Homeಕರ್ನಾಟಕಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

ಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

- Advertisement -
- Advertisement -

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಹಲ್ಲೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ.

“ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ” ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

“ನಿನ್ನೆ 173 ಜನಕ್ಕೆ ನಿವೇಶನ ಹಂಚಿಕೆ ಮಾಡಲಾಯ್ತು. ಇನ್ನು 9-10 ಸೈಟ್​ಗಳಿದ್ದು, ಸುಮಾರು 25 ಜನರು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂ. ಯಾರಿಗೋ ಕೊಟ್ಟಿದ್ದೀನಿ ಅಂದ್ರು.  ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ” ಎಂದು ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಮಹಿಳೆಯ ಕೆನ್ನೆಗೆ ಉದ್ದೇಶಪೂರ್ವಕವಾಗಿ ಹೊಡೆದಿರುವಂತೆ ಕಂಡು ಬರುತ್ತಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಸೋಮಣ್ಣನವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್‌ ಗೂಂಡೂರಾವ್‌ ಟ್ವೀಟ್ ಮಾಡಿದ್ದು, “ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದಿದ್ದಾರೆ.

“ಅಂದು ಅರವಿಂದ್ ಲಿಂಬಾವಳಿ, ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ, ಎಲ್ಲಿದೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಸರ್ಕಾರ? ಇದೇನಾ ಪ್ರಜಾಪ್ರಭುತ್ವ? ನಿಮ್ಮ ಮನೆಯ ಹೆಣ್ಣುಮಕ್ಕಳ ಮೇಲೂ ಹೀಗೆ ಹಲ್ಲೆ ಮಾಡ್ತೀರಾ? ಇವರ ಪ್ರಕಾರ ಹೆಣ್ಣು ಅಂದ್ರೆ ಏನು?” ಎಂದು ಯುವ ಕರ್ನಾಟಕ ಫೇಸ್‌ಬುಕ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...