Homeಮುಖಪುಟವಿರೋಧಕ್ಕೆ ಮಣಿದ ಸರ್ಕಾರ: ಶಾಲಾ ಪೋಷಕರಿಂದ 100 ರೂ ದೇಣಿಗೆ ಆದೇಶ ವಾಪಸ್

ವಿರೋಧಕ್ಕೆ ಮಣಿದ ಸರ್ಕಾರ: ಶಾಲಾ ಪೋಷಕರಿಂದ 100 ರೂ ದೇಣಿಗೆ ಆದೇಶ ವಾಪಸ್

- Advertisement -
- Advertisement -

ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಸಂಗ್ರಹಿಸುವುದಕ್ಕೆ ತೀವ್ರ ವಿರೋಧ ಬಂದ ಬೆನ್ನಲ್ಲೆ ಆ ಸುತ್ತೋಲೆಯನ್ನು ಕರ್ನಾಟಕ ಸರ್ಕಾರ ವಾಪಸ್ ಪಡೆದಿದೆ.

ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ರವರು ಸುತ್ತೋಲೆ ವಾಪಸ್ ಪಡೆಯುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದು, ಈ ಬಗ್ಗೆ ಮತ್ತೊಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಕ್ಟೋಬರ್ 19 ರಂದು ಸುತ್ತೋಲೆಯೊಂದನ್ನು ಹೊರಡಿಸಿ,  ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಘೋಷಿಸಿದ್ದರು. ಆ ಮೂಲಕ ಪೋಷಕರು ನೀಡುವ ದೇಣಿಗೆಯನ್ನು ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಎಸ್‌ಡಿಎಂಸಿಗಳು ದೇಣಿಗೆ ಸಂಗ್ರಹಿಸಬೇಕೆಂದು ಈ ಮೊದಲು ಸರ್ಕಾರ ಸೂಚಿಸಿತ್ತು.

ಈ ಯೋಜನೆಗೆ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆ ಮುಖಂಡರು, ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮಠಗಳಿಗೆ, ವಿವಾದಾತ್ಮಕ ಸ್ವಾಮೀಜಿಗಳಿಗೆ ನೂರಾರು ಕೋಟಿ ಹಣ ನೀಡುವ ಸರ್ಕಾರ ಬಡಮಕ್ಕಳ ಶಿಕ್ಷಣಕ್ಕೆ ಕೊಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಶಾಲೆಗಳಲ್ಲಿ ಅಗತ್ಯವಿರುವ ಖರ್ಚು ವೆಚ್ಚಗಳಿಗಾಗಿ ಪೋಷಕರಿಂದ 100 ರೂ ದೇಣಿಗೆ ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳ ಅಥವಾ ನನ್ನ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಹೇಳಿದ್ದರು.

ಮುಂದುವರಿದು ಈ ರೀತಿ ದೇಣಿಗೆ ಸಂಗ್ರಹಿಸಿಲು ಆರ್‌ಟಿಇ ಕಾಯ್ದೆಯಲ್ಲಿ ಅವಕಾಶವಿದೆ. ಎಸ್‌ಡಿಎಂಸಿಯವರು ಮನವಿ ಮಾಡಿದ್ದರು. ಈ ರೀತಿ ಸುತ್ತೋಲೆ ಹೊರಡಿಸುವುದಕ್ಕೆ ಅಧಿಕಾರಿಗಳಿಗೆ ಕಾನೂನಿನಲ್ಲಿ ಅವಕಾಶವಿದೆ. ಎಲ್ಲವನ್ನು ಸರ್ಕಾರದ ಗಮನಕ್ಕೆ ತರಬೇಕಾಗಿಲ್ಲ ಎಂದು ಸಹ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಸಚಿವರ ಈ ದ್ವಂದ್ವ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. “ಸಚಿವರಾಗಿ ಆಡಳಿತದ ಮೇಲೆ ಹಿಡಿತವಿಲ್ಲವೆಂದರೆ ಹೇಗೆ? ನಿಮಗಿಲ್ಲದಿದ್ದರೆ ಮುಖ್ಯಮಂತ್ರಿಗಳಿಗೂ ಇಲ್ಲವೇ? ಸರ್ಕಾರಿ ಶಾಲೆಗಳನ್ನು ನಡೆಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂಬು ಅಭಿಪ್ರಾಯಗಳು ಕೇಳಿಬಂದಿವೆ.

ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿರುವವರು ಬಡವರು, ದಲಿತರು ಮತ್ತು ಹಿಂದುಳಿದ ಸಮುದಾಯಗಳೆ ಹೆಚ್ಚಿದ್ದಾರೆ. ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ಬಸವಳಿದಿರುವ ಅಂತವರ ಹೊಟ್ಟೆ ಮೇಲೆ ಹೊಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ: ನಮ್ಮ ಪಾತ್ರವಿಲ್ಲವೆಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಾ ಅಯ್ಯೊಗ್ಯ ,ನಾಲಾಯಕ್ ಶಿಕ್ಷಣ ಸಚಿವನಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮತ್ತಿನ್ನೇನು ನಿರೀಕ್ಷೆ ಮಾಡೋಕೆ ಸಾಧ್ಯ?

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...