Homeಮುಖಪುಟ5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

“ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

- Advertisement -
- Advertisement -

ಪೊಲೀಸರು ನಡೆಸಿದ ಗುಂಡಿನ ಕಾಳಗದಲ್ಲಿ ಕಳೆದ ಐದು ವರ್ಷಗಳಲ್ಲಿ 166 ಕ್ರಿಮಿನಲ್‌ಗಳು ಸಾವನ್ನಪ್ಪಿದ್ದಾರೆ ಮತ್ತು 4,453 ಮಂದಿ ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಅಪರಾಧಗಳನ್ನು ಒಂದಿಷ್ಟೂ ಸಹಿಸುವುದಿಲ್ಲ, ಅಪರಾಧಿಗಳು ಸ್ವತಂತ್ರವಾಗಿರಲು ಬಿಡುವುದಿಲ್ಲ. ಅವರು ಜೈಲಿನಲ್ಲಿರುತ್ತಾರೆ ಅಥವಾ ಕೊಲ್ಲಲ್ಪಡುತ್ತಾರೆ ಎಂಬ ಸರ್ಕಾರದ ನೀತಿಯ ಪರಿಣಾಮ ಇದು ಸಾಧ್ಯವಾಗಿದೆ” ಎಂದು ಯೋಗಿ ಹೇಳಿಕೊಂಡಿದ್ದಾರೆ.

ಲಕ್ನೋದಲ್ಲಿ ಪೊಲೀಸ್ ಸ್ಮಾರಕ ದಿನದ ಪರೇಡ್ ಅನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಕಳೆದ ಐದು ವರ್ಷಗಳಲ್ಲಿ 13 ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಇದು ಮುಂದುವರಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶ ಪೊಲೀಸರು ಆರೋಪಿತ ಅಪರಾಧಿಗಳೊಂದಿಗೆ ನೂರಾರು ಗುಂಡಿನ ಚಕಮಕಿಗಳಲ್ಲಿ ಭಾಗಿಯಾಗಿದ್ದಾರೆ.

ಆತ್ಮರಕ್ಷಣೆಗಾಗಿ ಅಥವಾ ಬಂಧಿಸಬೇಕಾದ ಅನಿವಾರ್ಯತೆ ಇದ್ದಾಗ ಮಾತ್ರವೇ ಗುಂಡು ಹಾರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರಗಳು ಅಥವಾ ಸಮರ್ಥನೆಗಳು ಟೀಕೆಗೂ ಒಳಗಾಗಿವೆ.

ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸ್ ಕೇಸ್ ಡೈರಿಗಳ ಪ್ರಕಾರ, “ಅಪರಾಧಿಗಳು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಕೊಲ್ಲುವ ಉದ್ದೇಶದಿಂದಲೇ ಗುಂಡು ಹಾರಿಸಿರುವುದು” ತಿಳಿದುಬರುತ್ತದೆ.

ಜುಲೈ 2021ರಲ್ಲಿ 87 ಮಾಜಿ ಅಧಿಕಾರಗಳ ಗುಂಪು ಪತ್ರ ಬರೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಆಡಳಿತವನ್ನು ಟೀಕಿಸಿದ್ದ ಅಧಿಕಾರಿಗಳು “ಕಾನೂನಿನ ನಿಯಮದ ಸ್ಪಷ್ಟ ಉಲ್ಲಂಘನೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

“ಆದಿತ್ಯನಾಥ್ ನೇತೃತ್ವದ ಎನ್‌ಕೌಂಟರ್ ಅಭಿಯಾನವು ಹೊಸ ಗೆರೆಗಳನ್ನು ದಾಟಿದೆ. ಏಕೆಂದರೆ ಈ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಸಣ್ಣ ಅಪರಾಧಿಗಳು ಅಥವಾ ಮುಗ್ಧರು ಎಂದು ಅಂಕಿಅಂಶಗಳು ತೋರಿಸುತ್ತಿವೆ. ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ” ಎಂದು ಅಧಿಕಾರಿಗಳು ಬಹಿರಂಗ ಪತ್ರದಲ್ಲಿ ತಿಳಿಸಿದ್ದರು. “ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

2017 ಮತ್ತು 2020ರ ನಡುವೆ, ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಸುಮಾರು 37% ಮುಸ್ಲಿಮರಿದ್ದಾರೆ. ಈ ಸಮುದಾಯವು ಉತ್ತರ ಪ್ರದೇಶದ ಜನಸಂಖ್ಯೆಯಲ್ಲಿ 20% ಕ್ಕಿಂತ ಕಡಿಮೆ ಇದೆ.

ಶುಕ್ರವಾರ ಮಾಡಿದ ಭಾಷಣದಲ್ಲಿ ಆದಿತ್ಯನಾಥ್ ಅವರು, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 244 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ ಮತ್ತು 133 ಪೊಲೀಸ್ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತ್ತೆ ಇಷ್ಟು ಸುವ್ಯಸ್ಥೆ ಮಾಡಿದ್ದರು ,ಹೆಣ್ಣು ಮಕ್ಕಳು ಅದರಲ್ಲಿಯೂ ದಲಿತರು, ಹಿಂದುಳಿದವರು,ಮುಸಲ್ಮಾನರ ಮೇಲೆ ಅತ್ಯಾಚಾರ,ಅನಾಚಾರ ಇನ್ನು ಜಾಸ್ತಿಯಾಗುತ್ತಿದೆ, ಇಡೀ ಪ್ರಪಂಚದಲ್ಲೇ ಕೇಳರಿಯದಂತೆ ,ಅತ್ಯಾಚಾರಕ್ಕೊಳಗಾಗಿ ಮೃತಳಾದ ದಲಿತ ಹೆಣ್ಣು ಮಗಳನ್ನ ರಾತ್ರೋ ರಾತ್ರಿ ಸುಟ್ಟು ಹಾಕಿದಿರಲ್ಲಾ ಇದಾ ನಿನ್ನ ಕಾರ್ಯಕ್ಷಮತೆ? ನೋಡೋದಕ್ಕೆ ನೀನೇ ಒಳ್ಳೆ ಪೋಕರಿ ಇದ್ದ ಹಾಗೆ ಇದ್ದೀಯಾ ,ಇದನ್ನೆಲ್ಕಾ ಸಾಧನೆ ಎಂದು ಹೇಳಿಕೊಳ್ಳೋಕೆ ನಾಚಿಕೆಯಾಗೋದಿಲ್ವಾ?

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...