Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...