Homeಮುಖಪುಟಜಾರ್ಖಂಡ್‌: ಎಂಜಿನಿಯರ್‌‌ನನ್ನು ಅಪಹರಿಸಿ ಅತ್ಯಾಚಾರ ನಡೆಸಿದ 10 ದುಷ್ಕರ್ಮಿಗಳು

ಜಾರ್ಖಂಡ್‌: ಎಂಜಿನಿಯರ್‌‌ನನ್ನು ಅಪಹರಿಸಿ ಅತ್ಯಾಚಾರ ನಡೆಸಿದ 10 ದುಷ್ಕರ್ಮಿಗಳು

- Advertisement -
- Advertisement -

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನ ಚೈಬಾಸಾ ಏರೋಡ್ರೋಮ್ ಬಳಿ ಗುರುವಾರ ಸಂಜೆ ಹತ್ತು ಅಪರಿಚಿತ ವ್ಯಕ್ತಿಗಳು ಇಂಜಿನಿಯರ್‌‌‌ ಒಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

20 ವರ್ಷದ ಸಂತ್ರಸ್ತೆ ಯುವತಿ ತನ್ನ ಸ್ನೇಹಿತನೊಂದಿಗೆ ಸ್ಕೂಟರ್‌ನಲ್ಲಿ ಏರೋಡ್ರೋಮ್ ಪ್ರದೇಶಕ್ಕೆ ಹೋಗಿದ್ದಾಗ ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಆರೋಪಿಗಳು ಯುವತಿಯ ಸ್ನೇಹಿತನನ್ನು ಥಳಿಸಿ, ಹತ್ತಿರದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳನ್ನು ಬಂಧಿಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಪಶ್ಚಿಮ ಸಿಂಗ್‌ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.

“ಪ್ರಕರಣವು ಮುಫಾಸಿಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸಂತ್ರಸ್ತ ಯುವತಿಯ ಜೊತೆಗಿದ್ದ ಸ್ನೇಹಿತನ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿ ಪರಾರಿಯಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ಉಪ ವಿಭಾಗೀಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದು, ನಮಗೆ ಸಿಕ್ಕ ಮಾಹಿಗಳ ಅನ್ವಯ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಕೆಲವರನ್ನು ವಿಚಾರಣೆ ಕೂಡಾ ನಡೆಸಲಾಗಿದೆ” ಎಂದು ಅಶುತೋಷ್‌ ಹೇಳಿದ್ದಾರೆ.

ಜಿಲ್ಲೆಯ ಜಿಂಕ್‌ಪಾನಿ ಪ್ರದೇಶದ ನಿವಾಸಿಯಾಗಿರುವ ಸಂತ್ರಸ್ತ ಯುವತಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ ಮತ್ತು ಜಿಲ್ಲಾ ಕೇಂದ್ರ ಚೈಬಾಸಾದಲ್ಲಿ ಬಾಡಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...