರಲಿದ್ದಾರೆ ಎಂದು ಬಹಿರಂಗ ಬೆದರಿಕೆ ಒಡ್ಡಿದ್ದನ್ನು ನಾವು ಮರೆಯಬಾರದು. ನಿನ್ನೆ ತಾನೇ ಐಎಂಎ ಆರೋಪಿ ರೋಷನ್ ಬೇಗ್ ನನ್ನು ಸಹ ಪಕ್ಷಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದರು. ಕೊನೆ ಕ್ಷಣದಲ್ಲಿ ಎಸ್.ಐ.ಟಿ ದಾಳಿಯಿಂದ ವಿಫಲವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...