Homeಅಂತರಾಷ್ಟ್ರೀಯತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

- Advertisement -
- Advertisement -

ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್‌‌‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳಾದ ಯೂನಸ್ ಸಿದ್ದಿಕಿ (6) ಮತ್ತು ಸಾರಾ ಸಿದ್ದಿಕಿ (4) ನ್ಯಾಯಾರ್ಕ್‌ನಲ್ಲಿ ತಮ್ಮ ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿಯನ್ನು ಶುಕ್ರವಾರ ಸ್ವೀಕರಿಸಿದ್ದಾರೆ.

ಜಾಗತಿಕ ಸುದ್ದಿ ಸಂಸ್ಥೆಯಾಗಿರುವ ರಾಯಿಟರ್ಸ್‌‌ನಲ್ಲಿ ಡ್ಯಾನಿಶ್ ಸಿದ್ದೀಖಿ ಅವರು ಸೇವೆ ಸಲ್ಲಿಸುತ್ತಿದ್ದರು. ತಮ್ಮ “ಭಾರತದಲ್ಲಿ ಕೊರೊನಾ ಸಂಕಷ್ಠದ ಚಿತ್ರಗಳಿಗಾಗಿ” ರಾಯಿಟರ್ಸ್‌ ಪತ್ರಕರ್ತರಾದ ಅದ್ನಾನ್ ಅಬಿದಿ, ಅಮಿತ್ ದೇವ್, ಡ್ಯಾನಿಶ್ ಸಿದ್ದೀಖಿ ಮತ್ತು ಸನ್ನಾ ಇರ್ಷಾದ್ ಮಟ್ಟೂ ಅವರುಗಳು ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

38ರ ಹರೆಯದ ಡ್ಯಾನಿಶ್ ಸಿದ್ದೀಖಿ ಅವರು ಕಳೆದ ವರ್ಷ ಜುಲೈನಲ್ಲಿ ಅಫ್ಘಾನಿಸ್ತಾನಕ್ಕೆ ವರದಿಗೆಂದು ತೆರಳಿದ್ದಾಗ, ಕಂದಹಾರ್ ನಗರದ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಘರ್ಷಣೆಯ ವೇಳೆ ಕೊಲ್ಲಲ್ಪಟ್ಟರು. ಅವರ ಮಕ್ಕಳು ತಮ್ಮ ತಂದೆಯ ಪರವಾಗಿ ಬಹುಮಾನವನ್ನು ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ಇದು ಡ್ಯಾನಿಶ್ ಸಿದ್ದೀಖಿ ಅವರಿಗೆ ದಕ್ಕುತ್ತಿರುವ ಎರಡನೇ ಪುಲಿಟ್ಜರ್ ಪ್ರಶಸ್ತಿಯಾಗಿದೆ. ಈ ಹಿಂದೆ ಅವರಿಗೆ ರೋಹಿಂಗ್ಯಾ ಬಿಕ್ಕಟ್ಟಿನ ವರದಿಗಾಗಿ ರಾಯಿಟರ್ಸ್ ತಂಡದ ಭಾಗವಾಗಿ 2018 ರಲ್ಲಿ ಪುಲಿಟ್ಜರ್‌‌‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

ಡ್ಯಾನಿಶ್ ಸಿದ್ದೀಖಿ ಅವರು ಅಫ್ಘಾನಿಸ್ತಾನ ಸಂಘರ್ಷ, ಹಾಂಗ್ ಕಾಂಗ್ ಪ್ರತಿಭಟನೆಗಳು ಮತ್ತು ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿನ ಇತರ ಪ್ರಮುಖ ಘಟನೆಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದು ಜಾಗತಿಕವಾಗಿ ವರದಿ ಮಾಡಿದ್ದಾರೆ.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿರುವ ಡ್ಯಾನಿಶ್ ಸಿದ್ದೀಖಿ ಅವರು 2007 ರಲ್ಲಿ ಜಾಮಿಯಾದಲ್ಲಿನ AJK ಸಮೂಹ ಸಂವಹನ ಸಂಶೋಧನಾ ಕೇಂದ್ರದಿಂದ ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಡ್ಯಾನಿಶ್ ಸಿದ್ದೀಖಿ ಅವರು ದೂರದರ್ಶನ ಸುದ್ದಿ ವರದಿಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ನಂತರ ಫೋಟೋ ಜರ್ನಲಿಸ್ಟ್‌‌ ಆಗಿ ಬದಲಾದ ಅವರು, 2010 ರಲ್ಲಿ ಇಂಟರ್ನ್ ಆಗಿ ರಾಯಿಟರ್ಸ್ ಸೇರಿದ್ದರು.

ಈ ಮಧ್ಯೆ, ಡ್ಯಾನಿಶ್‌‌ ಸಿದ್ದೀಖಿ ಅವರೊಂದಿಗೆ ಪ್ರಶಸ್ತಿ ಹಂಚಿಕೊಂಡಿರುವ ಸನ್ನಾ ಇರ್ಷಾದ್ ಮಟ್ಟೂ ಅವರನ್ನು ವಲಸೆ ಅಧಿಕಾರಿಗಳ ಮೂಲಕ ವಿಮಾನ ನಿಲ್ದಾಣದಲ್ಲಿ ಸರ್ಕಾರ ತಡೆದಿದೆ. ಅದರಿಂದಾಗಿ ಅವರು ನ್ಯೂಯಾರ್ಕ್‌ಗೆ ತೆರಳಲು ಅಸಾಧ್ಯವಾಗಿದ್ದು, ಅವರು ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ.

ಈ ವರ್ಷದ ಆರಂಭದಲ್ಲಿ ಕೂಡಾ ಅವರನ್ನು ಫ್ರಾನ್ಸ್‌ಗೆ ಪ್ರಯಾಣಿಸುವುದನ್ನು ತಡೆಯಲಾಗಿತ್ತು. ಅವರು ಅಲ್ಲಿ ಪುಸ್ತಕ ಬಿಡುಗಡೆ ಮತ್ತು ಛಾಯಾಗ್ರಹಣ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನ್ಯೂಯಾರ್ಕ್‌ ತಡೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡುರುವ ಸನ್ನಾ ಅವರು,“ನನ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು ನಿಲ್ಲಿಸಲಾಗಿದೆ ಮತ್ತು ಸರಿಯಾದ ಅಮೆರಿಕ ವೀಸಾ ಮತ್ತು ಟಿಕೆಟ್ ಅನ್ನು ಹೊಂದಿದ್ದರೂ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸುವುದನ್ನು ನಿರ್ಬಂಧಿಸಲಾಗಿದೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...