Homeಕರ್ನಾಟಕಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣದ ಆರೋಪಿಗಳನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್ಐ ಒತ್ತಾಯಿಸಿದ್ದು, ಸಂತ್ರಸ್ತರಿಗೆ ನಷ್ಟ ಪರಿಹಾರ ನೀಡಲು ಮತ್ತು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದೆ.

ಕಾಣಿಯೂರು ಪ್ರದೇಶದಲ್ಲಿ ಜವಳಿ ಮಾರಾಟಮಾಡಲು ತೆರಳಿದ್ದ ಮಂಗಳೂರಿನ ಅಡ್ಡೂರಿನ ವ್ಯಾಪಾರಸ್ಥರಾದ ರಫೀಕ್ ಮತ್ತು ರಮೀಝ್ ಎಂಬವರ ಮೇಲೆ ಬಿಜೆಪಿ ಬೆಂಬಲಿಗರು ಎಂದು ಆರೋಪಿಸಲಾಗಿರುವ ಗುಂಪೊಂದು ಮಾರಣಾಂತಿಕ ಹಲ್ಲೆಯನ್ನು ನಡೆಸಿತ್ತು. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಹಲ್ಲೆ ನಡೆಸಿದ ತಪ್ಪಿತಸ್ಥರನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿದ್ದು, ಜಿಲ್ಲಾ ಎಸ್‌ಪಿಗೆ ಶನಿವಾರ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ; 2 ಪ್ರಕರಣ ದಾಖಲು

“ಅಡ್ಡೂರಿನ ರಫೀಕ್ ಮತ್ತು ರಮೀಝ್ ಅನ್ನುವ ವ್ಯಾಪಾರಿಗಳು ಕಳೆದ ಹಲವಾರು ವರುಷಗಳಿಂದ ಊರಿಂದೂರಿಗೆ ಮನೆ ಮನೆ ತೆರಳಿ ಬೆಡ್ ಶೀಟ್ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ಅವರು ಕಾಣಿಯೂರು ಪ್ರದೇಶದಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಮುಸಲ್ಮಾನರು ಎಂಬ ಕಾರಣಕ್ಕೆ ಬಿಜೆಪಿ ಬೆಂಬಲಿತ ಅಕ್ರಮ ಕೂಟವೊಂದು ಅವರ ಮೇಲೆ ಮುಗಿಬಿದ್ದು ಕಬ್ಬಿಣದ ಸರಳು, ದೊಣ್ಣೆ ಇನ್ನಿತರ ಆಯುಧಗಳಿಂದ ಕೈಕಾಲು ಮುರಿಯುವಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದಲ್ಲದೆ, ಅವರ ಮೈಮೇಲೆ ವಾಹನಗಳನ್ನು ಹತ್ತಿಸಿ ಕೊಲೆಯತ್ನಕ್ಕೂ ಪ್ರಯತ್ನಿಸಿರುತ್ತಾರೆ” ಎಂದು ಡಿವೈಎಫ್‌ಐ ಹೇಳಿದೆ.

“ಸತತ ಎರಡು ಗಂಟೆಗಳ ಕಾಲ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ದೃಶ್ಯದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣ ನಡೆದು ಎರಡು ದಿನಗಳಾದರೂ ಪೊಲೀಸ್ ಇಲಾಖೆ ಈವರೆಗೆ ಯಾವೊಬ್ಬನನ್ನು ಬಂಧಿಸದೆ ಮತೀಯ ತಾರತಮ್ಯವನ್ನು ಎಸಗಿದೆ” ಎಂದು ಡಿವೈಎಫ್‌ಐ ಆಕ್ರೋಶ ವ್ಯಕ್ತಪಡಿಸಿದೆ.

ಮುಸಲ್ಮಾನರನ್ನು ಗುರಿಯಾಗಿಸಿ ನಿರಂತರ ನಡೆಯುವಂತಹ ದಾಳಿಗಳಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಘಟನೆ ಸಾಕ್ಷಿಯಾಗಿದೆ ಎಂದು ಹೇಳಿರುವ ಡಿವೈಎಫ್‌ಐ, “೧ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು ಹಾಗೂ ಮುಸ್ಲಿಂ ವ್ಯಾಪಾರಿಗಳಾದ ರಫೀಕ್ ಮತ್ತು ರಮೀಝ್ ಮೇಲಿನ ಮಾರಾಣಾಂತಿಕ ಹಲ್ಲೆಗೆ ಕಾರಣರಾದವರ ಮೇಲೆ ಕೊಲೆಯತ್ನ ಪ್ರಕರಣದಡಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಸರಕಾರ ಸಂತ್ರಸ್ತರಿಗೆ ನಷ್ಟ ಪರಿಹಾರವನ್ನು ನೀಡಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಸಂತ್ರಸ್ತರನ್ನು ಭೇಟಿಯಾದ ಡಿವೈಎಫ್‌ಐ ಮುಖಂಡರು

ಕಾಣಿಯೂರಿನಲ್ಲಿ ಗುಂಪು ಹಲ್ಲೆಗೊಳಗಾದ ಸಂತ್ರಸ್ತರನ್ನು ಡಿವೈಎಫ್‌ಐ ಮುಖಂಡರು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದ್ದಾರೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಡಿವೈಎಫ್ಐ ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ಮುಸ್ತಫ ಕಲ್ಲಕಟ್ಟೆ, ಆಸೀಫ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...